#
nil
ಒಂದು ಕಾಲಘಟ್ಟದ ಐತಿಹಾಸಿಕ ಘಟನೆಗಳು. ಸಾಂಸ್ಕೃತಿಕ ಸಂಗತಿಗಳು. ಅಂಥ ಘಟನೆಗಳಿಗೆ ಲೇಖಕರ ಪ್ರತಿಕ್ರಿಯೆಗಳು ಮತ್ತು ಬರೆಯುವ ಕಾಲದಲ್ಲಿ ಉಂಟಾದ ಪಲ್ಲಟಗಳ ತೌಲನಿಕ ಚಿಂತನೆಗಳೂ ಆತ್ಮಕಥನದಲ್ಲಿ ಮುಖ್ಯವಾಗುತ್ತವೆ. ಈ ರೀತಿಯ ದಾಖಲೆಗಳು ಮುಂದಿನ ತಲೆಮಾರಿನ ಓದುಗರಿಗೆ ಒಂದು ಕೊಡುಗೆಯಾಗುತ್ತವೆ. ಹೇಳುವ ರೀತಿಯಲ್ಲಿ ಅಥವಾ ರಚನಾ ತಂತ್ರಗಳಲ್ಲಿ ಲೇಖಕರಿಂದ ಲೇಖಕರಿಗೆ ವ್ಯತ್ಯಾಸವಾಗುತ್ತ ಹೋಗಬಹುದು. ಆದರೆ ಮೂಲತತ್ವ ಎಲ್ಲದಕ್ಕೂ ಒಂದೇ. ಯಶಸ್ಸಿನ ಹಾದಿಯಲ್ಲಿ ಎದುರಿಸಿದ ಕಷ್ಟಗಳಿರಬಹುದು. ಪಡೆದ ಯಶಸ್ಸಿನ ಫಲವಾಗಿ ಸವಿದ ಸಂತೋಷದ ಕ್ಷಣಗಳಿರಬಹುದು. ಏನಿದ್ದರೂ ಹೇಳುವ ವಿಷಯಗಳು ಓದುಗರಿಗೆ ಸ್ಫೂರ್ತಿದಾಯಕವಾಗಿರಬೇಕು, ಮುಂದಿನ ತಲೆಮಾರಿನ ಮಂದಿಗೆ ಪ್ರೇರಣೆ ನೀಡುವಂತಿರಬೇಕು ಅನ್ನುವುದರಲ್ಲಿ ಎರಡು ಮಾತಿಲ್ಲ. ಆತ್ಮಕಥನದಲ್ಲಿ ಕಲ್ಪನೆಯ ಕಟ್ಟು ಕಥೆಗಳಿಗೆ ಅವಕಾಶವಿಲ್ಲ. ವಾಸ್ತವದಲ್ಲಿ ಏನು ನಡೆಯಿತು ಅನ್ನುವುದಷ್ಟೇ ಇಲ್ಲಿ ಮುಖ್ಯ. ಉದ್ಯೋಗ, ಗೃಹಕೃತ್ಯ, ಸಂಸಾರ ನಿರ್ವಹಣೆಯ ಹೊಣೆಗಳ ನಡುವೆಯೂ ಬರಹಗಾರ್ತಿಯಾಗಿ ಓರ್ವ ಮಹಿಳೆ ಯಶಸ್ವಿಯಾಗಬಲ್ಲಳು ಎಂಬುದಕ್ಕೆ 'ಅಂತರಂಗದ ಸ್ವಗತ' ಕೃತಿಯೇ ಸಾಕ್ಷಿ.
ತಾನೊಬ್ಬ ಆಗೋಸ್ಟಿಕ್. ಹಾಗೆಂದುಕೊಂಡ ಪರ್ವನ ಮನಸು ಗೊಂದಲದ ಗೂಡು. ಆಜೇಯತಾವಾದಿ ಎನ್ನುತ್ತಾರಂತೆ ಕನ್ನಡದಲ್ಲಿ ದೇವರಲ್ಲಿ ಅತಿಯಾಗಿ ವಿಶ್ವಾಸವಿರದ, ನಾಸ್ತಿಕತೆಯನ್ನೂ ಒಪ್ಪದ ಮನಸ್ಥಿತಿ ತನ್ನದು. ದೇವರು ಇರಲಿ, ಇರದಿರಲಿ ತನ್ನ ಬದುಕಿಗೆ ವ್ಯತ್ಯಾಸವೇನೂ ಆಗದು ಎನ್ನುವ ತರ್ಕ. ಅವನಿದ್ದರೆ ಅವನ ಪಾಡಿಗಿರಲಿ, ನಾನು ನನ್ನ ಪಾಡಿಗೆ ಎಂದುಕೊಂಡವನ ಬದುಕಲ್ಲಿ ಏನು ನಡೆಯುತ್ತಿದೆ ಎನ್ನುವುದು ಅರ್ಥವಾಗದ ಸ್ಥಿತಿ ಅವನಿಗೆ. ಪರಮ ಆಸ್ತಿಕರಾದ ಹೆತ್ತವರು ತನ್ನ ತರ್ಕವನ್ನು ಅಲ್ಲಗಳೆಯುತ್ತಿದ್ದಾರೆ. ಗೆಳೆಯನಿಗೆ ವಿಷಯದ ಗಂಭೀರತೆಯನ್ನು ವಿವರಿಸುವುದು ಕಷ್ಟ. ಚಿಕ್ಕಪ್ಪನಿಗೆ ವಿವರಿಸಿ ಅರ್ಥ ಮಾಡಿಸೋಣ ವೆಂದರೆ ಅವನಿನ್ನೂ ಆಘಾತದಿಂದ ಚೇತರಿಸಿಕೊಂಡಿಲ್ಲ. ಎಲ್ಲಕ್ಕಿಂತ ಅಚ್ಚರಿಯೆಂದರೆ ಸ್ಮಶಾನದಲ್ಲಿ ಕೊನೆಯವರೆಗೂ ತನ್ನ ಜೊತೆಗೇ ಇದ್ದ ಹೆಂಡತಿಗೆ ಏನೆಂದರೇ ಏನೂ ನೆನಪಿಲ್ಲ. ಆಕೆ ಕೂಡ ಲೋಕಿಯ ಸಾವು ಸಹಜ ಸಾವು ಎನ್ನುತ್ತಾಳೆ. ಅವನ ಸಾವಿಗೆ ಮಾನಸಿಕ ಕಾಯಿಲೆಯೇ ಕಾರಣ ಎಂದು ವಾದಿಸುತ್ತಾಳೆ. ಊಹುಂ..!! ಖಂಡಿತ ಇಲ್ಲ, ಅದು ಸಹಜ ಸಾವಲ್ಲ. ಮೇಲ್ನೋಟಕ್ಕೆ ಸಹವೆನ್ನಿಸಿದರೂ ಅಲ್ಲೊಂದಿಷ್ಟು ಅನುಮಾನಗಳಿಗೆ ಅವಕಾಶವಿದೆ. ಅಲ್ಲೊಂದು ವಿಲಕ್ಷಣತೆಯಿದೆ. ಯಾರ ಗಮನಕ್ಕೂ ಬಾರದ, ಒಂದೇನೋ ಅವ್ಯಕ್ತ ಅಸಹಜತೆಯಿದೆ. ಅದು ನಿಗೂಢ..!! ಅದು ವಿಕ್ಷಿಪ್ತ...!! ಅದು ಮನುಷ್ಯ ಸಹಜವಾದ ಸಾವಲ್ಲ, ಅದು ಅತಿಮಾನುಷ....!! ISBN
ಅಗ್ನಿ ಶ್ರೀಧರ್
ಕನ್ನಡದ ಮಹತ್ವದ ಹಿರಿಯ ಲೇಖಕಿಯರಲ್ಲೊಬ್ಬರಾದ ವಸುಮತಿ ಉಡುಪರವರ ಕಥಾಜಗತ್ತು ವಿಶಿಷ್ಟವಾದದ್ದು. ಸಂದುಹೋಗುತ್ತಿರುವ ಒಂದು ಕಾಲಘಟ್ಟದ ತಲೆಮಾರಿನ ಚಿತ್ರಣವನ್ನು ಕಟ್ಟಿಕೊಡುವ ವಸುಮತಿ ಉಡುಪರವರು ಅಪ್ಪಟ ಕಥೆಗಾರ್ತಿ, ನೇರವಾಗಿ, ಸಹಜ ಹದದಲ್ಲಿ ಕಂಡಿರಿಸಿರುವ ಇವರ ಪಾತ್ರಗಳು ಹೆಣ್ಣುಮನದ ನಾನಾಭಾವಗಳ ರಂಗಶಾಲೆ, ಪಾತ್ರಗಳ ದಿಟ್ಟತನ, ನೇರವಂತಿಕೆ, ಬದುಕನೆದುರಿಸುವ ಛಲ, ತಾಕಲಾಟಗಳ ನಡುವೆಯೂ ಗುರಿಯನ್ನು ಕಂಡುಕೊಳ್ಳುವ ಆಶಾವಾದ ಇಲ್ಲಿ ಅಸಾಧಾರಣ ರೀತಿಯಲ್ಲಿ ಅಭಿವ್ಯಕ್ತಗೊಂಡಿದೆ. ಬದುಕಿನ ಹತ್ತು ಹಲವಾರು ಹಳವಂಡಗಳಲ್ಲಿ, ಬಾಳಿನ ಕುಲುಮೆಯಲ್ಲಿ ಬೆಂದು ನೊಂದರೂ ತಮ್ಮದೇ ರೀತಿಯಲ್ಲಿ ಪ್ರತಿರೋಧಿಸುತ್ತಾ, ಜೀವನದ ಕಟು ಸತ್ಯವನ್ನು ಅರಿಯುತ್ತಾ ಮಾನವೀಯ ಮೂರ್ತಿಗಳಾಗಿ ನಿಲ್ಲುವ ಇಲ್ಲಿನ ಹಲವಾರು ಪಾತ್ರಗಳ ಕಥೆ ಹೃದಯಸ್ಪರ್ಶಿಯಾಗಿ ಚಿತ್ರಿತಗೊಂಡಿದೆ.
'ಇಲ್ಲಿಂದ ಮುಂದೆಲ್ಲ ಕಥೆ' ಇತ್ತೀಚಿನ ಕೆಲವು ವರ್ಷಗಳಲ್ಲಿ ಕನ್ನಡ ಕಥಾಲೋಕದ ಚಾಚುಗಳ ಅತ್ಯುತ್ತಮ ಮಾದರಿಯಾಗಿದೆ. ಈ ಪ್ರಯತ್ನಕ್ಕೆ ಹುಡುಕಾಟಕ್ಕೆ ಎರಡು ಲಕ್ಷಣಗಳಿವೆ. ಒಂದು, ತಾತ್ವಿಕವಾಗಿ ಮತ್ತು ತಾಂತ್ರಿಕವಾಗಿ ಈ ತನಕದ ಕನ್ನಡ ಕಥಾಪರಂಪರೆಯ ಧಾತುಗಳನ್ನೆಲ್ಲ ಒಳಗೊಳ್ಳುವ ಹಂಬಲ ಮತ್ತೊಂದು, ಮಾನುಷಲೋಕವನ್ನು ಕರಾರುಗಳಿಲ್ಲದೆ ಒಳಗೊಳ್ಳುವ ತವಕ ಕಥೆಗಾರರಾಗಿ ಮೊದಲ ಸಂಕಲನದಿಂದಲೂ ರಘುನಾಥರು ಉಳಿಸಿಕೊಂಡು ಬಂದಿರುವ ಉತ್ಕಟತೆ ಮತ್ತು ತನ್ಮಯತೆ ಅವರನ್ನು ಕನ್ನಡದ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರನ್ನಾಗಿಸಿವೆ. ಪ್ರತಿಭೆಯ ಜೊತೆಗೆ ಬರವಣಿಗೆಯಲ್ಲಿ ಅವಸರ ತೋರಿಸದೇ ಇವರು ಕಾಯ್ದುಕೊಂಡು ಬಂದಿರುವ ಸಂಯಮದ ಪಾತ್ರವೂ ದೊಡ್ಡದು. ರಘುನಾಥರ ಬರವಣಿಗೆಯ ಬಗ್ಗೆ ವ್ಯಕ್ತಿತ್ವದ ಬಗ್ಗೆ ನನಗೆ ಸಕಾರಣವಾದ ಮೆಚ್ಚುಗೆ. ಅವರ ಸಾಹಿತ್ಯಕ ಸಂವೇದನೆ ಮತ್ತು ಸಾಂಸ್ಕೃತಿಕ ಎಚ್ಚರ ಇದಕ್ಕೆ ಮುಖ್ಯ ಕಾರಣ, ಇತ್ತೀಚಿನ ದಿನಗಳಲ್ಲಿ ಸಮಕಾಲೀನ ಬೆಳವಣಿಗೆಗಳನ್ನು ಕುರಿತ ಅವರ ಪ್ರತಿಕ್ರಿಯೆಗಳ ಸ್ಪಷ್ಟತೆ ಮತ್ತು ನಿರ್ಭಯವಾದ ಮಾತುಗಳು ಎರಡೂ ಅವರ ಮೇಲಿನ ಭರವಸೆ ಮತ್ತು ಗೌರವವನ್ನು ಹೆಚ್ಚಿಸುತ್ತಿವೆ.
ಲಂಕೇಶರು ಒಮ್ಮೆ ಅತಿಯಾದ ವೈಚಾರಿಕತೆ ಕೂಡ ಬದುಕನ್ನು ಶುಷ್ಕವಾಗಿ ಮಾಡುತ್ತದೆ' ಎಂದು ಹೇಳಿದ್ದರು. ಆ ಮಾತನ್ನು ರಘುನಾಥ್ ಅವರ ಬರವಣಿಗೆ ನೆನಪಿಸುವಂತಿದೆ. ಭಾರತದ ಮಟ್ಟಿಗೆ ಪತ್ರಿಕೋದ್ಯಮದಲ್ಲಿ ಎರಡು ದೊಡ್ಡ ಮನಸ್ಸುಗಳು ಈ ದೇಶವನ್ನು ಕಟ್ಟುವಲ್ಲಿ ಕೆಲಸ ಮಾಡಿವೆ. ಒಂದು ಗಾಂಧಿ. ಇನ್ನೊಂದು ಬಾಬಾ ಸಾಹೇಬ್ ಅಂಬೇಡ್ಕರ್, ಈ ಎರಡೂ ಮನಸುಗಳ ಕನಸುಗಳ ನೆರಳು ರಘುನಾಥರ ಮನಸ್ಸಿನಲ್ಲಿ ಹಾಯ್ದುಹೋಗಿದೆ ಎಂಬುದನ್ನು ಇಲ್ಲಿನ ಲೇಖನಗಳು ಸಾಕ್ಷೀಕರಿಸುತ್ತವೆ. ಇಳಿಸಲಾಗದ ಶಿಲುಬೆ' ಕೃತಿಯ ಶೀರ್ಷಿಕೆಯೇ ಜಗದ ದುಃಖಗಳನ್ನು ಅರಿಯುವ ಮಾತನ್ನು ಹೇಳುತ್ತಿದೆ. ಈ ಹೊತ್ತಿನ ಮತ್ತು ಯಾವತ್ತಿನ ಈ ದೇಶದಲ್ಲಿ ಜಾತಿ, ಧರ್ಮ, ಕೋಮುವಾದ ಮತ್ತೆ ಮತ್ತೆ ಪೂತ್ಕರಿಸುತ್ತಲೇ ಇವೆ. ಇವುಗಳನ್ನು ಬೇರುಸಹಿತ ಕೀಳಲು ಸಾಧ್ಯವಿಲ್ಲ. ಆದರೆ. ಕೊನೆ ಪಕ್ಷ ಹದಮಾಡಲು ಪ್ರಯತ್ನಿಸಬಹುದು. ಹಾಗೆ ಹದ ಮಾಡುವ ಕೆಲಸವನ್ನು ರಘುನಾಥ್ ಬರೆಯುವ ಮೂಲಕ ಮಾಡುತ್ತಿದ್ದಾರೆ. ಕೆಲವು ಲೇಖನಗಳಲ್ಲಿ ಕೆಲವು ವಿಷಯಗಳ ಬಗ್ಗೆ ಕಠಿಣ ಶಬ್ದಗಳಲ್ಲಿ ಹೇಳಿದ್ದಾರಾದರೂ, ಯಾರ ವಿರುದ್ದ ಹೇಳಿದ್ದಾರೋ ಅವರು ಅದನ್ನು ಒಪ್ಪಿಕೊಳ್ಳುವ ರೀತಿಯಲ್ಲಿ ಅವರ ಬರವಣಿಗೆಯಿದೆ. ಅಕ್ಷರಗಳನ್ನು ವಾಕ್ಯ ಮಾಡುವಾಗ ತುಂಬ ಸೂಕ್ಷ್ಮವಾಗಿ ಬರೆಯುತ್ತಾ, ಆ ವಾಕ್ಯ ಮಲಿನವಾಗದಂತೆ ಎಚ್ಚರವಹಿಸುವುದು ರಘುನಾಥ್
ಬನ್ನಂಜೆ ಗೋವಿಂದಾಚಾರ್ಯ
Showing 1 to 30 of 199 results