nil
ಕನ್ನಡದಲ್ಲಿ ಮಕ್ಕಳ ಕಾವ್ಯ ಬೆಲ್ಲದಚ್ಚಿನಂತೆ ಒಂದು ಚೌಕಟ್ಟಿಗೆ ಒಳಪಟ್ಟಿತ್ತು. ಯಾವ ಆಲೆಮನೆಯಲ್ಲಿ ತಯ್ಯಾರಾದರೂ, ಕಂಡರೂ ಒಂದೇ ತರಹ; ತಿಂದರೂ ಒಂದೇ ರುಚಿ. ಆಗ ಮಕ್ಕಳೂ ಅದನ್ನೇ ಇಷ್ಟಪಟ್ಟು ತಿನ್ನುತ್ತಿದ್ದವು. ಆದರೆ ಈಗ ಕಾಲ ಬದಲಾಗಿದೆ; ಮಕ್ಕಳೂ ಬದಲಾಗಿದ್ದಾರೆ ಈಗಿನ ಕಾಲದ ಮಕ್ಕಳ ಪರಿಸರ, ದೃಷ್ಟಿ, ಆಶಯ, ಚಿಂತನೆ ಎಲ್ಲವೂ ನಮಗೆ ನಿಲುಕದ್ದು. ಇಂಥ ಕಾಲಘಟ್ಟದಲ್ಲಿ ಸಹೃದಯ ಮಿತ್ರರಾದ ಸುರೇಶ ಕಂಬಳಿಯವರು ಮಕ್ಕಳ ಕೈಗೆ 'ನೀಲಿಕೊಡೆ' ಎಂಬ ಕವನ ಸಂಕಲನ ನೀಡಿ ಸಂತುಷ್ಟಗೊಳಿಸಲು ಹೊರಟಿದ್ದಾರೆ. ಏನೋ ಹೊಸತನ್ನು ಕೊಡಬೇಕೆಂಬ ಮನಸ್ಸು ಮಾಡಿದ್ದಾರೆ. ಅವರ ಪ್ರಯತ್ನ ಯಶದ ಹಾದಿಯಲ್ಲಿದೆ. ಆರಂಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ. ಈಗ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿರುವ ಕಂಬಳಿಯವರಿಗೆ ಸದಾ ಮಕ್ಕಳ ಒಡನಾಟದ ಸೌಭಾಗ್ಯವಿದೆ. ಈಗಾಗಲೇ ಎರಡು ಮಕ್ಕಳ ಕವನ ಸಂಕಲನಗಳನ್ನು ಹೊರತಂದಿದ್ದಾರೆ. ಈ ಹೊಸ ಸಂಕಲನದಲ್ಲಿ ಅವರ ಕಾವ್ಯದ ವಸ್ತುಗಳು ಹಳೆಯದಾಗಿ ತೋರಿದರೂ ವಿಶಿಷ್ಟ ಶೈಲಿಯಿಂದ ಗಮನ ಸೆಳೆಯುತ್ತವೆ. ಚಂದ ಚಂದ ಮಾತನಾಡುವ 'ಮುದ್ದು ತಂಗಿ', ಮಕ್ಕಳಾಟಿಕೆ ಅಡ್ಡಿಪಡಿಸಿಯೂ ಖುಷಿ ಕೊಡುವ 'ಮಳೆ'ಯಂತಹ ಸೆಳೆಯುವ ಕವಿತೆಗಳೂ ಇಲ್ಲಿವೆ. ನಾಟಕ, ಚಿತ್ರಗೀತೆ, ಕಿರುಚಿತ್ರ ನಿರ್ದೇಶನ, ಮಕ್ಕಳ ಸಾಹಿತ್ಯ ಎಲ್ಲ ಕಡೆ ಕೈ ಹಾಕುತ್ತ ಮುಂದೆ ಸಾಗುತ್ತಿರುವ ಸುರೇಶ ಕಂಬಳಿಯವರು ಮಕ್ಕಳ ಸಾಹಿತ್ಯದತ್ತ ಹೆಚ್ಚು ಒಲವು ತೋರಲಿ. ಹಳೆಯ ಸರಕುಗಳ ಸುತ್ತವೇ ಗಿರಕಿ ಹೊಡೆಯುತ್ತ ಸೊರಗುತ್ತಿರುವ ಮಕ್ಕಳ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿ ಮಕ್ಕಳ ಕಣ್ಮಣಿ ಆಗಲಿ ಎಂದು ಆಶಿಸುವೆ.
#
ಪಾಟೀಲ್ ಪುಟ್ಟಪ್ಪ
ಗಂಗಾವತಿ ಪ್ರಾಣೇಶ್
1) ಕರ್ನಾಟಕದ ಆಕಾಶವಾಣಿ ಕೇಂದ್ರಗಳು ಯಾವಾಗ ಆರಂಭ ಗೊಂಡವು , ಗೊತ್ತೇ ? 2) ದೇಶದ ಮೊದಲ ಖಾಸಗಿ ವಾಹಿನಿ ನಮ್ಮ ಮೈಸೂರಿನ ಕಥೆ ಗೊತ್ತೇ ? 3) ಮೈಸೂರು ಬೆಂಗಳೂರಾಗಿದ್ದು, 19 ವರ್ಷ ಸ್ಥಗಿತಗೊಂಡಿದ್ದು, ಪುನರಾರಂಭ ಗೊಂಡದ್ದು ತಿಳಿದಿದೆಯೇ ? 4) ದೊರೆಸ್ವಾಮಿ ಆಯ್ಯಂಗಾರ್, ಆರ್.ಕೆ ಶ್ರೀಕಂಠನ್ , ಮೈಸೂರು ವಾಸುದೇವಾಚಾರ್ಯರ ಮೊಮ್ಮಗ ಎಸ್ ಕೃಷ್ಣಮೂರ್ತಿ, ಎಚ್ ಕೆ ನಾರಾಯಣ, ಪದ್ಮಚರಣ ಮೊದಲಾದ ಸಂಗೀತ ಮಾಂತ್ರಿಕರು ಆಕಾಶ ವಾಣಿಯಲ್ಲಿ 30 ವರ್ಷಗಳಿಗೂ ಮೀರಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಬಲ್ಲಿರಾ ? 5) ಆಕಾಶವಾಣಿ 1954 ರಲ್ಲೇ ಆಹ್ವಾನಿತ ಶ್ರೋತೃಗಳ ಸಮ್ಮುಖದಲ್ಲಿ ಸಂಗೀತ ಕಛೇರಿ ಏರ್ಪಡಿಸುತ್ತಿತ್ತು ಅಂದರೆ ಆಶ್ಚರ್ಯ ಆಗುತ್ತದೆಯೇ? 6) ಧ್ವನಿಪರೀಕ್ಷೆ ಹೇಗೆ ನಡೆಯುತ್ತಿತ್ತು, ಅದಕ್ಕೆ ನಿಯಮಾವಳಿಗಳು ರೂಪುಗೊಂಡ ಬಗೆ ಎಂಥ ಚೆಂದ ಗೊತ್ತೇ ? 7) ಆಕಾಶವಾಣಿ ರೂಪಕ , ಆಕಾಶವಾಣಿ ನಾಟಕ ಲೋಕದಲ್ಲಿ ಸಂಚರಿಸಿದ್ದೀರಾ.. 8) ವಿಜ್ಞಾನ ಸರಣಿಗಳನ್ನು , ಸರಳ ವಾಗಿ ರೂಪಿಸಿ, ದೇಶದಲ್ಲೇ ಖ್ಯಾತಿ ಪಡೆದ ಬೆಂಗಳೂರು ಆಕಾಶವಾಣಿ ಪ್ರಯೋಗಗಳು.. ಅಬ್ಬಾ....! 9) ಕೃಷಿ ಪಾಠ ಶಾಲೆಯಲ್ಲಿ ಹಸು ಕರು ಎತ್ತು ಎಮ್ಮೆ ಕೋಳಿ ಬಹುಮಾನ ಕೊಟ್ಟರು. ರೈತರಿಗೆ ಬೋರೆವೆಲ್ ತೋಡಿಸಿಕೊಟ್ಟರು. ಕೇಳಿದ್ದೀರಾ? 10) ಆಕಾಶವಾಣಿ ಚಿತ್ರಗೀತೆ ಆಧಾರಿತ ಕಾರ್ಯಕ್ರಮ ಗಳನ್ನು ಉದ್ಘೋಷಕರು ಪಾಳಿಗಳಲ್ಲಿ ಪ್ರಸ್ತುತಪಡಿಸುತ್ತಾರೆ. ಅವರ ಅನಿಸಿಕೆಗಳು ಮನದ ಮಾತು ಕೇಳಿದ್ದೀರಾ.... ............ ಇಂಥಹ ಹತ್ತು ಹಲವು ವಿಚಾರಗಳನ್ನು ಹೊತ್ತು ತರುತ್ತಿದೆ, "ನುಡಿ ತೇರನೆಳೆದವರು, ಬಾನುಲಿ ಕಲಿಗಳು" ಪುಸ್ತಕ. 1940 ರಿಂದ 1990 ರ ಅವಧಿಯಲ್ಲಿ ಆಕಾಶವಾಣಿಯಲ್ಲಿ ಸೇವೆ ಸಲ್ಲಿಸಿದ ದಿಗ್ಗಜ ಪ್ರಸಾರಕರ ವ್ಯಕ್ತಿಚಿತ್ರಗಳನ್ನು ಪರಿಚಯಿಸುತ್ತಿದೆ "ನುಡಿ ತೇರ ನೆಳೆದವರು" ಪುಸ್ತಕ. ಕರ್ನಾಟಕದ ಆಕಾಶವಾಣಿ ಕೇಂದ್ರಗಳಲ್ಲಿ ನಡೆದ ಕೆಲಸಗಳ ಸ್ಥೂಲ ದಾಖಲೀಕರಣ! ಕರುನಾಡ ಕೊರಳಿನ ಕಥೆಗಳು ! ! ಪ್ರಯೋಗಗಳು, ಪರಿಕಲ್ಪನೆಗಳು !! ಇಂಥ ಒಂದು ಪ್ರಯತ್ನ , ದೇಶದಲ್ಲಿ ಮೊದಲು ಎಂದಿದ್ದಾರೆ ಹಲವಾರು ಪರಿಣತರು. ಬನ್ನಿ, ನುಡಿ ತೇರ ಎಳೆದ ದಿಗ್ಗಜರಿಗೆ ನಮಸ್ಕಾರ ಮಾಡೋಣ. ಕನ್ನಡ ಭಾಷೆಗೆ , ಸಂಗೀತ , ಸಾಂಸ್ಕೃತಿಕ ಲೋಕಕ್ಕೆ ಆಕಾಶವಾಣಿ ನೀಡಿದ ಕೊಡುಗೆಗಳನ್ನು ಸ್ಮರಿಸೋಣ
Showing 2581 to 2610 of 5051 results