#
nil
NA
ಕೆ. ಸತ್ಯನಾರಾಯಣ
ಅಕ್ಷರಸ್ಥರಲ್ಲದ ನಮ್ಮ ಹಳ್ಳಿಯ ಜನ, ಅದರಲ್ಲೂ ಹೆಣ್ಮಕ್ಕಳು ತಮ್ಮ ಬದುಕಿನ, ಕಷ್ಟಗಳ ಮಾತಾಡುವಾಗ "ಅಯ್ಯೋ ಕುಸ್ಮಾ, ನನ್ ಕತೆ ಬೆಳಗಾನ ಯೋಳುದ್ರೂ ಮುಗಿಯಲ್ಲ, ನೀ ಒಂದ್. ಬುಕ್ಕೇ ಬರ್ದ್ ಬುಡಬೋದು" ಅಂತಿರ್ತಾರೆ. ಅವರ ಪಾಲಿಗೆ ಕತೆಗಳೆಂದರೆ ಕಷ್ಟಗಳು. ಅಲ್ಲವೆನ್ನಲಾಗದು. ಅವರೊಳಗೆಲ್ಲಾ ಕತೆ ಇದೆ. ಕತೆ ಎಂಬುದು ಒಳಲೋಕ ಬಗೆದಾಗ ಕಾಣುವ ನೋಟ ಬದುಕು ಕೊಡುವ ಆಘಾತಗಳಿಂದ ಕಾಣುವ ಬೆಳಕನ್ನೂ, ಕಾಣೆಯನ್ನೂ ದೀಪವಾಗಿಸಿ ದಾಟಿಸಲು ಕಂಡುಕೊಂಡ ದಾರಿ. ಕತೆ, ನಮ್ಮನ್ನು ಈ ಜಗತ್ತಿನಲ್ಲಿರುತ್ತಲೇ, ಈ ಜಗತ್ತಿನಿಂದ ಕೆಲಹೊತ್ತಾದರೂ ಬೇರೆಡೆಗೆ ಒಯ್ಯುವ ಮಾಯಾಚಾಪೆ. ಒಂದು ದಿವೌಷಧ. ಕಲೆ ಮತ್ತು ಅಧ್ಯಾತ್ಮ ಎರಡೂ, ಮನುಷ್ಯರ ವೈಯಕ್ತಿಕ ಸಂಕಟಗಳನ್ನು ಲೋಕದ ಪ್ರಶ್ನೆಗಳಾಗಿಸುವ, ಉತ್ತರ ಹುಡುಕುವ, ಸಂಕಟಗಳನ್ನು ಸಾಂತ್ವನವಾಗಿಸುವ ಪ್ರಕ್ರಿಯೆಗಳು. ಅಂತಹ ಕತೆಗಳು ಎಲ್ಲರೊಳಗೂ ಇರುತ್ತವೆ. ಕೆಲವರು ಬರೆಯುತ್ತಾರಷ್ಟೇ!
ಜೆ ರಂಜಾನ್ , ವಿ ಸಿ ರುದ್ರಾಣಿ
Showing 991 to 1020 of 4973 results