ವರದಾ ತೀರದ ಕಥೆಗಳನ್ನು ಓದುತ್ತಾ ಮನಸಾರೆ ನಕ್ಕಿದ್ದೇನೆ. ಅರಿವಿಲ್ಲದೇ ಕಣ್ಣಂಚಿನಲ್ಲಿ ಬಂದ ನೀರನ್ನು ಒರೆಸಿಕೊಂಡಿದ್ದೇನೆ. ಹೀಗಾಗಬಾರದಿತ್ತು ಎಂದು ನೊಂದುಕೊಂಡಿದ್ದೇನೆ. ಬರಹಗಾರನ ಕಥೆಯ ಭಾವಕ್ಕೆ ಓದುಗನ ಭಾವನೆಗಳು ಹೊಂದಿದ್ದೇ ಆದರೆ ಕಥಾಪ್ರಸವ ಅನುಭವಿಸಿದ ಕಥೆಗಾರನಿಗೂ ನೆಮ್ಮದಿಯ ನಿಟ್ಟುಸಿರು. ರವೀಂದ್ರ ಮುದ್ದಿಯವರ ಸಿನಿಮಾ, ಟಿವಿಗಳಲ್ಲಿ ಇನ್ನೂ ಬಳಕೆಯಾಗದ ಜವಾರಿ ಭಾಷೆಯ ಪದ ಪ್ರಯೋಗ ಮಾತ್ರ ಅದ್ಭುತ. ವರದಾ ತೀರದ ಕತೆಗಳನ್ನು ಓದುತ್ತಿದ್ದರೆ ನಮಗೆ ಗೊತ್ತಿಲ್ಲದಂತೆ ನಾವು ಆಡಿ ಬೆಳೆದ ನಮ್ಮೂರು ಚಿತ್ರಣ ಕಣ್ಮುಂದೆ ಮುಂದೆ ಬರುವುದು ಗ್ಯಾರಂಟಿ.
ತನಗೆ ತಾನು ಬಹುತೇಕ ಅನುಕೂಲ ಕಲ್ಪಿಸಿಕೊಳ್ಳಲಿಕ್ಕಾಗಿ ಲೋಕವು ತನ್ನದೇ ಕೆಲಪಾಲನ್ನು ಪ್ರತಿಕೂಲಕ್ಕೆಂದು ಮೀಸಲಿಡುತ್ತದೆ. ಇಲ್ಲಿರುವ ಕೆಲವೇ ಕೆಲಮಂದಿಯೂ ಹೀಗೇ.. ಬಹುತೇಕರಿಗೆ ಸ್ವರ್ಗ ದಕ್ಕಿಸಲೆಂದು ನರಕದಂತಹ ಕೋಟಲೆಯನ್ನೂ ಒಪ್ಪಿ ಅಪ್ಪಿಕೊಳ್ಳುತ್ತಾರೆ. -ಫೈರುಪೀಸ್ ಫೀಸ್ ಕತೆಯ ಮುಮ್ಮಾತು
Showing 31 to 32 of 32 results