ಅವರವರ ಅಂತರಂಗದ ಅರಿವು ಅವರವರಿಗೇ ಎಂಬ ಭಾವವಿಲ್ಲಿದೆ. ಚಿಗುರಿದ ಆ ಮರದಲ್ಲಿ ಕುಳಿತು ಒಗರು ಮೆಲ್ಲುವ ಎಲ್ಲ ಕೋಗಿಲೆಗಳೂ ಹಾಡುತ್ತಿರುವುದಿಲ್ಲ ಎಂಬ ಸಾಲು ಮನಮುಟ್ಟುತ್ತದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಎಂಬ ಕವಿತೆ ಕವಯಿತ್ರಿಯೊಳಗಿನ ಪ್ರಕೃತಿ ಪ್ರೇಮ ಮತ್ತು ಜೀವನ ಪ್ರೀತಿಗೆ ಸಾಕ್ಷಿಯಂತಿದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಚಿಟ್ಟೆ ಪಟಗುಡುವುದಿಲ್ಲ ಹಕ್ಕಿ ಹಾಡುವುದಿಲ್ಲ ಗೂಡು ಮಾಡುವುದಿಲ್ಲ ಅಳಿಲು ಆಡುವುದಿಲ್ಲ ಹೀಗೆ ಒಂದು ಮರದೊಂದಿಗೆ ಅಂತ್ಯವಾಗುವ ಹಲವು ಜೀವಗಳ ಬದುಕಿನ ವ್ಯಥೆ ಇಲ್ಲಿ ವ್ಯಕ್ತವಾಗಿದೆ.
#
nil
ದಿ. ನೇರಂಬಳ್ಳಿ ಪ್ರಭಾಕರ ಆಚಾರ್ಯರು ತಮ್ಮ ಕಾವ್ಯಪ್ರೇಮ ಮತ್ತು ಸಾಹಿತ್ಯಾಸಕ್ತಿಗೆ ಹೆಸರಾಗಿದ್ದವರು. ಮುಂಬೈ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಕಾವ್ಯ ಬೋಧನೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಛಾಪು ಮೂಡಿಸಿದವರು. ಅನೇಕ ಭಾರತೀಯ ಇಂಗ್ಲಿಷ್ ಕವಿಗಳಿಗೆ ವಿಮರ್ಶೆಯ ಒರೆಗಲ್ಲಾಗಿದ್ದವರು. 'ದ ಸುರಗಿ ಟೀ', 'ಮನು ಇನ್ ಕಿಮ್ಮಿಂದ', 'ಧ್ವನಿ ಆ್ಯಂಡ್ ಎಪಿಫನಿ' ಮತ್ತು 'ಕವಿತೆಯ ಓದು' ಕೃತಿಗಳ ಕರ್ತೃ. ಅವರ 'ಕವಿತೆಯ ಓದು' ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪುರಸ್ಕಾರ ದೊರೆತಿದೆ. 'ಒಲವಿನ ದೈವ' ಎಂಬ ಈ ಕೃತಿ ಅವರ ಮರಣಾನಂತರ ಪ್ರಕಟಗೊಳ್ಳುತ್ತಿದೆ. ಇದು ಅವರ 'ಗಾಡ್ ಆಫ್ ಲವ್' ಕೃತಿಯ ಕನ್ನಡ ಅನುವಾದ. ಕೃಷ್ಣನ ಕತೆ ನಮಗಾರಿಗೂ ಹೊಸದಲ್ಲವಾದರೂ ಲೋಕದೊಡನೆ ಕೃಷ್ಣನ ಸಂಬಂಧ, ಎಲ್ಲ ಕಾಲಕ್ಕೂ ಅಗತ್ಯವಾದ ಪ್ರೇಮಭಾವದ ಪ್ರಸಾರಕನಾಗಿರುವ ಅವತಾರಪುರುಷನ ಅಗತ್ಯ, ಸರಿದಾರಿ ತೋರುತ್ತ ದಾರಿತಪ್ಪಿದವರನ್ನು ಶಿಕ್ಷಿಸುವ ಧೈರ್ಯ ಇವನ್ನೆಲ್ಲ ಒಳಗೊಳ್ಳುವಂತೆ ಆಚಾರ್ಯರು ಬರೆದಿರುವುದನ್ನು ಓದಿ ಸ್ವಯಂಸ್ಪೂರ್ತಿಯಿಂದ ಶಿಕ್ಷಣ ತಜ್ಞ ಪ್ರೊ. ಮಹಾಬಲೇಶ್ವರ ರಾಯರು ಕನ್ನಡಕ್ಕೆ ಸರಳ ಸುಂದರವಾಗಿ ಅನುವಾದಿಸಿದ್ದಾರೆ. ಈ ರಚನೆಗೆ ಜನಮನ್ನಣೆ ಸಿಗಲಿ. ನಾಡೋಜ ಕೆ. ಪಿ. ರಾವ್
ಡಾ. ಜಿ ಪ್ರಶಾಂತ ನಾಯಕ
Nil
ಕೆ. ಉಷಾ ಪಿ ರೈ
ಇಂಗ್ಲಿಷ್ ಲೇಖಕ ಕೆಂಟ್ ಎಂ. ಕೀತ್ ಆಂಗ್ಲ ಭಾಷೆಯಲ್ಲಿ ‘ಎನಿವೇ’ ಪುಸ್ತಕ ಬರೆದಿರುವ ಅನುಭವ ಕಥನವಿದು.
ಇಂಗ್ಲಿಷ್ ಲೇಖಕ ಕೆಂಟ್ ಎಂ. ಕೀತ್ ಆಂಗ್ಲ ಭಾಷೆಯಲ್ಲಿ ‘ಎನಿವೇ’ ಪುಸ್ತಕ ಬರೆದಿರುವ ಅನುಭವ ಕಥನವಿದು. ಇದರಲ್ಲಿ ಸಮಾಜದ ಸಾಕಷ್ಟು ಸಾಧಕ-ಬಾಧಕಗಳನ್ನು ಕಂಡಿರುವ ಲೇಖಕ ಒಬ್ಬ ವ್ಯಕ್ತಿಯಾಗಿ ನಾವು ಹೇಗೆ ನಡೆದುಕೊಂಡರೆ ಚೆಂದ ಎಂಬುದನ್ನು ಹೇಳುತ್ತಾರೆ. ನಮ್ಮನ್ನು ನಿಂದಿಸುವವರು, ಕೆಟ್ಟದ್ದು ಮಾಡುವವರು, ತೊಂದರೆ ಕೊಡುವವರು ಇದ್ದೇ ಇರುತ್ತಾರೆ. ಆದರೆ ಇವರಿಗೆ ನಾವು ನಮ್ಮ ಒಳ್ಳೆತನವನ್ನೇ ತೋರಿಸುತ್ತಲೇ ಇರಬೇಕು. ನೆಗೆಟಿವ್ ಅಂಶಗಳನ್ನು ಬಿಟ್ಟು ಸದಾ ಪಾಸಿಟಿವ್ ಆಲೋಚನೆಗಳನ್ನು ಮಾಡುತ್ತಾ ನಮ್ಮ ಮಾನಸಿಕ, ದೈಹಿಕ ಸ್ಥಿತಿಯನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಬೇಕು ಎಂಬುದೇ ಈ ಪುಸ್ತಕದ ಸಂದೇಶವಾಗಿದೆ. ಒಟ್ಟಾರೆ ನಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುವಲ್ಲಿ ಈ ಪುಸ್ತಕ
Showing 571 to 600 of 3317 results