nil
NA
ಭುವನೇಶ್ವರ ಸುತ್ತ ಮುತ್ತಲಿನ ಆಯ್ದ ಸುಂದರ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ
ಎನ್ ಎಸ್ ಶ್ರೀನಿವಾಸಮೂರ್ತಿ
#
ವೀರಲೋಕದ 63ನೇ ಕೃತಿ ವಿಕ್ರಮ್ ಹತ್ವಾರ್ ಅವರ “ಕಾಗೆ ಮೇಷ್ಟ್ರು”… ಝೀರೋ ಮತ್ತು ಒಂದು’ ಹಾಗು ‘ಹಮಾರಾ ಬಜಾಜ್’ ಎಂಬ ಕಥಾ ಸಂಕಲನದಿಂದ ಓದುಗರನ್ನು ಸೆಳೆದಿರುವ ವಿಕ್ರಮ ಹತ್ವಾರ್, ಕನ್ನಡದ ಅನನ್ಯ ಕತೆಗಾರ ಮತ್ತು ಕವಿ. ಹೊಸ ಭಾಷೆ, ವಿಶಿಷ್ಟ ವಸ್ತು-ನಿರ್ವಹಣೆ, ಮಾಹಿತಿ ತಂತ್ರಜ್ಞಾನ ಯುಗದ ಪಲ್ಲಟಗಳು, ಜಾಗತೀಕರಣ ಸಂದರ್ಭದಲ್ಲಿನ ಮನುಷ್ಯ ಸಂಬಂಧಗಳು, ದ್ವಂದ್ವಗಳು, ಆಧುನಿಕ ಮನುಷ್ಯನ ಸಂಕಟ ತವಕ-ತಾಕಲಾಟ ಹುಡುಕಾಟ, ಬದಲಾಗುತ್ತಿರುವ ಕೌಟುಂಬಿಕ ವ್ಯವಸ್ಥೆ ಮತ್ತು ಮೌಲ್ಯ – ಇವು ವಿಕ್ರಮ ಹತ್ವಾರರ ಕತೆಗಳಲ್ಲಿ ವಿಮರ್ಶಕರು ಗುರುತಿಸಿರುವ ಕೆಲವು ವಿಶೇಷತೆಗಳು. ಪ್ರಸ್ತುತ ‘ಕಾಗೆ ಮೇಷ್ಟ್ರು’ ಎಂಬ ಕಥಾ ಸಂಕಲನದಲ್ಲಿ ಹುಟ್ಟು ಸಾವು ಎನ್ನುವ ಎರಡು ತುರೀಯ ಸತ್ಯಗಳ ನಡುವೆ, ಮನುಷ್ಯನ ನೆಮ್ಮದಿಯ ಹುಡುಕಾಟದಲ್ಲಿ ವೇದ್ಯವಾಗುವ ಅಸಂಖ್ಯ ಅಣು ಸತ್ಯಗಳ ಮೇಳವಿದೆ. ಬದುಕಿನ ಅಸಂಗತ ಕ್ಷಣಗಳ ಆಳದಲ್ಲಿ ಹುದುಗಿರುವ ದರ್ಶನವು ಕತೆಗಾರನ ಕಾವ್ಯ ಕುಸುರಿಯಲ್ಲಿ ಅನಾವರಣಗೊಳ್ಳುವ ಸೋಜಿಗವನ್ನು ಓದಿನ ಮಾಯೆಯಲ್ಲೇ ಅನುಭವಿಸಬೇಕು. ಇಂಥ ಅನುಭವ ಸುಖದ ಸೆಳೆತ ಈ ಕತೆಗಳನ್ನು ಮತ್ತೆ ಮತ್ತೆ ಓದುವಂತೆ ಪ್ರೇರೇಪಿಸುತ್ತವೆ. ಓದುವ ನಶೆ ನಿಮಗೇರಲಿ…
ಬ್ರಿಟಿಷ್ ವಿದ್ವಾಂಸರು ಮತ್ತು ಸ್ವಾತಂತ್ಯೋತ್ತರ ಕಾಲದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಸ್ವಾತಂತ್ರ್ಯ ಹೋರಾಟದ ನೈಜ ಇತಿಹಾಸವನ್ನು ಮರೆಮಾಜಿ, ತಪ್ಪು ಇತಿಹಾಸವನ್ನೇ ಯುವ ಪೀಳಿಗೆಯ ತಲೆಯಲ್ಲಿ ತುಂಬಿತು. ನೈಜ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಪ್ರಾಮಾಣಿಕ ಅನಾವರಣ ಹಾಗೂ ಗಂಭೀರ ಅಧ್ಯಯನ ನಡೆಯಲೇ ಇಲ್ಲ. ತಮಗೆ ಬೇಕಾದಂತೆ ನೈಜ ಇತಿಹಾಸವನ್ನು ತಿರುಚಿ, ಭಾರತದ ಹೋರಾಟದ ಇತಿಹಾಸವನ್ನು ಕಾಂಗ್ರೆಸ್ ಇತಿಹಾಸವಾಗಿ ಶಾಲಾ-ಕಾಲೇಜು-ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಮಸ್ತಿಷ್ಕದಲ್ಲಿ ತುರುಕಲಾಯಿತು. ಇದೊಂದು ಕಾಂಗ್ರೆಸ್ ಸರಕಾರದ ಅನುಚಿತ, ಅಸಂಬದ್ಧ ಹಾಗೂ ಅಹಂಕಾರದ ಕ್ರಮವೇ ಆಗಿತ್ತು ಏ. ಓ.ಹೂಮ್ ಎಂಬ ವಿದೇಶೀಯನಿಂದ ಸ್ಥಾಪನೆಗೊಂಡು ಇಟಿಷರನ್ನು ಓಲೈಸುವುದಕ್ಕಾಗಿಯೇ ಹುಟ್ಟಿದ ಕಾಂಗ್ರೆಸ್ಗೆ ಈಗಲೂ ಭಾರತ ನಿಷ್ಠೆಗಿಂತ ವಿದೇಶಿ ನಿಷ್ಠೆಯೇ ಹೆಚ್ಚು ಎನ್ನುವುದು ಪದೇಪದೇ ಸಾಬೀತಾಗುತ್ತಲೇ ಇದೆ. ಕಾಂಗ್ರೆಸ್ ಕರಾಳ ಇತಿಹಾಸ ಮುಂದುವರೆಯುತ್ತಲೇ ಇದೆ. ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಕಾಂಗ್ರೆಸ್ ನಡೆಸಿದ ಅಪಸವ್ಯಗಳ ಇತಿಹಾಸವನ್ನು ಆಧಾರಸಹಿತ ಈ ಕೃತಿಯಲ್ಲಿ ಆದಷ್ಟೂ ಸರಳವಾಗಿ ವಿಶ್ಲೇಷಿಸಲಾಗಿದೆ.
“ಯೀಟ್ ದಿನ ಕತ್ಲು ಕೋಣ್ಯಾಗೆ ಬುಡ್ಡಿ ದೀಪದ್ ಮಬ್ಬು ಬೆಳ್ಕಲ್ಲಿ ಯಾರ್ ಯಾರಿಗೋ ಸೆರಗಾಸಿ ; ಮೈನ ಅವರಿಗೊಪ್ಸಿದ್ ಕೈಗಳು, ಇವತ್ತು ಕುವೆಂಪು ಸರ್ಕಲ್ನಾಗೆ, ಶಂಕರ್ ನಾಗ್ ಆಟೋ ಸ್ಟಾಂಡ್ ರೋಡ್ನಾಗೆ , ಸಂತ್ಯಾಗಿರೋ ನಾಕ್ ಮಂದಿ ತಾವ್ ನಿಂತು. ಕನ್ನಡ ಪುಸ್ತಕಗಳನ್ನ ಕೈಲಿಡ್ದು “ ಅಣ್ಣೋ ತೇಜಸ್ವಿಯವರ್ದು ಕರ್ವಾಲೋ, ಮಾದ್ಹೇವಣ್ಣಂದು ಎದೆಗೆ ಬಿದ್ದ ಅಕ್ಷರ, ಕುವೆಂಪುರವರದ್ದು ಮಂತ್ರ ಮಾಂಗಲ್ಯ, ಬೇಂದ್ರೆ ಅಜ್ಜಂದು ನಾಕುತಂತಿ. ಇವೆಲ್ಲಾ ಕನ್ನಡ ಪುಸ್ತಕಗಳು ಕಣಣ್ಣ, ಒಂದೇ ಒಂದ್ ಪುಸ್ತಕ ತಗೋ ಬಾ ಅಣ್ಣ, ಬಾರಕ್ಕ, ಸಾರ್, ಮೇಡಂ ಅಂತ ಕೂಗಿ -ಕೂಗಿ ಕರ್ದು, ನಾನಾ ನಮೂನಿ ಕನ್ನಡ ಸಾಹಿತ್ಯ ಪುಸ್ತಕಗಳನ್ನ ಮಾರಿ ಇಂದು ಬದ್ಕ ಕಟ್ಕೊಂಡಿವ್ನಿ. ಅವತ್ ನಾನು ಸೂಳೆ ದಿಟ, ಆದ್ರೆ ಇವತ್ ನಾನ್ ಸೂಳೆ ಅಲ್ಲ ಕನ್ರಪ್ಪೋ ಅಂತ ನಿರೂಪಿಸೀವ್ನಿ. ವೇಶ್ಯೆ ಅನ್ನೋ ಹಳೇ ನೀರು ಹರಿದೋಗಿ, ಹೊಸ ಹೆಣ್ಣಾಗಿ ಕನ್ನಡ ಪುಸ್ತಕಗಳ ಹೊಳೇಲಿ ತೇಲ್ತೀವ್ನಿ.” ಒಂದು ಪುಸ್ತಕ ಒಂದು ಬದಲಾವಣೆಗೆ ಕಾರಣವಾಗುತ್ತೆ, ಕಲ್ಲೆದೆಯಲ್ಲೂ ಭಾವನೆಗಳ ನೀರುಕ್ಕಿಸುವ ಕೆಲಸ ಕೆಲವು ಪುಸ್ತಕಗಳು ಮಾಡ್ತವೆ. ಈಗಿನ ಕಾಲದಲ್ಲಿ, ಕೈಲಿ ಪುಸ್ತಕಗಳನ್ನಿಡಿಯೋ ಬದಲು ಮೊಬೈಲ್ಗಳನ್ನ ಹಿಡಿಯೋ ಕೈಗಳೆ ಹೆಚ್ಚಿರುವಾಗ, ನೀನು ಪುಸ್ತಕಗಳನ್ನ ಮಾರಿ ಬದುಕ್ತಿನಿ ಅಂತಿದೀಯ
Showing 1171 to 1200 of 5297 results