• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಸಿಂದೂರ: ನಾ ಕಂಡ ಕಾಶ್ಮೀರ | SINDOORA: NAA KANDA KASHMIRA

ಯುದ್ಧ ಎನ್ನುವ ಪದ ಬಹಳ ಶಕ್ತಿಶಾಲಿ. ಅದೇ ಸಮಯದಲ್ಲಿ ಅದು ಭಯವನ್ನು ಸಹ ಹುಟ್ಟಿಸುತ್ತದೆ. ಪೂರ್ಣ ಪ್ರಮಾಣದ ಯುದ್ಧವನ್ನು ಇಂದು ಜಗತ್ತಿನ ಯಾವ ದೇಶವೂ ಭರಿಸುವ ಶಕ್ತಿಯನ್ನು ಹೊಂದಿಲ್ಲ. ಯುದ್ಧ ಅಭಿವೃದ್ಧಿಯ, ಸಿರಿವಂತಿಕೆಯ ಶತ್ರು. ಆದರೂ ಕೆಲವೊಮ್ಮೆ ಕೆಲವು ಸಂಘರ್ಷಗಳು ಅನಿವಾರ್ಯ. ಕೆಲವು ಬಾರಿ ಶಾಂತಿಯಿಂದ ಮತ್ತು ನೆಮ್ಮದಿಯಿಂದ ಬದುಕಲು ಇಂತಹ ಸಂಘರ್ಷಗಳ ಅವಶ್ಯಕತೆ ಇರುತ್ತದೆ. ಭಾರತ ಎಂದಿಗೂ ಕಾಲು ಕೆರೆದು ಜಗಳಕ್ಕೆ ಹೋದ ಉದಾಹರಣೆ ಇತಿಹಾಸದಲ್ಲಿ ಸಿಗುವುದಿಲ್ಲ. ಈ ಬಾರಿಯ ಇಂಡೋ ಪಾಕ್‌ ಯುದ್ಧಕ್ಕೂ, ಪಾಕಿಸ್ತಾನ ಕಾರಣ ಎನ್ನುವುದು ಸ್ಪಷ್ಟ. ನಾವು ಅವರ ಉದ್ಧಟತನಕ್ಕೆ ತಕ್ಕ ಉತ್ತರವನ್ನು ನೀಡಿದ್ದೇವೆ. ಇಂತಹ ಘಟನೆಯನ್ನು ಹದಿನೈದು ದಿನಗಳ ಕಾಲ ನೇರವಾಗಿ ನೋಡಿ, ಅನುಭವಿಸಿ ಅದನ್ನು ಅಕ್ಷರಕ್ಕೆ ಇಳಿಸಿದ್ದಾರೆ ಅಭಿಷೇಕ್‌. ಹದಿನೈದು ದಿನದ ಘಟನಾವಳಿಗಳ ಅನುಭವ ಕಥನ, ವರದಿಗಾರನ ಮೈನವಿರೇಳಿಸುವ ರೋಚಕ ಡೈರಿಯಿದು. ಇಲ್ಲಿನ ಬರಹ, ಭಾಷೆ ನೇರವಾಗಿ ಹೃದಯಕ್ಕೆ ನಾಟುತ್ತದೆ. ನಾವೇ ವಾರ್‌ ಫೀಲ್ಡ್ ನಲ್ಲಿದ್ದೇವೆ ಎನ್ನಿಸುತ್ತದೆ. - ರಂಗಸ್ವಾಮಿ ಮೂಕನಹಳ್ಳಿ ಲೇಖಕರು, ಆರ್ಥಿಕ ತಜ್ಞರು

₹180   ₹160

Buy Now
ಸಿನಿ ಮಾಯಾಲೋಕ | Cini mayalokha

ಸಂಧ್ಯಾರಾಣಿ ಎಸ್

₹200   ₹178

Buy Now
ಸಿನಿಮಾ ಯಾನ | Cinema yana

ಪುಟ್ಟಸ್ವಾಮಿ ಕೆ

₹375   ₹334

Buy Now
ಸಿರಿವಂತಿಕೆಗೆ 100% ಸೂತ್ರಗಳು! | Sirivantikege 100% Sutragalu

ಮದುವೆಗೆ ಮುನ್ನ ವಧುವಿನ ಪೋಷಕರು, ಕಡೆಯವರು ವರನ ವರಮಾನ ಎಷ್ಟಿದೆ ಎಂಬುದನ್ನು ಆದ್ಯತೆಯ ಮೇರೆಗೆ ಪರಿಗಣಿಸದೆ ಇರುವುದಿಲ್ಲ. ನಾಲ್ಕು ಪುರುಷಾರ್ಥಗಳಲ್ಲಿ ಅರ್ಥಕ್ಕೆ ಎರಡನೇ ಸ್ಥಾನವಿದೆ. ಕ್ರಿಸ್ತಪೂರ್ವ ಕಾಲದಲ್ಲೇ ಭಾರತದಲ್ಲಿ ಚಾಣಕ್ಯ, ಅರ್ಥಶಾಸ್ತ್ರವನ್ನು ಬರೆದಿದ್ದ! ಈ ಮೂಲಕ ಹಣದ ಸಂಪಾದನೆಯನ್ನು ವಿಜ್ಞಾನಕ್ಕೆ ಸಮವೆಂದು ಪ್ರಾಚೀನ ಭಾರತ ಪುರಸ್ಕರಿಸಿತ್ತು. ಅಂಥ ದೇಶದಲ್ಲಿ ಹಣಕಾಸು ಸಾಕ್ಷರತೆ ಎಷ್ಟು ಕಡಿಮೆ ಎಂದರೆ ದಿಗ್ಧಮೆಯಾಗುತ್ತದೆ. ಹಣದ ಬಗ್ಗೆ ಬಹಿರಂಗವಾಗಿ ಮಾತನಾಡುವುದೇ ಪಾಪ ಎಂಬ ನಿಷೇಧಾತ್ಮಕ ಮನಸ್ಥಿತಿಯಿಂದ ಕುಟುಂಬ, ಸಮಾಜ, ದೇಶಕ್ಕೆ ಉಂಟಾಗಿರುವ ನಷ್ಟದ ಲೆಕ್ಕ ಇಟ್ಟವರಿಲ್ಲ. ವಿಶ್ವದಲ್ಲೇ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಆರ್ಥಿಕ ಬೆಳವಣಿಗೆ ಪ್ರತಿಯೊಬ್ಬನ ವೈಯಕ್ತಿಕ ಸಂಪತ್ತಿನ ಹೆಚ್ಚಳಕ್ಕೂ ಕಾರಣವಾಗಬೇಕಿದ್ದರೆ, ಸಿರಿವಂತಿಕೆಯ ಸೂತ್ರಗಳನ್ನು 100% ತಿಳಿಯಬೇಕು. ಈ ನಿಟ್ಟಿನಲ್ಲಿ ಈ ಪುಸ್ತಕವನ್ನು ನಯ ಓದುಗರ ಮಡಿಲಿಗೆ ಇಡುತ್ತಿದ್ದೇವೆ.

₹180   ₹160

Buy Now
ಸಿರಿವಂತಿಕೆಗೆ ಸರಳ ಸೂತ್ರಗಳು | Sirivanthikege sarala suthragalu

ತುಮಕೂರು ಜಿಲ್ಲೆಯ ಸಿರಾದಲ್ಲಿ ೧೮.೦೫.೧೯೭೫ ರಂದು ಜನನ. ಪ್ರಾಥಮಿಕ ಶಿಕ್ಷಣ ಸಿರಾ ತಾಲೂಕಿನ ಹೊಸೂರು ಎನ್ನುವ ಗ್ರಾಮದಲ್ಲಿ ಆಗುತ್ತದೆ. ಮಾಧ್ಯಮಿಕ ಶಿಕ್ಷಣ ಬೆಂಗಳೂರಿನ ಪೀಣ್ಯದಲ್ಲಿನ ಸರಕಾರಿ ಶಾಲೆಯಲ್ಲಿ, ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿಕೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಭಾಗದಲ್ಲಿ ಓದಿ ಬೆಂಗಳೂರು ಯೂನಿವರ್ಸಿಟಿಯಿಂದ ಕಾಮರ್ಸ್ ಪದವಿ ಪಡೆಯುತ್ತಾರೆ. ೨೩ ನೆಯ ವಯಸ್ಸಿಗೆ ಕೆಲಸದ ಮೇಲೆ ದೇಶವನ್ನ ತೊರೆದು ದುಬೈ ಸೇರುತ್ತಾರೆ. Read More...

₹180   ₹160

Buy Now
ಸಿಲ್ಕ್ ರೂಟ್ | Silk Route

‘ಸಿಲ್ಕ್ ರೂಟ್’ ಪುಸ್ತಕವನ್ನು ಇನ್ನು ಕೆಲವೇ ದಿನಗಳಲ್ಲಿ ಲೋಕಾರ್ಪಣೆಯನ್ನು ಮಾಡುತ್ತಿದೆ ಎಂದು ನಿಮಗೆ ತಿಳಿಸಲು ಸಂತಸವಾಗುತ್ತಿದೆ. ಚೀನಾದಿಂದ ಏಷ್ಯಾ ಆಫ್ರಿಕಾ ಹಾಗೂ ಯುರೋಪ್ ಖಂಡದ ವಿವಿಧ ದೇಶಗಳಿಗೆ ಹಾದುಹೋದ ಮಾರ್ಗದ ಬಗ್ಗೆ ರಚಿಸಿರುವ ಈ ಕೃತಿಯ ಬೆನ್ನುಡಿ ಹೀಗಿದೆ: ರೇಷ್ಮೆ ಎಂದರೆ ಮನಸ್ಸಿನಲ್ಲೊಂದು ನವಿರಾದ ಭಾವ ಸರಿದುಹೋಗುತ್ತದೆ. ಒಂದು ಕಾಲದಲ್ಲಿ ಈ ರೇಷ್ಮೆ ಬಂಗಾರ, ಬೆಳ್ಳಿಗಿಂತ ಅಮೂಲ್ಯವಾಗಿತ್ತು. ಇದು ಸಾಗಿದ ರಸ್ತೆಯೇ `ದ ಗ್ರೇಟ್ ಸಿಲ್ಕ್ ರೋಡ್' ಎಂದು ಕರೆಯಲ್ಪಡುವ ರೇಷ್ಮೆ ರಸ್ತೆ. ಜಗತ್ತಿನ ಅನೇಕ ಪ್ರಾಚೀನ ನಾಗರಿಕತೆಗಳನ್ನು ಬೆಸೆದ, ಮೂರು ಖಂಡಗಳಿಗೆ ಸಂಪರ್ಕ ಕಲ್ಪಿಸಿದ ರಸ್ತೆ ಇದು. ಎರಡು ಸಾವಿರ ವರ್ಷಗಳ ಹಿಂದೆ ಈ ರಸ್ತೆಯಲ್ಲಿ ವ್ಯಾಪಾರ ಹೇಗೆ ಸಾಗುತ್ತಿತ್ತು? ಭಾರತೀಯ ವರ್ತಕರು ಈ ರಸ್ತೆಯ ಮೂಲಕ ಹೇಗೆ ವ್ಯಾಪಾರಕ್ಕೆ ಸಾಗಿದರು? ಎಂತೆAಥ ಆಶ್ಚರ್ಯಕರ ಸಂಗತಿಗಳು ಇಡೀ ಜಗತ್ತನ್ನು ವ್ಯಾಪಿಸಲು ಕಾರಣವಾಯಿತು? ಅದರ ಪರಿಣಾಮದಿಂದ ಜಗತ್ತಿನಲ್ಲಿ ಎಂತೆAಥ ಬದಲಾವಣೆಗಳು ಉಂಟಾದವು ಎಂಬ ಸಂಗತಿಗಳನ್ನೆಲ್ಲ ಈ ಕೃತಿ ಆಪ್ತವಾಗಿ ತೆರೆದಿಡುತ್ತದೆ. ಇತಿಹಾಸ-ವರ್ತಮಾನ ಎರಡನ್ನೂ ಹೋಲಿಸಿ ನೋಡುತ್ತ, ಓದುಗರನ್ನು ಹೊಸ ಅರಿವಿನೆಡೆಗೆ ಕರೆದೊಯ್ಯುತ್ತದೆ.” ನನ್ನ ಈ ಪುಸ್ತಕವು ಆಯಾ ದೇಶಗಳ ಚರಿತ್ರೆ, ಭೂಗೋಳ, ಜನಜೀವನ, ಸಂಸ್ಕೃತಿ, ಸಾಹಿತ್ಯ ಮತ್ತು ಕಲೆಗಳ ಬಗ್ಗೆ ಬೆಳಕನ್ನು ಚೆಲ್ಲುತ್ತದೆ. ವಿಶ್ವಕ್ಕೆ ಸಿಲ್ಕ್ ರಸ್ತೆಯ ಮೂಲಕ ಭಾರತವು ಕೊಟ್ಟ ಕೊಡುಗೆಯೇನೆಂಬುದನ್ನು ಸವಿಸ್ತಾರವಾಗಿ ತಿಳಿಸುವ ಪ್ರಯತ್ನ.

₹340   ₹303

Buy Now