ಲೇಖಕಿ ಅಕ್ಷಥಾ ಪಾಂಡವಪುರ ಅವರ ಕತಾಸಂಕಲನ ಲೀಕ್ಔಟ್. ಈ ಸಂಕಲನದಲ್ಲಿ 11 ಕತೆಗಳಿವೆ. 2010 ರಿಂದ ಬರೆದಂತದ ಕಥೆಗಳು ಈ ಪುಸ್ತಕದಲ್ಲಿದ್ದು ಹೆಣ್ಣಿನ ಆಸೆ ಅಕಂಶೆ, ತಳಮಳ, ಬದುಕಿನ ಸಂಘರ್ಷ. ಸಂಬಂಧಗಳ ಏಣಿಗೆ ಎಷ್ಟು ಕಾಲಿಗಳು ಎಂಬ ಲೆಕ್ಕಾಚಾರದಲ್ಲಿರುವ ಈ ಕಥೆಗಳು ಕೆಲವು ವಾಸ್ತವಕ್ಕೆ ಹತ್ತಿರವಿದೆ ಎನ್ನಿಸಿದರೆ ಕೆಲವ ರಂಜನಿಯವಾಗಿವೆ. ಮುಖವಾಡಗಳ್ಳನ್ನು ಧರಿಸಿ ತುಂಬಾ ಸೀರಿಯಸ್ ಆಗಿ ಬದುಕು ನಡೆಸುವ, ಸದಾ ನಗುಮುಖವನ್ನು ಸಮಾಜಕ್ಕೆ ತೋರಬಯಸುವ ಎಲ್ಲರೂ ಕಾಣುವ ಕನಸುಗಳ ಸಂಖ್ಯೆಯಲ್ಲಿ fantasy ಯೇ ಹೆಚ್ಚು.... ಹಾಗೆ ಇಲ್ಲಿಯೂ ಸಹಾ ಜೀವನ & ಕನಸುಗಳ ಸಂಘರ್ಷದಲ್ಲಿ ಪಾತ್ರಗಳು ಹೇಗೆ ಕಾಣುತ್ತವೆ ಎಂಬುದನ್ನು ಹೆಚ್ಚು ಕಥೆಗಳಲ್ಲಿ ಕಾಣಬಹುದು..
#
nil
ಬೇರೆಯವರಿಗೆ ಕತೆ ಹೇಳುವ, ಬೇರೆಯವರ ಕತೆ ಕೇಳಿಸಿಕೊಳ್ಳುವ ಕಲೆ ಸಿದ್ಧಿಸಿಕೊಂಡಿರುವ ಏಕೈಕ ಪ್ರಾಣಿ ಮನುಷ್ಯ. ಕತೆಗಳಿರುವವರೆಗೂ ಮನುಷ್ಯನಿರುತ್ತಾನೆ. ಈಗ ಸ್ಮಾರ್ಟ್ ಯುಗ. ಎಲ್ಲರ ಕೈಯಲ್ಲೊಂದು ಸ್ಮಾರ್ಟ್ ಫೋನು. ಎಲ್ಲರ ಎದೆಯೊಳಗೆ ಕತೆಗಳಿರುವ ಕಾಲ. ಇಂತಹ ಕತೆಗಳನ್ನು ಸಶಕ್ತವಾಗಿ ದಾಟಿಸುವ ಮಾಧ್ಯಮ ದೃಶ್ಯಮಾಧ್ಯಮ. ಬನ್ನಿ ನಿಮ್ಮೊಳಗಿನ ಕತೆಗಳನ್ನು ದೃಶ್ಯಮಾಧ್ಯಮಕ್ಕೆ ತರೋಣ, ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ!
ಸೋತವರಿಗೆ, ಗೆಲುವನ್ನು ಎದುರು ನೋಡುವವರಿಗೆ, ಸಮಾನ ಮನಸ್ಕರಿಗೆ ಉಡುಗೊರೆಯಾಗಿ ನೀಡಲು ಈ ಕೃತಿ ಬೆಸ್ಟ್ ಆಯ್ಕೆ. ನಮ್ಮ ಬದುಕು ಹುಟ್ಟಿನಿಂದಲೇ ಶುರುವಾಗಬಹುದು. ಆದರೆ ಸೋಲು-ಗೆಲುವುಗಳು ನಿರ್ಧಾರವಾಗುವುದು ನಮ್ಮ ಆಲೋಚನೆಗಳ ಮೇಲೆಯೇ.. ಆಲೋಚನೆಗಳು ಇಲ್ಲದೆ ಬದುಕಿಲ್ಲ! ಬದುಕಿನ 360 ಕೋನದಲ್ಲೂ ಯೋಚಿಸುವಂತಹ ಶಕ್ತಿಯನ್ನು ನಾವು ಗಳಿಸದಿದ್ದರೆ ಖಂಡಿತ ಸ್ಪರ್ಧೆಯ ಸಾಲಿನಿಂದ ತುಂಬಾ ಹಿಂದೆ ಉಳಿದುಬಿಡುತ್ತೇವೆ. ಇವತ್ತು ಯಾರಿಗೂ ಹಿಂದೆ ಉಳಿಯಲು ಇಷ್ಟವಿಲ್ಲವಾದ್ದರಿಂದ ಆಲೋಚನಾಕ್ರಮದ ಬಗ್ಗೆ ಈ ಕೃತಿ ನಿಮಗೆ, ನಿಮ್ಮ ಗೊಂದಲಗಳಿಗೆ ಉತ್ತರಿಸುತ್ತಲೇ ನಿಮ್ಮ ಯಶಸ್ಸಿನ ದಾರಿಗೆ ನೆರವಾಗಬಲ್ಲದು..
'ಲೋಕ ರಾವಣ' ಲಂಕಾಧಿಪತಿಯಾದ ದಶಕಂಠ ರಾವಣನನ್ನು ಕುರಿತ ಕಾದಂಬರಿ. ಲೋಕ ಲೋಕಗಳನ್ನು ನಡುಗಿಸಿದ. ಪರಸ್ತ್ರೀ ಅಪಹಾರಕನಾದ ದುಷ್ಟನೆಂದು ರಾಮಾಯಣದಲ್ಲಿ ಚಿತ್ರಣಗೊಂಡಿರುವ ಪಾತ್ರ ಅದು. ಹುಟ್ಟಿನಿಂದ ಮಹಾ ತಪಸ್ವಿಯಾದ ವಿಶ್ರವಸ್ಸಿನ ಮಗ, ವೇದಾದಿಗಳನ್ನು ಓದಿದವನು. ಬ್ರಹ್ಮ, ಪರಮೇಶ್ವರರ ಅನುಗ್ರಹಕ್ಕೆ ಪಾತ್ರನಾದವನು. ಶಿವಭಕ್ತ. ಇಷ್ಟಿದ್ದೂ ರಾವಣನಂತಹ ಮೇಧಾವಿ ಯಾಕೆ ದುಷ್ಟನಾದ? ಲೋಕಪೀಡಕನಾದ ಅದಕ್ಕೆ ಕಾರಣವಾದುದು ಅವನ ಹುಟ್ಟಿ? ಸಂಸ್ಕಾರವೆ? ಅವನಿಗಾದ ಕಹಿ ಅನುಭವಗಳೆ? ಅಥವಾ ಅವನ ವ್ಯಕ್ತಿತ್ವವೇ ಆ ರೀತಿಯೆ? ಅವನ ಅಂತರಂಗವನ್ನು ಪ್ರವೇಶಿಸದೆ ಉತ್ತರ ದೊರೆಯಲಾರದು. ರಾವಣನ ಅಂತರಂಗವನ್ನು ಬಗೆಯುವ ಅಂತಹ ಒಂದು ಪ್ರಯತ್ನವೇ ಈ ಕಾದಂಬರಿ.. 'ಲೋಕ ರಾವಣ'
Showing 4081 to 4110 of 5243 results