nil
ನಾನು ನಿಜವಾಗಿಯೂ ನಿಮ್ಮ ಬರೆಹದ ಭಾಷೆಗೆ ಕರಗಿ ಮಳೆಯಾದೆ. ಒಂದು ಕಥನಕ್ಕೆ ಏನೇನ್ ಬೇಕೋ ಎಲ್ಲಾ ಈ ಕಥನದಲ್ಲಿದೆ. ನಾನ್ ಎಷ್ಟ್ ಥ್ರಿಲ್ ಆಗಿದೀನಿ ಅಂದ್ರೆ. ಬಿಜ್ಜು ತನ್ನ ಕಷ್ಟಕ್ಕೆ ಪರಿಹಾರ ಹುಡುಕುತ್ತಾ ಸ್ನೇಹಿತ ಮುತ್ತುವಿನ ಊರು ತಲುಪೋದು.ಅಲ್ಲಿ ಮುತ್ತುವಿನ ಸುಳಿವೇ ಸಿಗದೇ ಆತನ ಡೈರಿ ಸಿಗುವುದು.ಮುಂದೆ ಡೈರಿಯಲ್ಲಿ ಮೂಡಿಬರುವ ಮುತ್ತುವಿನ ಕಥೆ ಒಂದು ಶುದ್ಧ ಪ್ರೇಮ. ಅವ್ವನ ಮೇಲಿನ ಅಚಲ ಪ್ರೀತಿ, ಬಾಲ್ಯ ಹುಟ್ಟೂರ ಮೇಲಿನ ಅಭಿಮಾನ, ಪುಸ್ತಕ, ಸ್ನೇಹ, ಬೀದಿಬದಿಯ ನಾಯಿಗಳ ಕಾಳಜಿ, ಮೇಷ್ಟ್ರು ಸೇರಿದಂತೆ ಹಲವರ ನಡುವಿನ ಅಸಕ್ತ ಬದುಕ ಬವಣೆಗಳ ಸೊಗಸಾದ ಭಾವಗೀತೆಯಂತೆ ರೂಪುಗೊಂಡಿದೆ ನಿಮ್ಮ ಕಥನ ಹಂದರ.
ಕಥೆಗಳು ನಮ್ಮ ಅಂಗಳದಲ್ಲಿಯೇ ಇರುತ್ತದೆ. ಅದನ್ನು ಕೇಳುವ ಕಿವಿಗಳು, ನೋಡುವ ಕಣ್ಣುಗಳು ಕಥೆಗಾರನದಾಗಿರಬೇಕು. ಅಂದರೆ ಕಥೆಗಳು ಜನರ ನಡುವೆಯೇ ಹುಟ್ಟಬೇಕು. ಆಗಲೇ ಅದು ಓದುಗರ ಮನಸ್ಸು ತಟ್ಟಲು ಸಾಧ್ಯ. ಕಲ್ಪನೆಯ, ಪೆಂಟಾಸಿಯ ಕಥೆಗಳು ರಂಜಿಸುತ್ತವೆ. ಆದರೆ ಮನಸ್ಸಿನ ಆಳಕ್ಕೆ ತಿಳಿಯುವುದು ಕಷ್ಟ. ರಂಜನೆ ಒಂದು ಕಥಾಂಶವಾದರೆ ಹೆಚ್ಚಿನದು ಬದುಕಿನ ವಿಸ್ತಾರವನ್ನು ಹೆಚ್ಚಿಸುವ ಕಲೆಗಾರಿಕೆ ಆಗಿರಬೇಕು. ಸರಳವಾಗಿ, ಸಂದೇಶವನ್ನ ಅದು ಹೊತ್ತಿರಬೇಕು. ಹಾಗೆಯೇ ಹಲವು ಅರ್ಥಗಳನ್ನು ಹೊಮ್ಮಿಸುವಂತಾಗಬೇಕು. ಒಟ್ಟಿನಲ್ಲಿ ರಂಜನೆಯ ಜೊತೆಗೆ ಓದುಗನ ಬೆಳವಣಿಗೆಗೆ ಕಥೆಗಳು ಸಹಕಾರಿಯಾಗಿರಬೇಕು. ಶ್ರೀಮತಿ ಸತ್ಯವತಿ ಮೂರ್ತಿಯವರ ಕಥೆಗಳು ಈ ಅಂಶಗಳನ್ನು ಸಮೃದ್ಧವಾಗಿ ಒಳಗೊಂಡಿದೆ. ಓದಿಸಿಕೊಂಡು ಹೋಗುವ ಬರಹ, ಕಲಾತ್ಮಕವಾಗಿ ಕೂಡಿಕೊಂಡ ಪದ, ವಾಕ್ಯ ಪುಂಜಗಳು. ಆಸಕ್ತಿ ಹುಚ್ಛಿಸುವ ಘಟನಾವಳಿಗಳು, ಚಿಂತಿಸುವ ಅಂಶಗಳು... ಹೀಗೆ ಸುಪುಷ್ಟವಾದ ಕಥೆಗಳು ಅವರದು. ಡಾ.ಸತ್ಯವತಿ ಮೂರ್ತಿ
ಪವನ್ ಮೌರ್ಯ ಚಕ್ರವರ್ತಿ ಅವರು ಬರೆದಿರುವ ಆನೆಗಳನ್ನು ಕುರಿತ ' ಆರಂಕುಶವಿಟ್ಟೊಡಂ... ' ಎಂಬ 16 ಲೇಖನಗಳ ಪುಸ್ತಕದಲ್ಲಿ ಆನೆಗಳಿಗೆ ಸಂಬಂಧಿಸಿದಂತೆ ಪ್ರಾಚೀನ ಕಾಲದಿಂದ ಆಧುನಿಕ ಕಾಲದವರೆಗಿನ ವ್ಯಾಪ್ತಿಯನ್ನು ಇಟ್ಟುಕೊಂಡು ಅಧ್ಯಯನ ನಡೆಸಿದ್ದಾರೆ. ಇದುವರೆವಿಗೆ ಆನೆಗಳ ಬಗ್ಗೆ ಬಂದಿರುವ ಅನೇಕ ಕೃತಿಗಳನ್ನು ಓದಿ ಕ್ಷೇತ್ರ ಕಾರ್ಯ ಮಾಡಿ ಈ ಕೃತಿಯನ್ನು ರಚಿಸಿದ್ದಾರೆ. ಇದರೊಂದಿಗೆ ಸಂದರ್ಶನಗಳ ಮೂಲಕ ಪಡೆದ ಮಾಹಿತಿಯನ್ನು ಬಳಸಿ ಹೆಚ್ಚಿನ ವಿವರಗಳನ್ನು ಆನೆಗಳ ಬಗ್ಗೆ ಹಾಗೂ ಆನೆ ಪಳಗಿಸುವವರ ಬಗ್ಗೆ ಬರೆದಿದ್ದಾರೆ. ಚಕ್ರವರ್ತಿ ಅವರು ಈ ಕೃತಿ ರಚನೆಗಾಗಿ ಸಂಸ್ಕೃತ , ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಆನೆಗಳಿಗೆ ಸಂಬಂಧಿಸಿದಂತೆ ಬರೆದಿರು ಬಂದಿರುವ ಹಲವಾರು ಕೃತಿಗಳನ್ನು ಪರಾಮರ್ಶಿಸಿ ಅತ್ಯಅಮೂಲ್ಯ ಸಂಗತಿಗಳನ್ನು ಹೆಕ್ಕಿತೆಗೆದು ಬಳಸಿಕೊಂಡಿದ್ದಾರೆ. ಇವುಗಳಲ್ಲಿ ದೇಶಿಯವಾಗಿ ಆನೆಗಳನ್ನು ಸಾಕುತ್ತಿದ್ದ ವಿಧಾನ ಅವುಗಳಿಗೆ ಕಾಯಿಲೆಯಾದಾಗ ನೀಡುತ್ತಿದ್ದ ಚಿಕಿತ್ಸಾ ಪದ್ಧತಿಯನ್ನು ವಿವರವಾಗಿ ತಿಳಿಸಿದ್ದಾರೆ. ನಾರಾಯಣ ದೀಕ್ಷಿತ್ ಎಂಬುವವರು ಬರೆದಿರುವ ಗಜಗ್ರಹಣ ಕೃತಿ , ಮಲಯಾಳಂ ಭಾಷೆ ಗಜರಕ್ಷಾತಂತ್ರ , ಪಾಲಕಾಪ್ಯಮುನಿ ವಿರಚಿತ ಗಜಶಾಸ್ತ್ರ ಮುಂತಾದ ಕೃತಿಗಳಿಂದ ಪಾರಂಪರಿಕವಾಗಿ ಆನೆಗಳು ವಾಸಿಸುವ ಸ್ಥಳ , ಬದುಕುವ ರೀತಿ , ಆಮೆಗಳನ್ನು ಹಿಡಿಯುವ ಮತ್ತು ಪಳಗಿಸುವ ವಿಧಾನ ಮೊದಲಾದ ವಿವರಗಳನ್ನು ಈ ಕೃತಿಗಳಲ್ಲಿ ತಿಳಿಸಿದ್ದು , ಈ ಎಲ್ಲಾ ಮಾಹಿತಿಗಳನ್ನು ತಮ್ಮ ಕೃತಿಯಲ್ಲಿ ಸಮರ್ಥವಾಗಿ ಬಳಸಿಕೊಂಡಿದ್ದಾರೆ. ಇದಲ್ಲದೆ ಶಾಸನಗಳಲ್ಲಿ ಆನೆಗಳ ಬಗ್ಗೆ ಬಂದಿರುವ ವರ್ಣನೆ , ಯುದ್ಧಗಳಲ್ಲಿ ಅವುಗಳ ವರ್ತನೆಯ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ..... ಆನೆಗಳನ್ನು ಕುರಿತಂತೆ ಕೆಲವು ಡಾಕ್ಯುಮೆಂಟರಿಗಳು ಬಂದಿದ್ದು , ಅವುಗಳ ನಿಗೂಢ ಬದುಕನ್ನು ಜಗತ್ತಿಗೆ ತೆರೆದಿಟ್ಟಿವೆ . ಲೇಖಕರು ಬಹು ಸೂಕ್ಷ್ಮಜೀವಿ ಹಾಗೂ ಸ್ನೇಹಜೀವಿಯಾದ ಆನೆಗಳ ಬಗ್ಗೆ ಅನೇಕ ವಿವರಗಳನ್ನು ಒಂದಡೆ ತಂದು ಈ ಪುಸ್ತಕ ರೂಪದಲ್ಲಿ ನೀಡಿದ್ದಾರೆ. ಇದರೊಂದಿಗೆ ಆನೆಗಳೊಂದಿಗೆ ತಮ್ಮ ಜೀವನವನ್ನು ಕಳೆಯುತ್ತಿರುವ ಬಂಡಿಪುರ , ಮದುಮಲೈ , ನೀಲಗಿರಿಬೆಟ್ಟ ಪ್ರದೇಶ , ಬಿಳಿಗಿರಿರಂಗನ ಬೆಟ್ಟ , ಮಲೈ ಮಹದೇಶ್ವರ ಬೆಟ್ಟ ಮೊದಲಾದ ಕಡೆಗಳಲ್ಲಿ ವಾಸಿಸುವ ಜೇನು ಕುರುಬ , ಬೆಟ್ಟ ಕುರುಬ ಮೊದಲಾದ ಕಾಡಿನ ಮಕ್ಕಳು ಹಾಗೂ ಅವರ ಮತ್ತು ಆನೆಗಳ ನಡುವಿನ ಸಂಬಂಧಗಳ ಬಗ್ಗೆ ಅವರೊಡನೆ ಸಂದರ್ಶನ ಮಾಡಿ ವಿಷಯವನ್ನು ಸಂಗ್ರಹಿಸಿದ್ದಾರೆ. ಹೀಗೆ ಅಪರೂಪದ ವಿಷಯಗಳನ್ನು ತೆಗೆದುಕೊಂಡು ನಾನಾ ಆಯಾಮಗಳಲ್ಲಿ ಆನೆಗಳ ಬಗ್ಗೆ ವಿವರ ನೀಡಿ ಪುಸ್ತಕ ರಚಿಸಿರುವ ಪವನ್ ಮೌರ್ಯ ಚಕ್ರವರ್ತಿ ಅವರು ಅಭಿನಂದನಾರ್ಹರು.
NA
ಕನ್ನಡದ ಮಹತ್ವದ ಹಿರಿಯ ಲೇಖಕಿಯರಲ್ಲೊಬ್ಬರಾದ ವಸುಮತಿ ಉಡುಪರವರ ಕಥಾಜಗತ್ತು ವಿಶಿಷ್ಟವಾದದ್ದು. ಸಂದುಹೋಗುತ್ತಿರುವ ಒಂದು ಕಾಲಘಟ್ಟದ ತಲೆಮಾರಿನ ಚಿತ್ರಣವನ್ನು ಕಟ್ಟಿಕೊಡುವ ವಸುಮತಿ ಉಡುಪರವರು ಅಪ್ಪಟ ಕಥೆಗಾರ್ತಿ, ನೇರವಾಗಿ, ಸಹಜ ಹದದಲ್ಲಿ ಕಂಡಿರಿಸಿರುವ ಇವರ ಪಾತ್ರಗಳು ಹೆಣ್ಣುಮನದ ನಾನಾಭಾವಗಳ ರಂಗಶಾಲೆ, ಪಾತ್ರಗಳ ದಿಟ್ಟತನ, ನೇರವಂತಿಕೆ, ಬದುಕನೆದುರಿಸುವ ಛಲ, ತಾಕಲಾಟಗಳ ನಡುವೆಯೂ ಗುರಿಯನ್ನು ಕಂಡುಕೊಳ್ಳುವ ಆಶಾವಾದ ಇಲ್ಲಿ ಅಸಾಧಾರಣ ರೀತಿಯಲ್ಲಿ ಅಭಿವ್ಯಕ್ತಗೊಂಡಿದೆ. ಬದುಕಿನ ಹತ್ತು ಹಲವಾರು ಹಳವಂಡಗಳಲ್ಲಿ, ಬಾಳಿನ ಕುಲುಮೆಯಲ್ಲಿ ಬೆಂದು ನೊಂದರೂ ತಮ್ಮದೇ ರೀತಿಯಲ್ಲಿ ಪ್ರತಿರೋಧಿಸುತ್ತಾ, ಜೀವನದ ಕಟು ಸತ್ಯವನ್ನು ಅರಿಯುತ್ತಾ ಮಾನವೀಯ ಮೂರ್ತಿಗಳಾಗಿ ನಿಲ್ಲುವ ಇಲ್ಲಿನ ಹಲವಾರು ಪಾತ್ರಗಳ ಕಥೆ ಹೃದಯಸ್ಪರ್ಶಿಯಾಗಿ ಚಿತ್ರಿತಗೊಂಡಿದೆ.
'ಇಲ್ಲಿಂದ ಮುಂದೆಲ್ಲ ಕಥೆ' ಇತ್ತೀಚಿನ ಕೆಲವು ವರ್ಷಗಳಲ್ಲಿ ಕನ್ನಡ ಕಥಾಲೋಕದ ಚಾಚುಗಳ ಅತ್ಯುತ್ತಮ ಮಾದರಿಯಾಗಿದೆ. ಈ ಪ್ರಯತ್ನಕ್ಕೆ ಹುಡುಕಾಟಕ್ಕೆ ಎರಡು ಲಕ್ಷಣಗಳಿವೆ. ಒಂದು, ತಾತ್ವಿಕವಾಗಿ ಮತ್ತು ತಾಂತ್ರಿಕವಾಗಿ ಈ ತನಕದ ಕನ್ನಡ ಕಥಾಪರಂಪರೆಯ ಧಾತುಗಳನ್ನೆಲ್ಲ ಒಳಗೊಳ್ಳುವ ಹಂಬಲ ಮತ್ತೊಂದು, ಮಾನುಷಲೋಕವನ್ನು ಕರಾರುಗಳಿಲ್ಲದೆ ಒಳಗೊಳ್ಳುವ ತವಕ ಕಥೆಗಾರರಾಗಿ ಮೊದಲ ಸಂಕಲನದಿಂದಲೂ ರಘುನಾಥರು ಉಳಿಸಿಕೊಂಡು ಬಂದಿರುವ ಉತ್ಕಟತೆ ಮತ್ತು ತನ್ಮಯತೆ ಅವರನ್ನು ಕನ್ನಡದ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರನ್ನಾಗಿಸಿವೆ. ಪ್ರತಿಭೆಯ ಜೊತೆಗೆ ಬರವಣಿಗೆಯಲ್ಲಿ ಅವಸರ ತೋರಿಸದೇ ಇವರು ಕಾಯ್ದುಕೊಂಡು ಬಂದಿರುವ ಸಂಯಮದ ಪಾತ್ರವೂ ದೊಡ್ಡದು. ರಘುನಾಥರ ಬರವಣಿಗೆಯ ಬಗ್ಗೆ ವ್ಯಕ್ತಿತ್ವದ ಬಗ್ಗೆ ನನಗೆ ಸಕಾರಣವಾದ ಮೆಚ್ಚುಗೆ. ಅವರ ಸಾಹಿತ್ಯಕ ಸಂವೇದನೆ ಮತ್ತು ಸಾಂಸ್ಕೃತಿಕ ಎಚ್ಚರ ಇದಕ್ಕೆ ಮುಖ್ಯ ಕಾರಣ, ಇತ್ತೀಚಿನ ದಿನಗಳಲ್ಲಿ ಸಮಕಾಲೀನ ಬೆಳವಣಿಗೆಗಳನ್ನು ಕುರಿತ ಅವರ ಪ್ರತಿಕ್ರಿಯೆಗಳ ಸ್ಪಷ್ಟತೆ ಮತ್ತು ನಿರ್ಭಯವಾದ ಮಾತುಗಳು ಎರಡೂ ಅವರ ಮೇಲಿನ ಭರವಸೆ ಮತ್ತು ಗೌರವವನ್ನು ಹೆಚ್ಚಿಸುತ್ತಿವೆ.
Showing 31 to 60 of 470 results