nil
ಈ ಪುಸ್ತಕವನ್ನು ಬರೆದ ಡಾ. ಸತ್ಯವತಿ ಮೂರ್ತಿಯವರ ಕನ್ನಡ ಪ್ರೇಮ ಮತ್ತು ಸಾಧನೆಯೂ ಗಮನಾರ್ಹ. ವಿವಿಧ ಪ್ರಕಾರಗಳ ಹಲವು ಪುಸ್ತಕಗಳನ್ನು ರಚಿಸಿರುವ ಇವರು, ಇಂಗ್ಲೆಂಡಿನ ಮ್ಯಾಂಚೆಸ್ಟರ್ ನಲ್ಲಿ (ರಾಯಲ್ ಕಾಲೇಜ್ ಆಫ್ ಮ್ಯೂಸಿಕ್) ನಡೆದ ಅಖಿಲ ಭಾರತೀಯ ಕವಿಗೋಷ್ಠಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಂಗ್ಲೆಂಡಿನಲ್ಲಿ ನೆಲೆಸಿ, ಸಾಹಿತ್ಯ ರಚನೆ, ಸಂಶೋಧನೆ ಮತ್ತು ಉಪನ್ಯಾಸಗಳನ್ನು ನೀಡುತ್ತಾ ಬಂದಿರುವ ಇಂಗ್ಲೆಂಡಿನ ಸರ್ಕಾರದ ವತಿಯಿಂದ 'ಪ್ರಿಸನ್ ಮಿನಿಸ್ಟರ್' ಆಗಿ ನೇಮಕಾತಿಯಾಗಿರುವುದು ಹೆಮ್ಮೆಯ ವಿಚಾರ. ವಿದೇಶದಲ್ಲಿ ನೆಲೆಸಿದ್ದು, ಇಷ್ಟೆಲ್ಲಾ ಬಿಡುವಿಲ್ಲದ ಕೆಲಸದ ನಡುವೆಯೂ, ಕನ್ನಡದ ಕುರಿತು, ಕನ್ನಡದ ಸಣ್ಣ ಕಥೆಗಳ ಕುರಿತು ಅಪಾರ ಅಭಿಮಾನವಿಟ್ಟುಕೊಂಡು, ಈ ಕೃತಿಯನ್ನು ಬರೆದಿರುವುದು ಸಹ ಎಲ್ಲರೂ ಹೆಮ್ಮೆ ಪಡುವ ವಿಚಾರ. "ಸಣ್ಣ ಕಥೆಗಳಲ್ಲಿ ಜೀವನ ತತ್ವ"ದಂತಹ ಅಪರೂಪದ ಕೃತಿಯನ್ನು ಕನ್ನಡದ ಓದುಗರಿಗೆ ನೀಡಿರುವ ಡಾ. ಸತ್ಯವತಿ ಮೂರ್ತಿಯವರನ್ನು ಮನಸಾರೆ ಅಭಿನಂದಿಸುತ್ತೇನೆ. -ಶಶಿಧರ ಹಾಲಾಡಿ
#
ತನ್ನ ತಾಯ್ತಂದೆಯರೊಂದಿಗೆ ದುಷ್ಟ ಕೆಲಸಗಳಲ್ಲಿ ಪಾಲ್ಗೊಂಡ ಹದಿನೆಂಟರ ಕೃಷ್ಣಮುರಳಿಯು ಕೊಲೆಯ ಪ್ರಯತ್ನಕ್ಕೆ ಒಳಗಾಗಿ, ವಿದ್ಯಾಧಾಮವನ್ನು ನಡೆಸುತ್ತಿದ್ದ ಗುಣಶೇಖರಂ ಮಡಿಲಿಗೆ ಬಂದು ಬೀಳುತ್ತಾನೆ. ಆದರೆ ಈಗ ಸಂತರಂತಿರುವ ಗುಣಶೇಖರರ ಗತವು ಎಷ್ಟ ಭಯಾನಕವಾದದ್ದು!
ಪ್ರತಿಭಾನ್ವಿತ ವಿಶ್ರಾಂತ ಶಿಕ್ಷಕಿಯಾಗಿರುವ ಶ್ರೀಮತಿ ಪುಷ್ಪಾ ಜೋಗಿಯವರು, ತಮ್ಮ ನಿವೃತ್ತಿಯ ನಂತರ, ತಾವು ಹಸ್ತ ಪ್ರತಿಯಲ್ಲಿ ಜೋಡಿಸಿಟ್ಟ ಬರಹಗಳನ್ನೆಲ್ಲಾ ಕೃತಿ ರೂಪದಲ್ಲಿ ಪ್ರಕಟಿಸಲಾರಂಭಿಸಿದ್ದಾರೆ. ಈಗಾಗಲೇ ಅವರು ಭಾವ ಲಹರಿ, ನಮ್ಮೂರ ಬೈಲಗುತ್ತು, ಐಸಿರದ ಬೂಡು, ಪಂಚ ಪುರ್ಪಗಳೆಂಬ ನಾಲ್ಕು ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿ ಸಾಹಿತ್ಯ ಪ್ರಿಯರ ನಡುವೆ ಜನಾನುರಾಗಿಯಾಗಿದ್ದಾರೆ. ಸಂತೃಪ್ತಿ ನಾಟಕ ಕೃತಿಯು ಅವರ ಐದನೇ ಕೃತಿಯಾಗಿದೆ ಸಾಹಿತ್ಯ ಪ್ರಕಾರಗಳಲ್ಲಿ ನಾಟಕಕ್ಕೆ ಅದರದ್ದೇ ಆದ ಮಹತ್ವವಿದೆ. ಅವುಗಳು ರಂಗದಲ್ಲಿ ಅಭಿನಯಿಸಲ್ಪಟ್ಟಾಗ ಜನ ಮಾನಸದಲ್ಲಿ ಭದ್ರವಾಗಿ ನೆಲೆಯೂರುತ್ತದೆ.
ಹೀಗೆ, ಹಲವು ಪದರಗಳಿರುವ ನಿರೂಪಣೆ, ಹಲವು ಕೋನಗಳಿಂದ ನಡೆಯುವ ನಿರೂಪಣೆ ಇರುವ ಕನ್ನಡ ಕಾದಂಬರಿ ಓದಿ ಬಹಳ ಬಹಳ ವರ್ಷಗಳೇ ಕಳೆದಿವೆ. ಒಂದು ಮಾತಲ್ಲಿ ಹೇಳಬೇಕು ಅಂದರೆ ಇದು ನಾವು" ಬದುಕುತ್ತಿರುವ ಈ ೨೦೨೪ರ ಬದುಕಿಗೆ ನನ್ನ ತಲೆಮಾರಿನವರೊಬ್ಬರು ಅಮೆರಿಕದಲ್ಲಿ ಕೂತು ಹಿಡಿದಿರುವ ಕನ್ನಡಿ. ಬೇರೆ ಬೇರೆ ಕಾಲಘಟ್ಟಗಳಲ್ಲಿಯೂ ಬದಲಾಗದ ಸಮಸ್ಯೆಯನ್ನು 'ಸತ್ಕುಲಪ್ರಸೂತರು' ಪರಿಶೀಲಿಸಿದೆ. ಕಾದಂಬರಿಯೊಂದು ಕಥೆಯ ಕಾಲವನ್ನು ಹೇಗೆ ನಿರ್ವಹಿಸುತ್ತದೆ ಎಂಬುದು ಮುಖ್ಯ ಸಂಗತಿಯಾಗುತ್ತದೆ. ಈ ಕಾದಂಬರಿಯು ನವೋದಯ, ನವ್ಯಗಳ ಮಾರ್ಗವನ್ನು ಬಿಟ್ಟು ಕಾಲವನ್ನು ಕೌದಿಯ ಹಾಗೆ ಹೆಣೆದಿದೆ. ಇದು ಆತ್ಮಕಥೆಯೋ, ಸಮುದಾಯವೊಂದರ ಆಚರಣೆಗಳ ದಾಖಲೆಯೋ, ಹುಟ್ಟಿದ ನೆಲ ಮತ್ತು ಸಾಕಿದ ಕುಟುಂಬ, ನಂಟಸ್ತನ, ಪರಿಚಿತ ಉದ್ಯೋಗಗಳಿಲ್ಲದರಿಂದ ದೂರವಾಗಿ ಬದುಕುವ ಜನಸಮೂಹದ ಸ್ವವಿಮರ್ಶೆಯೋ, ಬರೆಯಲಿರುವ ಕಾದಂಬರಿಯೊಂದರ ಟಿಪ್ಪಣಿಯೋ, ಇದೇ ಕಾದಂಬರಿಯೋ, ಇಲ್ಲಿರುವಂಥ ನಿರೂಪಣೆ ಕಾದಂಬರಿಯ ನಿರೂಪಕನ ಅಗತ್ಯ ಮತ್ತು ಕಾದಂಬರಿಯ ಪಾತ್ರವೊಂದರ ಒತ್ತಾಯದಿಂದ ರೂಪುಗೊಂಡದ್ದೋ ಎಂದು 'ಸತ್ಕುಲಪ್ರಸೂತ'ರನ್ನು ಹಲವು ಕೋನಗಳಿಂದ ನೋಡಲು ಸಾಧ್ಯವಿದೆ. -ಓ ಎಲ್ ನಾಗಭೂಷಣ ಸ್ವಾಮಿ
ಹೆಣ್ಣೂಬ್ಬಳು ಬಾಡಿಗೆ ತಾಯಿಯಾಗಲು ಸಮ್ಮತಿಸಿದ್ದು ಯಾಕೆ ಎಂಬುದೇ ಈ ಕೃತಿಯ ಕಥಾವಸ್ತು.
Showing 8641 to 8670 of 9298 results