• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಶತ್ರುಘ್ನ | Shatrughna

ವಾಲ್ಮೀಕಿ ರಾಮಾಯಣದಲ್ಲಿ ಶತ್ರುಘ್ನನ ಪಾತ್ರ ಅಷ್ಟೊಂದು ಮಹತ್ವವನ್ನು ಪಡೆದಿಲ್ಲ. ರಾಮನ ಕಡೆಯ ತಮ್ಮನಾಗಿ, ರಾಮಲಕ್ಷ್ಮಣರು ಕಾಡಿಗೆ ಹೋದ ಮೇಲೆ, ಭರತ ನಂದಿಗ್ರಾಮದಲ್ಲಿ ನಿಂತಮೇಲೆ ಅನಿವಾರ್ಯವಾಗಿ ಆಯೋಧ್ಯೆಯ ಆಡಳಿತವನ್ನು ನಿರ್ವಹಿಸಿದನೆಂಬಷ್ಟು ಮಾತ್ರ ವಿವರ ಅಲ್ಲಿ ದೊರೆಯುತ್ತದೆ. ಆದರೆ ಸಹೋದರ ಶ್ರೀ ಪ್ರದೀಪ್ ಬೇಲೂರು ಅವರು ಮಹಾಕಾವ್ಯದಲ್ಲಿ ಮರೆಯಾದ ಶತ್ರುಘ್ನನ ವ್ಯಕ್ತಿತ್ವದ ಚಿತ್ರಣವನ್ನು ತಮ್ಮ ಈ 'ಶತ್ರುಘ್ನ' ಕಾದಂಬರಿಯಲ್ಲಿ ಆದಷ್ಟು ಸಮರ್ಥವಾಗಿಯೂ, ಪ್ರಾಮಾಣಿಕವಾಗಿಯೂ ಕಟ್ಟಿಕೊಡುವ ಪ್ರಯತ್ನವನ್ನು ಮಾಡಿದ್ದಾರೆ. ಶತ್ರುಘ್ನನ ಅಂತರಂಗದ ಒಳಹೊಕ್ಕು ನೋಡಲು ಯತ್ನಿಸಿದ್ದಾರೆ. ಶತ್ರುಘ್ನನ ಮನೋಗತದ ಮೂಲಕವೇ, ಅವನ ಹಾಗೂ ಸರಯೂ ನದಿಯ ಒಡನಾಟ, ಅಣ್ಣಂದಿರಲ್ಲಿ ಭರತನಿಗೆ ಹೆಚ್ಚು ಅಂಟಿಕೊಂಡ ಪರಿ, ಶೃತಕೀರ್ತಯೊಂದಿಗಿನ ಸರಸ ಸಲ್ಲಾಪಗಳು, ಬಲಿದ ಹಾಗೂ ಲವಣಾಸುರರೊಂದಿಗಿನ ಕದನ, ರಾಮಲಕ್ಷ್ಮಣರು ಹಾಗೂ ಭರತ ಮೂವರೂ ಆಯೋಧ್ಯೆಯನ್ನು ಅನಿವಾರ್ಯ ಕಾರಣಗಳಿಂದ ಬಿಟ್ಟು ಹೋದಾಗ, ತಾನೊಬ್ಬನೇ ಅರಮನೆಗೆ ಗಂಡು ದಿಕ್ಕಾಗಿ, ಇತ್ತ ತಾಯಂದಿರು, ಅತ್ತಿಗೆಯರು, ಮಡದಿ ಎಲ್ಲರನ್ನೂ ಸಂತೈಸುತ್ತಾ, ಅತ್ತ ಶತ್ರುಗಳಿಂದಲೂ ಆಯೋಧ್ಯೆಯನ್ನು ರಕ್ಷಿಸಿಕೊಂಡು, ಪ್ರಜೆಗಳನ್ನೂ ಸೌಖ್ಯದಿಂದ ಪಾಲಿಸಿದ ಬಗೆ, ರಾಮನಾಗಮನ ನಂತರದಲ್ಲಿ ಮಧುಪುರಕ್ಕೆ ಅರಸನಾಗಿ ಆಳಿದ ಪರಿ, ಅಶ್ವಮೇಧಯಾಗದ ಸಂದರ್ಭದಲ್ಲಿ ಯಾಗಾಶ್ವದ ಹಿಂದೆ ಅಲೆದು ಆನೇಕ ರಾಜರುಗಳೊಂದಿಗೆ ಸೆಣಸಿದ ಸಾಹಸದ ಕಥೆಗಳು ಎಲ್ಲವೂ ನಿರೂಪಿತವಾಗಿವೆ. ಪೌರಾಣಿಕ ಕಥೆಯನ್ನು ಆಧರಿಸಿ ಬರೆದರೂ, ಅದನ್ನು ಬೆಳೆಸಲು, ನಿರೂಪಿಸಲು ಕಲ್ಪನಾಶಕ್ತಿಯೂ ಅಗತ್ಯವಾಗಿ ಬೇಕಾಗುತ್ತದೆ. ಅದು ಲೇಖಕರಿಗೆ ಇದೆ. ಭಾಷೆ ಶೈಲಿಗಳು ಚೆನ್ನಾಗಿವೆ. ಸಾಕಷ್ಟು ಅಧ್ಯಯನದ ಹಿನ್ನೆಲೆಯಲ್ಲಿ ಈ ಕೃತಿಯನ್ನು ರಚಿಸಿದ್ದಾರೆ. ಕೇಕೆಯ ರಾಜ್ಯದಿಂದ ಕೋಸಲಕ್ಕೆ ಭರತ ಶತ್ರುಘ್ನರು ಪಯಣಿಸುವ ಸಂದರ್ಭದಲ್ಲಿ ಕಾದಂಬರಿಕಾರರು ಕೊಡುವ ಮಾರ್ಗದ ನಕ್ಷೆಯ ವಿವರಗಳೇ ಇದಕ್ಕೆ ಸಾಕ್ಷಿ! ಇಂತಹ ಕಾದಂಬರಿಯನ್ನು ಕನ್ನಡದ ಓದುಗರಿಗೆ ಕೊಟ್ಟಿರುವ ಪ್ರದೀಪ್‌ ಬೇಲೂರು ಅವರು ಅಭಿನಂದನಾರ್ಹರು, ಅವರಿಂದ ಇನ್ನಷ್ಟು ಉತ್ತಮ ಕೃತಿಗಳು ಬರಲಿ ಎಂದು ತುಂಬು ಹೃದಯದಿಂದ ಹಾರೈಸುತ್ತೇನೆ. -ಆಶಾ ರಘು ಕಾದಂಬಗಾರ್ತಿ

₹120   ₹90

Buy Now
ಶಬರಿ | Shabari

nil

₹250   ₹223

Buy Now
ಶೂನ್ಯ | Soonya

nil

₹299   ₹266

Buy Now
ಶೋಧ | Shodha

nil

₹50   ₹45

Buy Now
ಶೌರ್ಯಮಲೆ ಅಯ್ಯಪ್ಪನ ಪೂಂಗಾವನ | Shouryamale Ayyappana Pungaavana

"ವೀರಮಣಿಕಂಠ ಶಬರಿಮಲೆಯಲ್ಲಿ ನಾಶವಾಗಿದ್ದ ಕ್ಷೇತ್ರವನ್ನು ಪುನರ್‌ನಿರ್ಮಾಣ ಮಾಟ ಶ್ರೀಧರ್ಮಶಾಸ್ತನಲ್ಲಿ ಐಕ್ಯನಾದ ರೋಮಾಂಚನಕಾರಿ ಕಥಾನಕ" ಶೌರ್ಯಮಲೆ ಕಾದಂಬರಿಯ ಓದಿನ ಯಾನ ಪೌರಾಣಿಕ ಚಲನಚಿತ್ರವೊಂದನ್ನು ನೋಡಿದ ಅನುಭವವನ್ನು ಕೊಡುತ್ತದೆ. ಓದುತ್ತಾ ನಾನು ಸಂತೋಷ ಕಂಡಿದ್ದೇನೆ: ಅದು ನಿರೂಪಣೆಯ ನಿರ್ವಹಣೆಯಲ್ಲಿ, ಶಬ್ದಗಳ ಸಂಯೋಜನೆಯಲ್ಲಿ, ಸನ್ನಿವೇಶಗಳ ಚಿತ್ರಣದಲ್ಲಿ, ಶಾಸ್ತ್ರೀಯ ವಿಷಯಗಳ ಪ್ರಸ್ತಾಪದಲ್ಲಿ ಹಾಗೂ ಅಯ್ಯಪ್ಪ ಸ್ವಾಮಿಯ ಮಹಿಮೆಯಲ್ಲಿ... ವಿದ್ವಾನ್ ಜಗದೀಶಶರ್ಮಾ ಸಂಪ ಪ್ರಖ್ಯಾತ ವಿದ್ವಾಂಸರು. ವಾಗಿ ಮತ್ತು ಬರಹಗಾರರು

₹280   ₹249

Buy Now
ಸಂತನ ಗತ ಪಾಪಿಯ ಭವಿಷ್ಯ | Santana gata papiya Bhavishya

ತನ್ನ ತಾಯ್ತಂದೆಯರೊಂದಿಗೆ ದುಷ್ಟ ಕೆಲಸಗಳಲ್ಲಿ ಪಾಲ್ಗೊಂಡ ಹದಿನೆಂಟರ ಕೃಷ್ಣಮುರಳಿಯು ಕೊಲೆಯ ಪ್ರಯತ್ನಕ್ಕೆ ಒಳಗಾಗಿ, ವಿದ್ಯಾಧಾಮವನ್ನು ನಡೆಸುತ್ತಿದ್ದ ಗುಣಶೇಖರಂ ಮಡಿಲಿಗೆ ಬಂದು ಬೀಳುತ್ತಾನೆ. ಆದರೆ ಈಗ ಸಂತರಂತಿರುವ ಗುಣಶೇಖರರ ಗತವು ಎಷ್ಟ ಭಯಾನಕವಾದದ್ದು!

₹170   ₹151

Buy Now
ಸತ್ಕುಲ ಪ್ರಸೂತರು | Satkula Prasutaru

ಹೀಗೆ, ಹಲವು ಪದರಗಳಿರುವ ನಿರೂಪಣೆ, ಹಲವು ಕೋನಗಳಿಂದ ನಡೆಯುವ ನಿರೂಪಣೆ ಇರುವ ಕನ್ನಡ ಕಾದಂಬರಿ ಓದಿ ಬಹಳ ಬಹಳ ವರ್ಷಗಳೇ ಕಳೆದಿವೆ. ಒಂದು ಮಾತಲ್ಲಿ ಹೇಳಬೇಕು ಅಂದರೆ ಇದು ನಾವು" ಬದುಕುತ್ತಿರುವ ಈ ೨೦೨೪ರ ಬದುಕಿಗೆ ನನ್ನ ತಲೆಮಾರಿನವರೊಬ್ಬರು ಅಮೆರಿಕದಲ್ಲಿ ಕೂತು ಹಿಡಿದಿರುವ ಕನ್ನಡಿ. ಬೇರೆ ಬೇರೆ ಕಾಲಘಟ್ಟಗಳಲ್ಲಿಯೂ ಬದಲಾಗದ ಸಮಸ್ಯೆಯನ್ನು 'ಸತ್ಕುಲಪ್ರಸೂತರು' ಪರಿಶೀಲಿಸಿದೆ. ಕಾದಂಬರಿಯೊಂದು ಕಥೆಯ ಕಾಲವನ್ನು ಹೇಗೆ ನಿರ್ವಹಿಸುತ್ತದೆ ಎಂಬುದು ಮುಖ್ಯ ಸಂಗತಿಯಾಗುತ್ತದೆ. ಈ ಕಾದಂಬರಿಯು ನವೋದಯ, ನವ್ಯಗಳ ಮಾರ್ಗವನ್ನು ಬಿಟ್ಟು ಕಾಲವನ್ನು ಕೌದಿಯ ಹಾಗೆ ಹೆಣೆದಿದೆ. ಇದು ಆತ್ಮಕಥೆಯೋ, ಸಮುದಾಯವೊಂದರ ಆಚರಣೆಗಳ ದಾಖಲೆಯೋ, ಹುಟ್ಟಿದ ನೆಲ ಮತ್ತು ಸಾಕಿದ ಕುಟುಂಬ, ನಂಟಸ್ತನ, ಪರಿಚಿತ ಉದ್ಯೋಗಗಳಿಲ್ಲದರಿಂದ ದೂರವಾಗಿ ಬದುಕುವ ಜನಸಮೂಹದ ಸ್ವವಿಮರ್ಶೆಯೋ, ಬರೆಯಲಿರುವ ಕಾದಂಬರಿಯೊಂದರ ಟಿಪ್ಪಣಿಯೋ, ಇದೇ ಕಾದಂಬರಿಯೋ, ಇಲ್ಲಿರುವಂಥ ನಿರೂಪಣೆ ಕಾದಂಬರಿಯ ನಿರೂಪಕನ ಅಗತ್ಯ ಮತ್ತು ಕಾದಂಬರಿಯ ಪಾತ್ರವೊಂದರ ಒತ್ತಾಯದಿಂದ ರೂಪುಗೊಂಡದ್ದೋ ಎಂದು 'ಸತ್ಕುಲಪ್ರಸೂತ'ರನ್ನು ಹಲವು ಕೋನಗಳಿಂದ ನೋಡಲು ಸಾಧ್ಯವಿದೆ. -ಓ ಎಲ್‌ ನಾಗಭೂಷಣ ಸ್ವಾಮಿ

₹295   ₹263

Buy Now
ಸತ್ತು | Sathu

nil

₹120   ₹107

Buy Now