• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ನಾವು ಮೂರ್ಖ ಮಾನವರಲ್ಲವೇ? | NAAVU MOORKHA MAANAVARALLAVE?

ಆ ಕ್ಷಣದ ಸತ್ಯಗಳಿವು. ಥಟ್ಟನೆ ಹೊಳೆದದ್ದನ್ನು ಹೊಳಪಾಗಿಸಲು ಹೋಗದೇ ಹೊಳೆದಂತೆ ಬರೆದಂಥ ಟಿಪ್ಪಣಿಗಳು. ಇಲ್ಲಿ ದಿನನಿತ್ಯದ ಸಂಭ್ರಮ, ಉಲ್ಲಾಸ, ದುಗುಡ, ಆತಂಕ, ಉಪದೇಶ, ಪ್ರಶ್ನೆ, ಬೆರಗು ಎಲ್ಲವೂ ಇದೆ. ಪಳಗಿದ ಲೇಖಕನ ಕೈಗೆ ಸಿಕ್ಕರೆ ಈ ಟಿಪ್ಪಣಿಗಳು ಕತೆಯೋ ಕವಿತೆಯೋ ಆಗುತ್ತದ್ದಿವು. ಸಾವು, ಬದುಕು, ವೇದಾಂತ, ತಮಾಷೆ, ಏಕಾಂತ, ವಿಷಾದ-ಎಲ್ಲವನ್ನೂ ವಿನಯ್‌ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ದಾಖಲಿಸಿದ್ದಾರೆ. ಬದುಕಿಗೆ ಭಾಷ್ಯ ಬರೆಯುವ ಆಸೆ ನಮ್ಮೆಲ್ಲರಿಗೂ ಇರುತ್ತದೆ. ಬದುಕನ್ನು ಹಿಡಿಯುವುದಕ್ಕೆ ಸುದೀರ್ಘ ಬರಹ ಬೇಕೇ ಅಥವಾ ಪುಟ್ಟ ಪುಟ್ಟ ಪ್ರಸಂಗಗಳಲ್ಲಿ ದಿನನಿತ್ಯದ ತವಕ ತಲ್ಲಣಗಳನ್ನು ಹಿಡಿದಿಡಬಹುದೇ ಎಂಬ ಉತ್ತರವಿಲ್ಲದ ಪ್ರಶ್ನೆಯನ್ನು ಮುಂದಿಟ್ಟುಕೊಂಡೇ ಈ ಬರಹಗಳನ್ನು ಓದಬೇಕು. ನನಗೆ ಇಷ್ಟವಾದದ್ದು ವಿನಯ್‌ ಅವರ ಬರಹದ ವಿಸ್ತಾರ ಮತ್ತು ವಿನಯ. ಅವರದು ಉಪದೇಶದ ಧಾಟಿ ಅಲ್ಲ, ಅರಿತುಕೊಳ್ಳುವ ಹಾದಿ. ತನಗೆ ಅನ್ನಿಸದ್ದಿನ್ನು ಓದುಗರ ಮುಂದಿಟ್ಟು ವಿಧೇಯ ವಿದ್ಯಾರ್ಥಿಯಂತೆ ಕೈ ಕಟ್ಟಿ ನಿಲ್ಲುವ ಅವರ ಸಜ್ಜನಿಕೆ ಮತ್ತು ಸರಳತೆ ಈ ಬರಹಗಳಲ್ಲೂ ಕಾಣಿಸುತ್ತದೆ. ಇವು ನಿಮ್ಮಲ್ಲೂ ಅನೇಕ ನೆನಪುಗಳನ್ನು ಉಕ್ಕಿಸಬಹುದು. ನಿಮ್ಮನ್ನೂ ಆಲೋಚನೆಗೆ ಹಚ್ಚಬಹುದು. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ವಿಚಿತ್ರವಾದ ನಡವಳಿಕೆಗಳನ್ನು ಮತ್ತೊಮ್ಮೆ ನೋಡಿಕೊಂಡು ತಮಾಷೆ ಮಾಡಿಕೊಳ್ಳುವ ಸದ್ಗುಣವನ್ನು ಕರುಣಿಸಬಹುದು. ಅಷ್ಟರ ಮಟ್ಟಿಗೆ ಇವು ಸಾರ್ಥಕ. -ಜೋಗಿ

₹180   ₹160

ನಾವು ಶಿಕ್ಷಕರು ಬದಲಾಗೋಣ | Naavu Shikshakaru Badalaagona

ಕಳೆದ ನಾಲ್ಕು ದಶಕಗಳಿಂದ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳು ಹಾಗೂ ಒಲವುನಿಲುವುಗಳ ಬಗ್ಗೆ ಅನನ್ಯವಾದ ರೀತಿಯಲ್ಲಿ ಬರವಣಿಗೆ ಮತ್ತು ಸಾರ್ವಜನಿಕ ಸಂಕಥನಗಳಲ್ಲಿ ನಾಡಿನ ಹೆಸರಾಂತ ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ, ಪಠ್ಯಪುಸ್ತಕಗಳ ರಚನೆ, ಶಿಕ್ಷಕರ ಶಿಕ್ಷಣ, ಮೌಲ್ಯ ಶಿಕ್ಷಣ, ಡಿಜಿಟಲ್ ಮಾಧ್ಯಮ ಇವೇ ಮೊದಲಾದ ಚರ್ಚಾರ್ಹ ವಿಚಾರಗಳಿಗೆ ಅಭಿಮುಖವಾಗಿ ಏನಾಗಿದೆ? ಏನಾಗಬೇಕಾಗಿದೆ ಎಂಬುದನ್ನು ತಲಸ್ಪರ್ಶಿಯಾಗಿ ವಿಶ್ಲೇಷಿಸಿ ಅತ್ಯಂತ ಖಚಿತವಾಗಿ ತಮ್ಮ ನಿಲುವುಗಳನ್ನು ಡಾ.ರಾವ್ ಇಲ್ಲಿ ಮಂಡಿಸಿದ್ದಾರೆ. ನಾವು ಅಷ್ಟಾಗಿ ಗಮನ ಕೊಡದ ಜಿಡ್ಡು ಕೃಷ್ಣಮೂರ್ತಿ, ಡಾ. ಅಂಬೇಡ್ಕರ್, ಡಾ. ಜೆಪಿ ನಾಯ್ಕ ಮುಂತಾದ ಚಿಂತಕರ ಶಿಕ್ಷಣ ದರ್ಶನಗಳ ಮೇಲೆ ವಿಶ್ಲೇಷವಾದ ಬೆಳಕು ಚೆಲ್ಲಿ ಸದ್ಯದ ಸಂದರ್ಭದಲ್ಲಿ ಅವರ ಮಹತ್ತ್ವವನ್ನು ಮನಗಾಣಿಸಿದ್ದಾರೆ. ಆಧುನಿಕೋತ್ತರ ಸಂದರ್ಭದಲ್ಲಿ ನಾಡಿನ ಶೈಕ್ಷಣಿಕಪ್ರಗತಿ ಹೇಗಾಗಬೇಕು, ಬೋಧನೆ ಕಲಿಕೆ ಹೇಗೆ ಉತ್ಕೃಷ್ಟಗೊಳ್ಳಬೇಕು ಮತ್ತು ಬಹಳ ಮುಖ್ಯವಾಗಿ ಶೈಕ್ಷಣಿಕ ಪ್ರಕ್ರಿಯೆಯ ಹೃದಯವೇ ಆಗಿರುವ ಶಿಕ್ಷಕರು ಹೇಗೆ ಬದಲಾಗಬೇಕು ಎಂಬುದನ್ನು ಡಾ. ರಾವ್ ಈ ಸಂಕಲನದ ಲೇಖನಗಳಲ್ಲಿ ಮಾರ್ಮಿಕವಾಗಿ ಪ್ರತಿಪಾದಿಸಿದ್ದಾರೆ. ಅಪಾರ ಅನುಭವ ಮತ್ತು ಅಧ್ಯಯನದ ಸಂಗಮವಾದ ಈ ಕೃತಿ ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವವರ ಅದರಲ್ಲೂ ಪ್ರಮುಖವಾಗಿ ಶಿಕ್ಷಕರ ಮತ್ತು ಶಿಕ್ಷಣದ ವಿದ್ಯಾರ್ಥಿಗಳ ಕಣ್ಣು ತೆರೆಸುವ ಬೆಳಕಿನ ಹಾದಿ.

₹220   ₹196

ನಾಸು | Naasu

nil

₹250   ₹223