#
ಹೀಗೆ, ಹಲವು ಪದರಗಳಿರುವ ನಿರೂಪಣೆ, ಹಲವು ಕೋನಗಳಿಂದ ನಡೆಯುವ ನಿರೂಪಣೆ ಇರುವ ಕನ್ನಡ ಕಾದಂಬರಿ ಓದಿ ಬಹಳ ಬಹಳ ವರ್ಷಗಳೇ ಕಳೆದಿವೆ. ಒಂದು ಮಾತಲ್ಲಿ ಹೇಳಬೇಕು ಅಂದರೆ ಇದು ನಾವು" ಬದುಕುತ್ತಿರುವ ಈ ೨೦೨೪ರ ಬದುಕಿಗೆ ನನ್ನ ತಲೆಮಾರಿನವರೊಬ್ಬರು ಅಮೆರಿಕದಲ್ಲಿ ಕೂತು ಹಿಡಿದಿರುವ ಕನ್ನಡಿ. ಬೇರೆ ಬೇರೆ ಕಾಲಘಟ್ಟಗಳಲ್ಲಿಯೂ ಬದಲಾಗದ ಸಮಸ್ಯೆಯನ್ನು 'ಸತ್ಕುಲಪ್ರಸೂತರು' ಪರಿಶೀಲಿಸಿದೆ. ಕಾದಂಬರಿಯೊಂದು ಕಥೆಯ ಕಾಲವನ್ನು ಹೇಗೆ ನಿರ್ವಹಿಸುತ್ತದೆ ಎಂಬುದು ಮುಖ್ಯ ಸಂಗತಿಯಾಗುತ್ತದೆ. ಈ ಕಾದಂಬರಿಯು ನವೋದಯ, ನವ್ಯಗಳ ಮಾರ್ಗವನ್ನು ಬಿಟ್ಟು ಕಾಲವನ್ನು ಕೌದಿಯ ಹಾಗೆ ಹೆಣೆದಿದೆ. ಇದು ಆತ್ಮಕಥೆಯೋ, ಸಮುದಾಯವೊಂದರ ಆಚರಣೆಗಳ ದಾಖಲೆಯೋ, ಹುಟ್ಟಿದ ನೆಲ ಮತ್ತು ಸಾಕಿದ ಕುಟುಂಬ, ನಂಟಸ್ತನ, ಪರಿಚಿತ ಉದ್ಯೋಗಗಳಿಲ್ಲದರಿಂದ ದೂರವಾಗಿ ಬದುಕುವ ಜನಸಮೂಹದ ಸ್ವವಿಮರ್ಶೆಯೋ, ಬರೆಯಲಿರುವ ಕಾದಂಬರಿಯೊಂದರ ಟಿಪ್ಪಣಿಯೋ, ಇದೇ ಕಾದಂಬರಿಯೋ, ಇಲ್ಲಿರುವಂಥ ನಿರೂಪಣೆ ಕಾದಂಬರಿಯ ನಿರೂಪಕನ ಅಗತ್ಯ ಮತ್ತು ಕಾದಂಬರಿಯ ಪಾತ್ರವೊಂದರ ಒತ್ತಾಯದಿಂದ ರೂಪುಗೊಂಡದ್ದೋ ಎಂದು 'ಸತ್ಕುಲಪ್ರಸೂತ'ರನ್ನು ಹಲವು ಕೋನಗಳಿಂದ ನೋಡಲು ಸಾಧ್ಯವಿದೆ. -ಓ ಎಲ್ ನಾಗಭೂಷಣ ಸ್ವಾಮಿ
nil
ಹೆಣ್ಣೂಬ್ಬಳು ಬಾಡಿಗೆ ತಾಯಿಯಾಗಲು ಸಮ್ಮತಿಸಿದ್ದು ಯಾಕೆ ಎಂಬುದೇ ಈ ಕೃತಿಯ ಕಥಾವಸ್ತು.
ವಿಷ್ಣುವರ್ಧನ್ ಅವರ ನಿರ್ಗಮನವನ್ನು ಸದನವು ಯಾವ ರೀತಿ ಅವಲೋಕಿಸಿತು ಎನ್ನುವ ಕುತೂಹಲಕ್ಕೆ ಸಾಕ್ಷಿಯಾಗಿ ಈ ಪುಸ್ತಕವು ನಿಮ್ಮ ಕೈಲಿದೆ. ನಾಡಿನ ಅತ್ಯಂತ ಜನಪ್ರಿಯ ನಟರಾಗಿದ್ದ ಅವರಿಗೆ ನಟನೆಯನ್ನು ಮೀರಿದ ಮಾನವೀಯ ಮೌಲ್ಯಗಳು ಎಷ್ಟು ಮುಖ್ಯವಿತ್ತು ಎಂಬುದು ಸದನದ ಚರ್ಚೆಗಳ ಒಟ್ಟಾರೆ ಫಲಿತಾಂಶವಾಗಿ ಕಾಣುತ್ತದೆ. ಇದು ಸಹಜವಾಗಿ, ಇಡೀ ನಾಡಿನ ಜನಮಿಡಿತದ ದ್ಯೋತಕವೂ ಹೌದು. ಅವರ ಜೀವನ, ಅವರ ಮೌಲ್ಯಗಳು, ಅವರ ಸಾತ್ವಿಕತೆ ಇವೆಲ್ಲವೂ ಮುಂದಿನ ಪೀಳಿಗೆಗೆ ದಾರಿ ತೋರಲಿ ಎನ್ನುವ ಈ ಕೃತಿಯ ಉದ್ದೇಶ ಸಾರ್ಥಕವಾಗಿದ್ದು, ಅತಿ ಕ್ಷಿಪ್ರ ಅವಧಿಯಲ್ಲಿ ಅತ್ಯಂತ ಸಮಗ್ರವಾಗಿ ಈ ಕೃತಿಯನ್ನು ಹೊರ ತಂದಿರುವ ಡಾ. ಸಂತೋಷ ಹಾನಗಲ್ಲ ಅವರು ಅಭಿನಂದಾರ್ಹರು. ಅವರು ವಿಷ್ಣುವರ್ಧನ್ ಅವರ ಶುದ್ಧ ಮನೋಧರ್ಮವನ್ನು ದಾಖಲೆಗಳ ಮೂಲಕ ಪ್ರತಿಬಿಂಬಿಸಿದ್ದು, ಈ ಪುಸ್ತಕ ಕೇವಲ ಒಂದು ದಾಖಲೆಯಲ್ಲ. ಅದು ಒಂದು ಯುಗದ ಸ್ಪಂದನೆ ಎ೦ದು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿ ಎಂ ಶ್ರೀನಿವಾಸ ರಾಜ್ಯಾಧ್ಯಕ್ಷರು ವಿಷ್ಣು ಸೇನಾ ಸಮಿತಿ, ಬೆಂಗಳೂರು
ಖಾದ್ರಿ ಎಸ್. ಅಚ್ಯುತನ್
Showing 4561 to 4590 of 5243 results