• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಇಂಗ್ಲಿಷ್ ಮೂಲಕ ಕನ್ನಡ ಕಲಿಯಿರಿ | English mulaka kannada kaliyiri

ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ

₹195   ₹174

Buy Now
ಇಚಿಗೊ ಇಚಿಯೆ | Ichigo Ichie

ಬದುಕಿನ ಪ್ರತಿ ಕ್ಷಣವನ್ನೂ, ಅದು ಒಂದೇ ಬಾರಿಗೆ ನಮಗೆ ಸಿಗುವುದು ಎಂಬಂತೆ ಅನುಭವಿಸಬೇಕಾದರೆ ಈ ಕೃತಿ ನಿಮಗೆ ಒಳ್ಳೆಯ ಮಾರ್ಗದರ್ಶಿಯಾದೀತು. ಈ ‘ಇಚಿಗೊ ಇಚಿಯೆ’ ಎಂಬ ಜಪಾನಿ ಕಲೆಯ ಬಗ್ಗೆ, ಅತ್ಯಧಿಕ ಮಾರಾಟವಾಗುವ ‘ಇಕಿಗಾಯ್ʼನ ಲೇಖಕರೇ ಬರೆದಿರುವ ಪುಸ್ತಕ ಇದಾಗಿದೆ. “ತಮಗೆ ಖುಷಿ ಕೊಡುವ ಸಂಗತಿಗಳನ್ನು ಮಾಡುವ ಮೂಲಕ ತಮ್ಮ ಬದುಕನ್ನು ಸರಳಗೊಳಿಸಬೇಕು ಎಂದು ಇಕಿಗಾಯ್ ಪ್ರತಿಯೊಬ್ಬರನ್ನೂ ಆಗ್ರಹಿಸುತ್ತದೆ” (ಮೇರಿ ಕೊಂಡೊ). ನಮ್ಮ ಜೀವನದಲ್ಲಿ ಪ್ರತಿ ಕ್ಷಣವೂ ಒಂದೇ ಬಾರಿಗೆ ಸಂಭವಿಸುತ್ತದೆ ಮತ್ತು ಅದನ್ನು ನಾವು ಕೈಚೆಲ್ಲಿದರೆ ಅದನ್ನು ಶಾಶ್ವತವಾಗಿ ಕಳೆದುಕೊಂಡಂತೆ- ಜಪಾನಿನ ನಾಣ್ಣುಡಿ ‘ಇಚಿಗೊ ಇಚಿಯೆ’ಯಿಂದ ಆಯ್ದುಕೊಂಡಿರುವ ಒಂದು ಉಪಾಯ. ಇದು, ಝೆನ್ ಬೌದ್ಧ ಧರ್ಮದ ತತ್ವವಾಗಿದೆ. ಇದನ್ನು ಹದಿನಾರನೇ ಶತಮಾನದ ಓರ್ವ ಟೀ ಮಾಸ್ಟರ್‌ಗೆ ಸಮರ್ಪಿಸಲಾಗಿದ್ದು, ಅವರ ಚಹಾ ಕೂಟಗಳ ಆಚರಣೆಗಳಲ್ಲಿ, ವರ್ತಮಾನ ಕ್ಷಣದ ಮೇಲೆ ಹೇಗೆ ಗಮನ ಕೇಂದ್ರೀಕರಿಸಬೇಕು ಎಂಬುದನ್ನು ತೋರಿಸಿಕೊಡಲಾಗಿದೆ. ಇದನ್ನು ‘ಗಮನದ ಕೂಟ’ ಎಂದೂ ಕರೆಯಲಾಗುತ್ತದೆ. ಹಳೆಯ ಕಾಲದ ಈ ಆಚರಣೆಯಿಂದ, ನಮ್ಮಲ್ಲಿ ಸಾವಧಾನತೆ ಮೈದುಂಬಿಕೊಳ್ಳುತ್ತದೆ. ಇಚಿಗೊ ಇಚಿಯೆ ಎಂಬ ಈ ಪುಸ್ತಕದ ಮೂಲಕ, ಪ್ರಸ್ತುತ ಕ್ಷಣದಲ್ಲಿರಲು ಪಂಚೇಂದ್ರಿಯಗಳನ್ನು ಹೇಗೆ ಬಳಸಬೇಕು ಎಂಬ ಬಗ್ಗೆ ನೀವು ಕಲಿಯುತ್ತೀರಿ. ನಾವು ಪ್ರತಿಯೊಬ್ಬರೂ, ಗಮನ ಎಂಬ ಬಾಗಿಲನ್ನು ತೆರೆಯುವ, ಇತರರೊಂದಿಗೆ ಸೌಹಾರ್ದದಿಂದಿರುವ ಮತ್ತು ಜೀವನದೆಡೆಗಿನ ಪ್ರೀತಿಯ ಕೀಲಿಕೈಯನ್ನು ಹೊಂದಿರುತ್ತೇವೆ. ಆ ಕೀಲಿಕೈಯೇ ಇಚಿಗೊ ಇಚಿಯೆ. “ನಮ್ಮ ಚೈತನ್ಯವನ್ನು ಬಡಿದೆಬ್ಬಿಸಿ, ‘ಈ ಕ್ಷಣ’ದಲ್ಲಿ ಬದುಕುವುದರ ಮಹತ್ವವನ್ನು ನಮಗೆ ನೆನಪಿಸಲು ಹಾಗೂ ಭೂತಕಾಲ ಇಲ್ಲವೇ ಭವಿಷ್ಯದ ಬಗ್ಗೆ ಚಿಂತಿಸದೇ ಬದುಕುವುದನ್ನು ನೆನಪಿಸಲು ಈ ಸಣ್ಣ ಪುಸ್ತಕ ಸಾಕು”- ೫* ಓದುಗರ ವಿಮರ್ಶೆ “ಈ ಪುಸ್ತಕವು ನಮಗೆ ಅಲಾರ್ಮ್ ನಂತೆ ಕೆಲಸ ಮಾಡಬೇಕು. ಪ್ರತಿಯೊಂದು ‘ಕ್ಷಣ’ವನ್ನೂ ಪವಿತ್ರಗೊಳಿಸಲು ಗಮನ ಕೊಡಿ! ಪ್ರತಿ ಕ್ಷಣವನ್ನೂ ವಿಶೇಷವಾಗಿಸಿ!!”- ೫* ಓದುಗರ ವಿಮರ್ಶೆ “ಇಕಿಗಾಯ್ ಲೇಖಕರು ಸರಳವಾದ ಮತ್ತು ಹೆಚ್ಚು ಪರಿಪೂರ್ಣವಾದ ಬದುಕು ಬಾಳಲು ಇಚ್ಛಿಸುವವರಿಗೆ ಮತ್ತೊಂದು ಸಂಕ್ಷಿಪ್ತವಾದ ಮತ್ತು ಪಾಂಡಿತ್ಯಪೂರ್ಣ ಸೇರ್ಪಡೆಯನ್ನು ಮಾಡಿದ್ದಾರೆ”- ೫* ಓದುಗರ ವಿಮರ್ಶೆ

₹150   ₹134

Buy Now
ಇತಿಹಾಸ - Ku | hithihasa - KU

ಕು ಮಂಜುನಾಥ್ , ಅಶೋಕ್ ಹಂಜಗಿ

₹180   ₹160

Buy Now
ಇತಿಹಾಸ -ಐಚ್ಚಿಕ | Hithohasa Ichika

ಎ ಸುಬ್ರಮಣಿ

₹380   ₹338

Buy Now
ಇತಿಹಾಸ | hithihasa

ಜೆ ರಂಜಾನ್ , ವಿ ಸಿ ರುದ್ರಾಣಿ

₹125   ₹111

Buy Now
ಇತಿಹಾಸದ ಪುಟಗಳಿಂದ... | Itihaasada Putagalinda...

ಇಲ್ಲಿನ ಕಥೆಗಳಲ್ಲಿ ಟರ್ಕಿಯ ಒಟ್ಟೋಮನ್ ಸುಲ್ತಾನರ ಅಂತಃಪುರದ ಬೇಗುದಿಯ ಸುಡುಶಾಖವಿದೆ, ನಮ್ಮದೇ ಕೆಂಪೇಗೌಡರ ಕಾಲದ ಹೆಣ್ಣುಮಗಳೊಬ್ಬಳ ಬಲಿದಾನದ ಮೇಲೆ ಇದೆ, ರಾಷ್ಟ್ರಕೂಟರ ಅರಸರ ಆಸ್ಥಾನದಲ್ಲಿನ ಪ್ರಜೆಗಳ ಒಕ್ಕೊರಲ ಸದ್ದು ಇದೆ, ಪಾಳೇಗಾರರ ಶೌರ್ಯ ಇದೆ. ಮಹಾನ್ ರಾಜರ ಆಡಳಿತದಲ್ಲಿ ಆಗಿಹೋದ ಸಾಮಾನ್ಯರ ಅಸಾಮಾನ್ಯ ಕಥೆಗಳೂ ಇವೆ. ವಿಜಯನಗರ ಅರಸರು, ಕೆಳದಿಯ ರಾಜರು, ಆದಿಲ್ ಶಾಹಿಗಳು, ಸುಲ್ತಾನರು, ಹೈದರಾಲಿಯಂಥವರೆಲ್ಲ ಇಲ್ಲಿ ತಂತಮ್ಮ ಆಸ್ಥಾನಗಳಲ್ಲಿದ್ದಾರೆ, ಸಾಮಂತ ರಾಜರು ಸಿರಿವಂತಿಕೆ ಮೆರೆಯುತ್ತಿದ್ದಾರೆ, ನಾಡು-ನುಡಿಯ ವೈಭವವಂತೂ ಕಳೆಗಟ್ಟಿದೆ. ಚರಿತ್ರೆಯ ಬಗೆಬಗೆ ಪುಟಗಳು ಕುತೂಹಲಕರ ಕಥೆಗಳಾಗಿ ತೆರೆದುಕೊಂಡಿರುವ ರೀತಿ ಇದು. ವಿಜಯ ಕರ್ನಾಟಕ-ವೀರಲೋಕ ಜಂಟಿಯಾಗಿ ಆಯೋಜಿಸಿದ್ದ 2025ರ ದೀಪಾವಳಿ ಕಥಾಸ್ಪರ್ಧೆಯಲ್ಲಿ ಅಗ್ರ 25 ಸ್ಥಾನ ಗಳಿಸಿದ ಕಥೆಗಳ ಗುಚ್ಛ ಇದು. ಐತಿಹಾಸಿಕ ಕಥೆಗಳ ಕೃಷಿ ಕನ್ನಡದಲ್ಲಿ ಆಗಿರುವುದು ಕಡಿಮೆ. ಇಂಥ ಸಂದರ್ಭದಲ್ಲಿ ಕನ್ನಡದ ಕಥೆಗಾರರನ್ನು ಐತಿಹಾಸಿಕ ಕಥೆ ಬರೆಯಲು ಪ್ರೇರೇಪಿಸಿರುವ ಈ ಸ್ಪರ್ಧೆ ಬಲು ಆಪೂರ್ವ ನಡೆ. ಈ ಸವಾಲಿಗೆ ತೆರೆದುಕೊಂಡ ನೂರಾರು ಕಥೆಗಾರರ ಕಥೆಗಳಲ್ಲಿ ಗಮನ ಸೆಳೆದ ಕಥೆಗಳು ಇಲ್ಲಿವೆ. ಇದು ಇಂದಿನವರು ಬರೆದ ಅಂದಿನವರ ಕಥಾಜಗತ್ತು.

₹370   ₹315

Buy Now
ಇತ್ತ ಹಾಯಲಿ ಚಿತ್ತ | Itta Hayali Chitta

ಉತ್ತರ ಪರ್ವ”ದಲ್ಲಿ ಆಯ್ಕೆಯಾದ ಅನುವಾದಿತ ಕಥೆಗಳ ಈ ಸಂಕಲನ ಒಂದು ತಾಜಾ ಅನುಭೂತಿಯನ್ನು ಎದುರು ನೋಡುತ್ತಿರುವ ಅಕ್ಷರಮೋಹಿಗಳ ಜೋಳಿಗೆಗೆ ಮುಡಿಪಾಗಿಟ್ಟ ಹೋಳಿಗೆ.

₹110   ₹94

Buy Now
ಇತ್ತ ಹಾಯಲಿ ಚಿತ್ತ ಇಬುಕ್ | Itta Hayali Chitta Ebook

ಉತ್ತರ ಪರ್ವ”ದಲ್ಲಿ ಆಯ್ಕೆಯಾದ ಅನುವಾದಿತ ಕಥೆಗಳ ಈ ಸಂಕಲನ ಒಂದು ತಾಜಾ ಅನುಭೂತಿಯನ್ನು ಎದುರು ನೋಡುತ್ತಿರುವ ಅಕ್ಷರಮೋಹಿಗಳ ಜೋಳಿಗೆಗೆ ಮುಡಿಪಾಗಿಟ್ಟ ಹೋಳಿಗೆ.

₹110   ₹55

Buy Now
ಇದಿರು ನೋಟ | Edhiru nota

ಸಬಿತಾ ಬನ್ನಾಡಿ ಡಾ. ಸಬಿತಾ ಬನ್ನಾಡಿ ಅವರು ಮೂಲತಃ ಉಡುಪಿ ತಾಲೂಕು ಮತ್ತೆ ಜಿಲ್ಲೆಯ ಬನ್ನಾಡಿ ಅವರು. ಕವಿ, ಲೇಖಕಿ, ಅಂಕಣಕಾರ್ತಿಯಾಗಿ ಹೆಸರುವಾಸಿಯಾಗಿರುವ ಸಬಿತಾ ಅವರ ಪ್ರಜಾವಾಣಿಯಲ್ಲಿ ಅನಿಯಮಿತ ಅಂಕಣ ಪ್ರಜಾವಾಣಿಯಲ್ಲಿ ಪ್ರಕಟವಾಗುತ್ತಿದೆ. ಸಬಿತಾ ಅವರ ಪ್ರಕಟಿತ ಕೃತಿಗಳು- ಸಾಹಿತ್ಯ ನಿರೂಪಣೆಗಳ (ವಿಮರ್ಶಾ ಲೇಖನ), ಆಲಯವು ಬಯಲಾಗಿ (ಸಂಶೋಧನೆ), ನಿರಿಗೆ - (ಕವಿತಾ ಸಂಕಲನ), ಗೂಡು ಮತ್ತು ಆಕಾಶ - (ಅಂಕಣ ಬರಹ) ಅವಳ ಕಾವ್ಯ Read More...

₹200   ₹178

Buy Now
ಇದು ಕತೆಯಲ್ಲ ಜೀವನ | Idu Katheyalla Jeevana

ಕನ್ನಡದ ಮಹತ್ವದ ಹಿರಿಯ ಲೇಖಕಿಯರಲ್ಲೊಬ್ಬರಾದ ವಸುಮತಿ ಉಡುಪರವರ ಕಥಾಜಗತ್ತು ವಿಶಿಷ್ಟವಾದದ್ದು. ಸಂದುಹೋಗುತ್ತಿರುವ ಒಂದು ಕಾಲಘಟ್ಟದ ತಲೆಮಾರಿನ ಚಿತ್ರಣವನ್ನು ಕಟ್ಟಿಕೊಡುವ ವಸುಮತಿ ಉಡುಪರವರು ಅಪ್ಪಟ ಕಥೆಗಾರ್ತಿ, ನೇರವಾಗಿ, ಸಹಜ ಹದದಲ್ಲಿ ಕಂಡಿರಿಸಿರುವ ಇವರ ಪಾತ್ರಗಳು ಹೆಣ್ಣುಮನದ ನಾನಾಭಾವಗಳ ರಂಗಶಾಲೆ, ಪಾತ್ರಗಳ ದಿಟ್ಟತನ, ನೇರವಂತಿಕೆ, ಬದುಕನೆದುರಿಸುವ ಛಲ, ತಾಕಲಾಟಗಳ ನಡುವೆಯೂ ಗುರಿಯನ್ನು ಕಂಡುಕೊಳ್ಳುವ ಆಶಾವಾದ ಇಲ್ಲಿ ಅಸಾಧಾರಣ ರೀತಿಯಲ್ಲಿ ಅಭಿವ್ಯಕ್ತಗೊಂಡಿದೆ. ಬದುಕಿನ ಹತ್ತು ಹಲವಾರು ಹಳವಂಡಗಳಲ್ಲಿ, ಬಾಳಿನ ಕುಲುಮೆಯಲ್ಲಿ ಬೆಂದು ನೊಂದರೂ ತಮ್ಮದೇ ರೀತಿಯಲ್ಲಿ ಪ್ರತಿರೋಧಿಸುತ್ತಾ, ಜೀವನದ ಕಟು ಸತ್ಯವನ್ನು ಅರಿಯುತ್ತಾ ಮಾನವೀಯ ಮೂರ್ತಿಗಳಾಗಿ ನಿಲ್ಲುವ ಇಲ್ಲಿನ ಹಲವಾರು ಪಾತ್ರಗಳ ಕಥೆ ಹೃದಯಸ್ಪರ್ಶಿಯಾಗಿ ಚಿತ್ರಿತಗೊಂಡಿದೆ.

₹130   ₹116

Buy Now
ಇದೆ ಎಂದರೆ ಇದೆ ಇಲ್ಲ ಎಂದರೆ ಇಲ್ಲ | illa Endare illa Ede Endare ide

ಸಮುದ್ಯತಾ ಅವರ ಮೊದಲ ಕಾದಂಬರಿ ‘ಇದೆ ಎಂದರೆ ಇದೆ ಇಲ್ಲ ಎಂದರೆ ಇಲ್ಲ’ ಹಳ್ಳಿಯ ಮಧ್ಯಮ ವರ್ಗದ ಕುಟುಂಬವೊಂದರ ಸ್ತ್ರೀಯರ ಬಹುಸ್ತರೀಯ ಸಂಕಟವನ್ನು ಮುಖ್ಯವಾಗಿ ಕೇಂದ್ರೀಕರಿಸಿ ನಿರೂಪಿಸುತ್ತದೆ. ಮನೆತನದ ಬದುಕಿನ ಏಳು ಬೀಳಿನ ಗತಿಬಿಂಬ ನಾಲ್ಕು ತಲೆಮಾರುಗಳನ್ನು ಹಾದು ಸುಮಾರು ಒಂದು ಶತಮಾನವನ್ನು ವ್ಯಾಪಿಸುತ್ತದೆ… ಕುಟುಂಬದ ದೈನಿಕ ಅನುಭವದ ವಾಸ್ತವಿಕ ವಿವರಗಳನ್ನು ನೇಯುವ ಈ ಕೃತಿಯನ್ನು ಹವ್ಯಕ ಸಮುದಾಯದ ಸಾಂಸ್ಕೃತಿಕ ದಾಖಲೆಯಾಗಿ ಓದಬಹುದಾಗಿದೆ… ಕಷ್ಟಗಳು ಯಾವ ರೂಪ ಮತ್ತು ಮೂಲದಿಂದ ಬಂದರೂ ಅವುಗಳನ್ನು ಅನುಭವಿಸುವವಳು ಹೆಣ್ಣು ಎಂಬ ಆಶಯ ಕಾದಂಬರಿಯುದ್ದಕ್ಕೂ ಪುನರಾವರ್ತನೆಯಾಗುತ್ತದೆ… ಸಂಸಾರ ಸುಸೂತ್ರ ಸಾಗದಿರುವುದಕ್ಕೆ ಕಾದಂಬರಿ ಸೂಚಿಸುವ ಮೂಲ ಕಾರಣವಾದರೂ ಯಾವುದು? ಮುಳುಗಡೆಯಂಥ ಪ್ರಾಕೃತಿಕ ವಿಪತ್ತೆ? ಮನುಷ್ಯ ಮಾಡುವ ಆಯ್ಕೆಗಳೆ? ಕಂದಾಚಾರಗಳೆ? ಗುಟ್ಟು ಬಿಟ್ಟು ಕೊಡದ ಕಾಲವೆ? ಕೈಮೀರಿದ ಅಸಹಾಯಕತೆಗೆ ಇನ್ನೊಂದು ಹೆಸರಾದ ಕೈಕೊಟ್ಟ ದೈವವೆ? ದುರ್ಬಲ ಪುರುಷರೆ? ಇಂಥ ತಾತ್ವಿಕ ಪ್ರಶ್ನೆಗಳಿಗೆ ಉತ್ತರಿಸುವ ಆಸಕ್ತಿಯನ್ನು ಕಾದಂಬರಿ ಓದುಗರಿಗೆ ಬಿಡುತ್ತದೆ. ಶ್ರೀಧರ ಬಳಗಾರ

₹200   ₹178

Buy Now