nil
ರಾತ್ರಿ ಅಗಸ ನೋಡುತ್ತಾ ಮಲಗಿದ್ದ ಶ್ರೀಲಕ್ಷ್ಮಿ ತಂದೆಗೆ ದಿಢೀರೆಂದು ಪ್ರಶ್ನೆ ಹಾಕಿದಳು. 'ಪಪ್ಪಾ, ಭೂಮಿ ದುಂಡಾಗಿರುವುದರಿಂದ ತಿರುಗುತ್ತಿದೆ. ಒಂದು ವೇಳೆ ಚಪ್ಪಟೆಯಾಗಿದ್ದರೆ ತಿರುಗುತ್ತಿತ್ತೇ? ಭೂಮಿ ಚಪ್ಪಟೆಯಾಗಿದ್ದರೆ ಏನೆಲ್ಲಾ ಬದಲಾವಣೆಗಳು ಆಗುತ್ತಿದ್ದವು?' ಎಂದು ಪ್ರಶ್ನಿಸಿದಳು. ರಾತ್ರಿ ಹಾಲಿವುಡ್ ಸಿನಿಮಾ ನೋಡಿದ ಸಿಂಧು ತಡವಾಗಿ ಮಲಗಿದಳು. ಸಿನಿಮಾ ಗುಂಗಿನಲ್ಲೇ ಮಲಗಿದ್ದರಿಂದ ಯಾವುದೋ ಆಕಾಶಕಾಯವೊಂದು ಭೂಮಿಗೆ ಅಪ್ಪಳಿಸಿದಂತೆ, ಭೂಮಿಯು ಓಲಾಡಿದಂತೆ ಕನಸು ಕಾಣುತ್ತಾ ಮಂಚದಿಂದ ದೊಪ್ಪನೆ ಕೆಳಕ್ಕೆ ಬಿದ್ದಳು. ಎಚ್ಚರಗೊಂಡು ವ್ಯಾಯಾಮದಲ್ಲಿ ನಿರತರಾದ ತಂದೆಗೆ 'ಪಪ್ಪಾ ಕ್ಷುದ್ರಗ್ರಹಗಳೆಂದರೇನು? ಅವು ಭೂಮಿಗೆ ಬಡಿದರೆ ಏನಾಗುತ್ತೆ?' ಎಂದು ಕೇಳಿದಳು. 'ತಾತ, ನಮ್ಮ ಭೂಮಿಯ ಜನಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಸತಿಗಾಗಿ ಇನ್ನೊಂದು ಗ್ರಹವನ್ನು ಹುಡುಕುತ್ತಿದ್ದಾರಂತೆ. ಇನ್ನೊಂದು ಗ್ರಹ ಹುಡುಕುವ ಬದಲು ಕೃತಕ ಗ್ರಹವನ್ನೇ ಸೃಷ್ಟಿಸಿದರೆ ಏನಾಗುತ್ತೆ?' ಎಂದನು. ಇಂತಹ ಅನೇಕ ತರ್ಲೆ ಪ್ರಶ್ನೆಗಳು ನಿಮಗೆ ಬಂದಿವೆಯಾ? ಅವುಗಳಿಗೆ ಉತ್ತರ ಸಿಕ್ಕಿದೆಯಾ? ಸಿಕ್ಕಿಲ್ಲ ಎಂದಾದರೆ 'ಏನಾಗುತ್ತೆ ಗುರು?' ಎಂಬ ಪುಸ್ತಕ ಖಂಡಿತ ನಿಮ್ಮ ತರ್ಲೆ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ. ಇವುಗಳಲ್ಲದೇ ಭೂಮಿಗೆ ಉಂಗುರಗಳಿದ್ದರೆ?, ಬಾಹ್ಯಾಕಾಶಕ್ಕೆ ಎಲಿವೇಟರ್ ನಿರ್ಮಿಸಿದರೆ?, ಕನಸುಗಳನ್ನು ರೆಕಾರ್ಡ್ ಮಾಡುವಂತಿದ್ದರೆ? ಮನುಷ್ಯರು ಬಾಹ್ಯಾಕಾಶದಲ್ಲಿ ಜನಿಸಿದರೆ? ಸಾಗರಗಳು ಪಾರದರ್ಶಕವಾಗಿದ್ದರೆ? ನಿಮ್ಮ ಊಹಾತ್ಮಕ ಪ್ರಶ್ನೆಗಳಿಗೆ ತಾರ್ಕಿಕ ಉತ್ತರ ಸಿಗುವ ಪುಸ್ತಕ ಏನಾಗುತ್ತೆ ಗುರು?. ಇದರಲ್ಲಿ ಕೌತುಕವಿದೆ. ತರ್ಕವಿದೆ. ವಿಜ್ಞಾನವಿದೆ.
#
ಸುರೇಶ್ ಪದ್ಮನಾಭನ್
Nil
ಎಲ್ಲರೂ ಇಂದು ಸಾವಧಾನತೆಯ ಹಾಗೂ ನಮ್ಮ ಮೇಲೆ ನಾವು ಹೂಡಿಕೆ ಮಾಡುವುದು ಹೇಗೆ? ಎಂಬುದರ ಬಗ್ಗೆ ಮಾತನಾಡುತ್ತಿದ್ದಾರೆ. `ಒತ್ತಡ ಮುಕ್ತ ಜೀವನಕ್ಕೆ 101 ಮ್ಯಾಜಿಕ್ ಮಂತ್ರಗಳು ಇಲ್ಲಿನ ಪ್ರತಿ ಮ್ಯಾಜಿಕ್ ಮಂತ್ರಗಳು ಮನಸ್ಸನ್ನು ಹೇಗೆ ಉಪಯೋಗಿಸಿಕೊಂಡು ಬದುಕನ್ನು ರೂಪಿಸಿಕೊಳ್ಳುವುದು ಎಂಬ ತುಡಿತದ ರೂಪಕಗಳೇ ಆಗಿವೆ. ಪುಸ್ತಕದ ಪ್ರತೀ ಲೇಖನಗಳು ಮಾನಸಿಕ ಸ್ವಯಂ-ಆರೈಕೆ ಜೊತೆಗೆ ದೇಹ ಹಾಗೂ ಮನಸ್ಸನ್ನು ಉತ್ತೇಜಿಸುವ ಸೃಜನಾತ್ಮಕ ಜೀವನ ಶೈಲಿಯ ರಚನೆಯ ಕುರಿತಾಗಿ ಮಾತನಾಡುತ್ತಾ ಹೋಗುತ್ತವೆ. ಸಂವೇದನೆಗಳನ್ನು, ಆಲೋಚನೆಗಳನ್ನು ಈ ಕ್ಷಣದ ತುರ್ತಿಗೆ ಅಂಗೀಕರಿಸುತ್ತ, ಶಾಂತಗೊಳಿಸುತ್ತಾ, ನಿಭಾಯಿಸುತ್ತಾ ಆ ಮೂಲಕ ಬದುಕಿನ ದೀರ್ಘಕಾಲಿಕ ಮಾನಸಿಕ ಸುಸ್ಥಿರತೆಯಾಗಿ ಬದಲಾಯಿಸುವ ಮಾಂತ್ರಿಕ ಮಿಡಿತಗಳನ್ನು ಇಲ್ಲಿನ ಪ್ರತಿ ಅಕ್ಷರಗಳಲ್ಲೂ ಕಾಣಬಹುದಾಗಿದೆ. ಇಲ್ಲಿರುವ 101 ಮ್ಯಾಜಿಕ್ ಮಂತ್ರಗಳು ಪ್ರತಿಧ್ವನಿಸುವುದು `ನಿಮ್ಮ ಮನಸ್ಸಿನ ನಾಯಕ/ನಾಯಕಿ ನೀವೇ ಎಂಬ ಘೋಷಣೆಯೊಂದನ್ನೇ.' ದೇಹ-ಮನಸ್ಸು-ಮೆದುಳಿನ ಸೂಕ್ಷ್ಮಗಳನ್ನು ಅರಿಯುವ ಅಗತ್ಯವಾದ ಹೊಳಹುಗಳು ಇಲ್ಲಿನ ಪ್ರತಿ ಲೇಖನಗಳಲ್ಲೂ ಕೂಡಿವೆ. ಪುಸ್ತಕ ನಿಮ್ಮಲ್ಲೂ ಮ್ಯಾಜಿಕ್ ಮೂಡಿಸುತ್ತದೆ ಎಂಬ ನಂಬಿಕೆಯೊಂದಿಗೆ...
ಅವರವರ ಅಂತರಂಗದ ಅರಿವು ಅವರವರಿಗೇ ಎಂಬ ಭಾವವಿಲ್ಲಿದೆ. ಚಿಗುರಿದ ಆ ಮರದಲ್ಲಿ ಕುಳಿತು ಒಗರು ಮೆಲ್ಲುವ ಎಲ್ಲ ಕೋಗಿಲೆಗಳೂ ಹಾಡುತ್ತಿರುವುದಿಲ್ಲ ಎಂಬ ಸಾಲು ಮನಮುಟ್ಟುತ್ತದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಎಂಬ ಕವಿತೆ ಕವಯಿತ್ರಿಯೊಳಗಿನ ಪ್ರಕೃತಿ ಪ್ರೇಮ ಮತ್ತು ಜೀವನ ಪ್ರೀತಿಗೆ ಸಾಕ್ಷಿಯಂತಿದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಚಿಟ್ಟೆ ಪಟಗುಡುವುದಿಲ್ಲ ಹಕ್ಕಿ ಹಾಡುವುದಿಲ್ಲ ಗೂಡು ಮಾಡುವುದಿಲ್ಲ ಅಳಿಲು ಆಡುವುದಿಲ್ಲ ಹೀಗೆ ಒಂದು ಮರದೊಂದಿಗೆ ಅಂತ್ಯವಾಗುವ ಹಲವು ಜೀವಗಳ ಬದುಕಿನ ವ್ಯಥೆ ಇಲ್ಲಿ ವ್ಯಕ್ತವಾಗಿದೆ.
Showing 481 to 510 of 3309 results