ಯಂಡಮೂರಿ ವೀರೇಂದ್ರನಾಥ್ ಯಂಡಮೂರಿ ವೀರೇಂದ್ರನಾಥ್ ಒಬ್ಬ ಭಾರತೀಯ ಕಾದಂಬರಿಕಾರರು ಮತ್ತು ಚಿತ್ರಕಥೆಗಾರರು. ಇವರು ತೆಲುಗು ಭಾಷೆಯಲ್ಲಿನ ಕೃತಿಗಳಿಗೆ ಹೆಸರುವಾಸಿಯಾಗಿದ್ದಾರೆ.ಅವರು ತಮ್ಮ ಸಾಮಾಜಿಕವಾಗಿ ಸಂಬಂಧಿತ ಬರಹಗಳು ಮತ್ತು ಯೂಟ್ಯೂಬ್ ವೀಡಿಯೊಗಳೊಂದಿಗೆ ಯುವ ಪೀಳಿಗೆಯ ಮೇಲೆ ಪ್ರಭಾವ ಬೀರುತ್ತಾರೆ. ಅವರ ಬರಹಗಳಲ್ಲಿ ಅವರು ಬಡತನ, ಪೂರ್ವಾಗ್ರಹಗಳು ಮತ್ತು ಮೂಢನಂಬಿಕೆಗಳಂತಹ ಭಾರತದಲ್ಲಿನ ಅನೇಕ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಮತ್ತು ಸಾಮಾಜಿಕವಾಗಿ ಜವಾಬ್ದಾರಿಯುತವಾಗಿರಲು ಜನರನ್ನು ಪ್ರೋತ್ಸಾಹಿಸುತ್ತಾರೆ. ಅವರು ಸಾಹಿತ್ಯದ ಆದರ್ಶವಾದಿ ಮತ್ತು Read More...
nil
#
“ಬೇವಾಚ್” ಕತ್ತಲಾಗುತ್ತಿದ್ದಂತೆ ಎಚ್ಚರವಾಗುವ ಲೈವ್ ಬ್ಯಾಂಡಿನ ಝಗಮಗಿಸುವ ಬೆಳಕಿನಡಿಯಲ್ಲಿ, ಕಿವಿಗಡಚಿಕ್ಕುವ ಅಬ್ಬರದ ಹಾಡಿಗೆ ಅರೆಬರೆ ಬಟ್ಟೆತೊಟ್ಟು ಮೈ ಬಳಕಿಸುತ್ತಾ, ಗ್ರಾಹಕರನ್ನು ಕಣ್ಣಲ್ಲೇ ಸೆಳೆಯುವ ಯುವತಿಯೊಬ್ಬಳ ಸುತ್ತ ಹೆಣೆದ ಕಾದಂಬರಿ ಪರಿಸ್ಥಿತಿ ಮತ್ತು ಜವಾಬ್ದಾರಿ ಒಬ್ಬ ಮುಗ್ಧ ಹೆಣ್ಣನ್ನು ಯಾವ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ; ಮುಂದೆ, ಬದಲಾಗುವ ಅವಕಾಶ ಇದ್ದರೂ ಹಣದಾಸೆಗೆ ಬಿದ್ದ ಅವಳು ಯಾವ್ಯಾವ ಕುಕೃತ್ಯದಲ್ಲಿ ತೊಡಗಿಕೊಳ್ಳುತ್ತಾಳೆ ಎಂಬುದರ ಜೊತೆಗೆ ಬಡತನ, ಮೋಸ, ವ್ಯಭಿಚಾರ, ಗಂಡು ಮಗುವಿನ ವ್ಯಾಮೋಹ, ಪೊಲೀಸರ ಕ್ರೌರ್ಯ, ಕ್ರೈಂ ಮಿಗಿಲಾಗಿ ಬೆಲೆವೆಣ್ಣುಗಳ ಸಹವಾಸ ಮಾಡುವುದರಿಂದಾಗುವ ಪರಿಣಾಮವನ್ನು ಕಾದಂಬರಿಯಲ್ಲಿ ಕಾಣಬಹುದಾಗಿದೆ.
ಡಾ ವೀಣಾ ಎಸ್ ಭಟ್
ನರಸಿಂಹಮೂರ್ತಿ ಎಂ ಎಸ್
ಜೆ.ಎನ್. ಜಗನ್ನಾಥ್ ಅವರ ಖಜಾನೆ ವ್ಯವಸ್ಥಾಪನೆ/ನಿರ್ವಹಣೆ ಕುರಿತಾದ ಈ ಪುಸ್ತಕ ಕನ್ನಡದಲ್ಲಿ ಒಂದು ವಿಶೇಷ ಪ್ರಯತ್ನವಾಗಿದೆ. ಸಾಮಾನ್ಯರಿಗೂ ಅರ್ಥವಾಗುವಂತೆ ವಿದೇಶೀ ವಿನಿಮಯ, ಖಜಾನೆ ನಿರ್ವಹಣೆಯಂತಹ ವಿಷಯಗಳನ್ನು ತಿಳಿಸುವುದರಲ್ಲಿ ಈ ಕೃತಿ ಯಶಸ್ವಿಯಾಗಿದೆ. ಜೆ.ಎನ್. ಜಗನ್ನಾಥ್ ಅವರು ಎಂಕಾಂ, ಎಂಬಿಎ, ಎಂಎ, ಸಿಎಐಐಬಿ, ಖಜಾನೆ ವ್ಯವಸ್ಥಾಪನದಲ್ಲಿ ಡಿಪ್ಲೋಮೋ, ಮಾನವ ಸಂಪನ್ಮೂಲ ವ್ಯವಸ್ಥಾಪನದಲ್ಲಿ ಡಿಪ್ಲೋಮೋ ಹಾಗೂ ಫ್ಲಾರಿಡಾದ ವಿಶ್ವವಿದ್ಯಾನಿಲಯದಿಂದ ಖಜಾನೆ ವ್ಯವಸ್ಥಾಪನ ವಿಷಯದಲ್ಲಿ ಡಾಕ್ಟರೇಟ್ ಪದವಿಗಳನ್ನು ಪಡೆದಿದ್ದಾರೆ. 25ವರ್ಷಗಳ ಕಾಲ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನಲ್ಲಿ ಸೇವೆ ಸಲ್ಲಿಸಿರುವ ಶ್ರೀಯುತರು, ಆರು ವರ್ಷಗಳ ಕಾಲ ಖಜಾನೆ ವ್ಯವಸ್ಥಾಪನದ ವಹಿವಾಟು ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದವರು. ನಂತರ ಭಾರತದ ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆಯಲ್ಲಿ 14 ವರ್ಷಗಳ ಕಾಲ ತರಬೇತಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. 50ಕ್ಕೂ ಹೆಚ್ಚು ದೇಶಗಳಿಗೆ ಭೇಟಿಕೊಟ್ಟು ತಮ್ಮ ಕಂಪನಿಯ ಬ್ಯಾಂಕಿಂಗ್ ತಂತ್ರಾಂಶದ ಕುರಿತು ತರಬೇತಿ ನೀಡಿದ್ದಾರೆ.
NA
Showing 3091 to 3120 of 4981 results