• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಲಡಾಯಿ | Ladayi

nil

₹170   ₹151

Buy Now
ಲೋಕ ರಾವಣ | Loka raavana

'ಲೋಕ ರಾವಣ' ಲಂಕಾಧಿಪತಿಯಾದ ದಶಕಂಠ ರಾವಣನನ್ನು ಕುರಿತ ಕಾದಂಬರಿ. ಲೋಕ ಲೋಕಗಳನ್ನು ನಡುಗಿಸಿದ. ಪರಸ್ತ್ರೀ ಅಪಹಾರಕನಾದ ದುಷ್ಟನೆಂದು ರಾಮಾಯಣದಲ್ಲಿ ಚಿತ್ರಣಗೊಂಡಿರುವ ಪಾತ್ರ ಅದು. ಹುಟ್ಟಿನಿಂದ ಮಹಾ ತಪಸ್ವಿಯಾದ ವಿಶ್ರವಸ್ಸಿನ ಮಗ, ವೇದಾದಿಗಳನ್ನು ಓದಿದವನು. ಬ್ರಹ್ಮ, ಪರಮೇಶ್ವರರ ಅನುಗ್ರಹಕ್ಕೆ ಪಾತ್ರನಾದವನು. ಶಿವಭಕ್ತ. ಇಷ್ಟಿದ್ದೂ ರಾವಣನಂತಹ ಮೇಧಾವಿ ಯಾಕೆ ದುಷ್ಟನಾದ? ಲೋಕಪೀಡಕನಾದ ಅದಕ್ಕೆ ಕಾರಣವಾದುದು ಅವನ ಹುಟ್ಟಿ? ಸಂಸ್ಕಾರವೆ? ಅವನಿಗಾದ ಕಹಿ ಅನುಭವಗಳೆ? ಅಥವಾ ಅವನ ವ್ಯಕ್ತಿತ್ವವೇ ಆ ರೀತಿಯೆ? ಅವನ ಅಂತರಂಗವನ್ನು ಪ್ರವೇಶಿಸದೆ ಉತ್ತರ ದೊರೆಯಲಾರದು. ರಾವಣನ ಅಂತರಂಗವನ್ನು ಬಗೆಯುವ ಅಂತಹ ಒಂದು ಪ್ರಯತ್ನವೇ ಈ ಕಾದಂಬರಿ.. 'ಲೋಕ ರಾವಣ'

₹250   ₹213

Buy Now
ವಕ್ಷ ಸ್ಥಳ | Vaksha Sthala

ವಾಸ್ತವ-ಕಲ್ಪನೆ-ಅತೀಂದ್ರಿಯ-ದೈವೀಕ ಈ ಎಲ್ಲ ನೆಲೆಗಳ ಚಿತ್ರಣವನ್ನೂ ಏಕತ್ರಗೊಳಿಸಿ ಪ್ರತಿಮಾತ್ಮಕವಾಗಿ ಕಟ್ಟಿಕೊಡುವಲ್ಲಿ ಆಶಾ ರಘು ಅವರು ಯಶಸ್ವಿಯಾಗಿದ್ದಾರೆ. ಸ್ವಾರಸ್ಯಕರವಾಗಿ ಕಥಾನಕವನ್ನು ಕಟ್ಟಿಕೊಡುವುದರಲ್ಲ. ಭಾಷೆಯನ್ನು ಸಮರ್ಥವಾದ ವಾಹಕವಾಗಿಸುವಲ್ಲ ಆಶಾ ಅವರು ಸಿದ್ಧಹಸ್ತರು. ಜೀವನ, ಅದರ ಅರ್ಥ, ಪ್ರೇಮ-ವಿಯೋಗ-ಮಿಲನ-ಆತ್ಮ-ಪರಮಾತ್ಮ ಹೀಗೊಂದು ಮಾಯಾಜಗತ್ತನ್ನು ಅನನ್ಯವಾಗಿ ಸೃಷ್ಟಿಸುವ 'ವಕ್ಷಸ್ಥಲ' ಕಾದಂಬರಿ ಓದುಗರ ಹೃದಯಕ್ಕೆ ಹತ್ತಿರವಾಗಲಿ ಎಂದು ಆಶಿಸುತ್ತೇನೆ. ರಂಜನಿ ಪ್ರಭು

₹270   ₹240

Buy Now
Sold Out
ವಾರೆನ್ ಹೇಸ್ಟಿಂಗ್ಸ್‌ನ ಹೋರಿ | Warren hasting's Hori

ಇದು, ಹಿಂದಿಯ ಧೀಮಂತ ಲೇಖಕ ಶ್ರೀ ಉದಯ ಪ್ರಕಾಶ್‌ರ 'ವಾರೆನ್ ಹೇಸ್ಟಿಂಗ್ಸ್ ಕಾ ಸಾಂಡ್" ಎಂಬ ಕಿರು ಕಾದಂಬರಿಯ ಭಾವಾನುವಾದ. ಈ ಸಮಾಜೋ- ಆರ್ಥಿಕ ರಾಜಕೀಯ ಕಟಕಿಯಲ್ಲಿ ವಾರೆನ್ ಹೇಸ್ಟಿಂಗ್ಸ್ ಮತ್ತು ಅವನ ಹೋರಿ ರೂಪಕಗಳಾಗಿ ಬಳಸಲ್ಪಟ್ಟಿವೆ. ಉದಯ ಪ್ರಕಾಶರು ಒಂದು ವಿಲಕ್ಷಣ ಭ್ರಮೆ (Fantasy) ಯನ್ನು ಈ ಕಿರು ಕಾದಂಬರಿಯಲ್ಲಿ ಸೃಷ್ಟಿಸಿದ್ದಾರೆ. ಅದ್ಭುತಗಳ ನಾಡಾದ ಭಾರತವೆಂಬ ಕೂಟ ಪ್ರಶ್ನೆಯೊಂದಿಗೆ ವಾರೆನ್ ಹೇಸ್ಟಿಂಗ್ಸ್‌ನ ಒಡನಾಟ ಹಾಸ್ಯಾಸ್ಪದವೂ ಅಸಮಂಜಸವೂ ಆಗಿದೆ. ತನ್ನ ಸುತ್ತಲಿನ ಎಲ್ಲದರೊಂದಿಗೆ ಅವನ ನಡವಳಿಕೆ ಸಂವೇದನಾರಹಿತವಾಗಿದೆ; ಇದರಲ್ಲಿ ಆಳ ತಿಳುವಳಿಕೆ ಯಾಗಲೀ, ಒಳನಾಡಿ ಅರಿವಾಗಲೀ ಇಲ್ಲ, ಹಾಗಾಗಿ ಸತ್ವವೂ ಇಲ್ಲ. 'ವಾರೆನ್ ಹೇಸ್ಟಿಂಗ್ಸ್‌ನ ಹೋರಿ' ಇಂದು ನಮ್ಮ ಸುತ್ತ ನಡೆಯುತ್ತಿರುವ ಜಾಗತಿಕ ವಿದ್ಯಮಾನಗಳತ್ತ ನಮ್ಮನ್ನ ಕೊಂಡೊಯ್ಯುತ್ತದೆ. ಇಂದು ಭೋಗಲೋಲುಪತೆ ಮತ್ತು ಅಧಿಕಾರದಾಹ ವಿಕೃತಿಯ ರೂಪತಳೆದಿವೆ. ನಿಲ್ಲಪ್ತತೆ- ಸಂವೇದನಾರಾಹಿತ್ಯಗಳ ನಡುವೆಯೂ ಕೆಲವು ಜೀವಿಗಳು. ಕೆಲವು ಚಳುವಳಿಗಳು ಹೋರಿಯ ಕೋಡು ಹಿಡಿದು ಮಣಿಸುವ, ಜಗತ್ತಿನ ಗಡ್ಡಹಿಡಿದು ಜಗ್ಗುವ ಧೈರ್ಯ ಹೊಂದಿವೆ. ವಿನಾಶದ ಅಂಚಿನಲ್ಲಿರುವ ತಳಿಯೊಂದಕ್ಕೆ ಕೊಟ್ಟ ಪ್ರಶಸ್ತಿಯಂತಿದೆ ಈ ಕಾದಂಬರಿ, ಡಾ. ಪ್ರಕಾಶ್ ಗರುಡರ ಭಾವಾನುವಾದ ಮೂಲದೊಂದಿಗೆ ಅನುಸಂಧಾನ ಮಾಡುತ್ತಲೇ ತಿಳಿಗನ್ನಡದಲ್ಲಿ ಚೊಕ್ಕವಾಗಿ ಹರಿದು ಬಂದಿದೆ. ಪ್ರೊ. ಎಚ್.ಆರ್. ಅಮರನಾಥ

₹130   ₹116

Buy Now