ದೇಶ ವಿಭಜನೆಯನ್ನು ಕುರಿತು ಈಗಾಗಲೇ ಲೆಕ್ಕವಿಲ್ಲದಷ್ಟು ಪುಸ್ತಕಗಳು ಬಂದಿವೆ. ಹಾಗೆ ನೋಡಿದರೆ ಇದೊಂದು ಮುಗಿಯದ ಸರಕು.ಕಾಲದಿಂದ ಕಾಲಕ್ಕೆ ಈ ದುರಂತವು ಬೇರೆ ಬೇರೆ ಮಾಹಿತಿ, ಅಂಕಿ-ಅಂಶ,ಸಂಶೋಧನೆ, ಚರಿತ್ರೆಯ ಅಧ್ಯಯನಗಳೊಂದಿಗೆ ಹೊಸ ಹೊಸ ಕೃತಿಗಳನ್ನು ಸೃಷ್ಟಿಸುತ್ತಿದೆ. ಅಂದಂತೆ,ಭಾರತದಲ್ಲಿ ಸಮಾಜವಾದದ ಯುಗದಲ್ಲಿ ಒಬ್ಬರಾದ ರಾಮ ಮನೋಹರ ಲೋಹಿಯಾ ಅವರು, ಅಖಂಡ ಭಾರತದ ಇಬ್ಭಾಗಕ್ಕೆ ನೇರ ಸಾಕ್ಷಿಯಾಗಿದ್ದವರು. ನೇರ ನಡೆ-ನುಡಿಗಳಿಗೆ ಮತ್ತು ನಿಲುವುಗಳಿಗೆ ಹೆಸರಾಗಿದ್ದ ಅವರು, ಭಾರತದ ಚಿಂತಕರ ವರ್ತುಲ ಮತ್ತು ಸಾರ್ವಜನಿಕ ಬದುಕಿನ ಮೇಲೆ ಬೀರಿರುವ ಪ್ರಭಾವ ಅಗಾಧವಾದುದು.ಅದರಲ್ಲೂ ಲೋಹಿಯಾ ಅವರು ದೇಶ ವಿಭಜನೆಗೆ ಕಾರಣರಾದವರು ಯಾರೆಂದು ಬಗೆದು ನೋಡಿ ಬರೆದಿರುವ The Guilty Men of India's Partition ಅತ್ಯಂತ ಮಹತ್ವದ ಕೃತಿಯಾಗಿದೆ.ಇದನ್ನು ಹೆಸರಾಂತ ಲೇಖಕ ಡಾ.ಟಿ ಎನ್ ವಾಸುದೇವಮೂರ್ತಿ ಅವರು "ದೇಶ ವಿಭಜನೆಯ ಪಾಪ ಹೊತ್ತವರು" ಎನ್ನುವ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿ ಕೊಟ್ಟಿದ್ದಾರೆ. ಇದಕ್ಕಾಗಿ ನಾವು ಅವರಿಗೆ ಆಭಾರಿಗಳಾಗಿದ್ದೇವೆ ದೊಡ್ಡದೊಡ್ಡ ಪದಗಳ ಬಾರವಿಲ್ಲದೆ ಸಹಜವಾದ ತಿಳಿಗನ್ನಡದಲ್ಲಿ ಮೂಡಿಬಂದಿರುವ ಈ ಭಾಷಾಂತರವು ಕನ್ನಡ ವಾಙ್ಮಯಕೊಂದು ಬೆಲೆಯುಳ್ಳ ಸೇರ್ಪಡೆಯಾಗಿದೆ
#
nil
ಸಮಲೈಂಗಿಕತೆ ಎಂದರೇನು? ನಮ್ಮ ಧರ್ಮಗಳು ಇದನ್ನು ಕುರಿತು ಏನು ಹೇಳುತ್ತವೆ? ಹಿಂದೂ ಪೌರಾಣಿಕ ಧರ್ಮ ಗ್ರಂಥಗಳು, ಇಸ್ಲಾಂ, ಜೈನ ಹಾಗೂ ಬೌದ್ಧ ಧರ್ಮಗಳು ಸಾಮಾಜಿಕವಾಗಿ ಈ ಬಗ್ಗೆ ಏನನ್ನು ಹೇಳುತ್ತವೆ? ಆಧುನಿಕ ದೃಷ್ಟಿಕೋನದಿಂದಲೂ, ಪೌರಾಣಿಕ ಸಾಹಿತ್ಯದ ವೈವಿಧ್ಯಮಯ ವಿಶ್ಲೇಷಣೆಯ ಮೂಲಕವೂ, ಪ್ರಖ್ಯಾತ ಚಿಂತಕರಾದ ದೇವದತ್ತ ಪಟ್ಟನಾಯಕ ಸಮಲೈಂಗಿಕತೆ ಕುರಿತಾದ ಆಳವಾದ ಚರ್ಚೆಯನ್ನು ಈ ಕೃತಿಯಲ್ಲಿ ಮಂಡಿಸಿದ್ದಾರೆ. ಪೌರಾಣಿಕ ದಂತಕಥೆಗಳು, ಶಿಲ್ಪಕಲಾ ಪರಂಪರೆ, ಪುರಾತನ ಗ್ರಂಥಗಳು, ಹೀಗಾಗಿ ವಿವಿಧ ಸಂಸ್ಕೃತಿಗಳ ಪಾರದರ್ಶಕ ಅಧ್ಯಯನ ಈ ಕೃತಿಯ ವೈಶಿಷ್ಟ್ಯವಾಗಿದೆ. ಇದು ಧರ್ಮ ಮತ್ತು ಸಮಲೈಂಗಿಕತೆ ನಡುವಿನ ಸಂಬಂಧದ ಕುರಿತಾದ ಅನ್ವೇಷಣೆ, ಪುರಾಣಗಳು ಮತ್ತು ಸಮಾಜದ ನಡುವಿನ ಸಂವಾದ. ಪ್ರಗತಿಶೀಲ ಯೋಗ್ಯತೆ ಮತ್ತು ಮಾನವೀಯತೆಗೆ ಒಲವು ಇರುವ ಪ್ರತಿಯೊಬ್ಬರಿಗೂ ಈ ಕೃತಿ ಓದಲು ತಕ್ಕದ್ದು.
Showing 2101 to 2130 of 5061 results