• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಕತೆ ಜಾರಿಯಲ್ಲಿರಲಿ | kate jaariyallirali

ಸೋ ಕಾಲ್ಡ್ ಇನ್‌ಕ್ಲೂಸಿವ್‌ನೆಸ್ಸಿನ, ಎಜುಕೇಟೆಡ್ ಸೊಸೈಟಿಯ ಡ್ರಾಮಾ ಅಲ್ಲವಾ ಇದೆಲ್ಲ..? ಗೋ ಫ್ಲ್ಯಾಟ್ ಫೋಟೋಶೂಟಂತೆ! ಕ್ಲೀವೇಜ್ ತೋರಿಸುವ ಡ್ರೆಸ್ ಹಾಕಿದಾಗಲೆಲ್ಲ ಎಷ್ಟುಬಾರಿ ಕಾಂಪ್ಲಿಮೆಂಟ್ ಕೊಟ್ಟಿಲ್ಲ ನೀನು!” ಕಳ್ಳನನ್ನು ಹಿಡಿದಂತೆ ಮಾತಾಡಿದಳು. ಥತ್! ನನ್ನನ್ನ ಡೈಲೆಮಾದಲ್ಲಿ ಹಾಕುತ್ತಿದ್ದಾಳಲ್ಲ ಇವಳು ಎನ್ನಿಸಿತು. -'ಸೀಕ್ರೆಟ್ ಸ್ಯಾಂಟಾ' ಕತೆಯಿಂದ ಮಗುವನ್ನು ಆಸ್ಪತ್ರೆಯಿಂದ ಮನೆಗೆ ಕರೆತಂದವನು ಅವನೇ... ಮಗಳನ್ನು ಪೂರ್ವಿ ಎಂದೇ ಕರೆಯಬೇಕೆಂದು ನಿರ್ಧರಿಸಿದವನು ಅವನೇ... ಹಡೆದ ಹನ್ನೊಂದನೇ ದಿನಕ್ಕೆ ಬೆತ್ತದ ಡಬ್ಬಿಯ ಮುಚ್ಚಳದಲ್ಲಿ ಗುಲಾಬಿ ದಾಸವಾಳದ ಪಕಳೆಯಂತೆ ಮಲಗಿದ ಮಗುವನ್ನು ಹೊತ್ತು ಹೊಸ್ತಿಲು ದಾಟಿಸಿದವನೂ ಅವನೇ... ದಾವಣಗೆರೆಗೆ ಹೊರಡುವ ಮುಂಚೆ ಪೂರ್ವಿಯನ್ನು ತೋಳಲ್ಲೆತ್ತಿಕೊಂಡು ಕುಮಾರವ್ಯಾಸ ಭಾರತದ 'ಗಜಮುಖನೆ ಮೆರೆವೇಕದಂತನೆ ನಿಜಗುಣಾನ್ವಿತ ಪರಶುಧಾರನೆ' ಸಾಲುಗಳನ್ನು ರಾಗಬದ್ಧವಾಗಿ ಹಾಡಿದವನೂ ಅವನೇ... ಮಗುವಿಗೆ ತಿಂಗಳು ತುಂಬಲು ಇನ್ನೇನು ಎರಡು ದಿನ ಇರುವಾಗ ದಾವಣಗೆರೆಯಿಂದ ಅಂಬ್ಯುಲೆನ್ಸಿನಲ್ಲಿ ಉದ್ದುದ್ದ ಮಲಗಿ ಹೆಣವಾಗಿ ಬಂದವನೂ ಅವನೇ. - 'ಪಟಾಕಿ ಕೈಚೀಲ' ಕತೆಯಿಂದ ಎಲ್ಲೋ ನೆಮ್ಮದಿಯಲ್ಲಿ ತಂಗಿದ್ದ, ಇನ್ನೆಲ್ಲೋ ಬವಣೆಗಳಿಂದ ಬೇಸತ್ತಿದ್ದ ಮತ್ತೆಲ್ಲೋ ವೈರಾಗ್ಯ ತಳೆದು ಕೂತಲ್ಲೇ ಹುತ್ತ ಬೆಳೆಸಿಕೊಂಡಿದ್ದ ಕತೆಗಳನ್ನು ಅವುಗಳ ಪಾಡಿಗೇ ಬಿಟ್ಟುಬಿಡದೆ ಕರೆದು ಕರೆದು ಕಟ್ಟಿಹಾಕಿದ್ದಿದೆ, ಚಿಕ್ಕಂದಿನಿಂದಲೂ, ಸಾಕಿನ್ನು ಕತೆಗಳನ್ನು ಕರೆದದ್ದು, ಅವುಗಳನ್ನು ಕಟ್ಟಿಹಾಕಿದ್ದು ಎಂದುಕೊಂಡಷ್ಟೂ ಇನ್ನಷ್ಟು ಅವುಗಳ ಬೆನ್ನು ಬೀಳುತ್ತೇನೆ. - 'ಕತೆ ಜಾರಿಯಲ್ಲಿರಲಿ' ಕತೆಯಿಂದ

₹175   ₹156

Buy Now
ಕಥಾ ಸಂಕ್ರಾಂತಿ | Katha Sankranti

ಕಥಾಸಂಕ್ರಾಂತಿ2024 ಕಥಾಸಂಕಲನದಲ್ಲಿ ಮೂರು ಬಹುಮಾನಿತ ಕಥೆಗಳು ಹಾಗೂ ಏಳು ಮೆಚ್ಚುಗೆ ಪಡೆದ ಕಥೆಗಳು ಇವೆ. ಇಲ್ಲಿನ ಪ್ರತಿ ಕಥೆಯೂ ವಿಶಿಷ್ಟ, ವಿಭಿನ್ನ, ಪ್ರಯೋಗಶೀಲತೆ, ಭಾಷಾ ಬಳಕೆ, ಕಥಾವಸ್ತುವಿನ ಆಯ್ಕೆಯಲ್ಲಿ ತೋರಿರುವ ವೈವಿಧ್ಯತೆ, ಕಥಾವಿನ್ಯಾಸ, ನಿರೂಪಣಾ ಕುಶಲತೆ ಹೀಗೆ ಎಲ್ಲದರಲ್ಲಿಯೂ ಈ ಕಥೆಗಳು ತಟ್ಟನೆ ಗಮನ ಸೆಳೆಯುತ್ತವೆ. ಸಮಕಾಲೀನ ವಿಷಯ, ಗ್ರಾಮೀಣ ಸಮಾಜದ ಬದುಕಿನಲ್ಲಿ ಇಣುಕುವ ಚಲನಶೀಲತೆ, ಮನುಷ್ಯರ ಸಂಕಟಗಳು, ಸಂದಿಗ್ಧತೆಗೆ ಸಿಲುಕಿಸುವ ಪ್ರೇಮ, ಬದುಕಿನ ಹೋರಾಟದಲ್ಲಿ ಗೆಲುವು ಸಾಧಿಸಲು ಕಂಡುಕೊಳ್ಳುವ ಹೊಸ ದಾರಿಗಳು, ಮುಗ್ಧ ಬಾಲಕಿಯರು ಎದುರಿಸಬೇಕಾದ ತಲ್ಲಣಗಳು, ಭಾಷೆಯೊಂದಿಗೆ ಬದುಕುವ ವ್ಯಕ್ತಿ ವ್ಯಕ್ತಿತ್ವವನ್ನು ಕಳೆದುಕೊಳ್ಳುವ ಬಗೆ... ಈ ಕಥೆಗಳಲ್ಲಿ ಅಡಕವಾಗಿವೆ. ಕಥಾಸ್ಪರ್ಧೆಗೆ ಬಂದ ನೂರಾರು ಕಥೆಗಳನ್ನು ಹಲವು ವಿಧದಲ್ಲಿ ಜರಡಿ ಹಿಡಿದು ಅಂತಿಮ ಸುತ್ತಿನಲ್ಲಿ ಆಯ್ದ ಐವತ್ತು ಕಥೆಗಳಲ್ಲಿ ಕೊನೆಗುಳಿದ ಹತ್ತು ಕಥೆಗಳು ಕನ್ನಡದ ಲೇಖಕರು ಕಥಾಪ್ರಕಾರದಲ್ಲಿ ತುಳಿಯುತ್ತಿರುವ ಹೊಸ ದಾರಿಗಳನ್ನು, ಹೊಸ ಲೇಖಕರ ಮನೋಧರ್ಮವನ್ನು ಸಮರ್ಥವಾಗಿ ಪ್ರತಿನಿಧಿಸುತ್ತವೆ.

₹185   ₹157

Buy Now
ಕಥಾ ಸಾಗರಿ | Kathasagari

ಇದು ಮಕ್ಕಳ ಪ್ರತಿಯಾಗಿದ್ದರೂ ಹಿರಿಯರು ಕೂಡ ಓದಿ ಆನಂದಿಸುವಂಥದ್ದು. ಪಾಲಕರು ಓದಿ ಮಕ್ಕಳಿಗೂ ಓದಿಸಿ ಟಿವಿ ಕಂಪ್ಯೂಟರ್ ಮೊಬೈಲ್ ಗಳಿಗಿಂತ ಪುಸ್ತಕಗಳನ್ನು ಓದುವುದು ಮಕ್ಕಳ ವಿಕಾಸ ಹಾಗೂ ಆರೋಗ್ಯದ ಹಿತೈದ ದೃಷ್ಟಿಯಿಂದ ಅತ್ಯುತ್ತಮವಾಗಿದ್ದು ಉತ್ತಮ ಪುಸ್ತಕಗಳನ್ನು ಮಕ್ಕಳಿಂದ ಓದಿಸಿ ಅವರ ವ್ಯಕ್ತಿತ್ವ ವಿಕಸನವಾದರೆ ಈ ಪುಸ್ತಕ ಬರೆದದ್ದು ಸಾರ್ಥಕವಾದಂತೆ

₹120   ₹102

Buy Now
ಕಥಾ ಸಾಗರಿ ಇಬುಕ್ | Katha Saagari Ebook

ಇದು ಮಕ್ಕಳ ಪ್ರತಿಯಾಗಿದ್ದರೂ ಹಿರಿಯರು ಕೂಡ ಓದಿ ಆನಂದಿಸುವಂಥದ್ದು. ಪಾಲಕರು ಓದಿ ಮಕ್ಕಳಿಗೂ ಓದಿಸಿ ಟಿವಿ ಕಂಪ್ಯೂಟರ್ ಮೊಬೈಲ್ ಗಳಿಗಿಂತ ಪುಸ್ತಕಗಳನ್ನು ಓದುವುದು ಮಕ್ಕಳ ವಿಕಾಸ ಹಾಗೂ ಆರೋಗ್ಯದ ಹಿತೈದ ದೃಷ್ಟಿಯಿಂದ ಅತ್ಯುತ್ತಮವಾಗಿದ್ದು ಉತ್ತಮ ಪುಸ್ತಕಗಳನ್ನು ಮಕ್ಕಳಿಂದ ಓದಿಸಿ ಅವರ ವ್ಯಕ್ತಿತ್ವ ವಿಕಸನವಾದರೆ ಈ ಪುಸ್ತಕ ಬರೆದದ್ದು ಸಾರ್ಥಕವಾದಂತೆ.

₹120   ₹60

Buy Now
ಕಥಾಭರಣ | Kathabharana

ಬಹುತೇಕ ಹಳ್ಳಿಗಳಲ್ಲಿ ಸುಗ್ಗಿಹಬ್ಬ ಮಾಡುತ್ತಾರೆ. ಹೊಸ ಬೆಳೆ ಮನೆಗೆ ಬಂದ ತಕ್ಷಣ, ಅದರಲ್ಲಿ ಮೊದಲ ಭಾಗವಾಗಿ ತಮ್ಮ ಯೋಗ್ಯತೆಗೆ ತಕ್ಕಂತೆ ಒಂದಿಷ್ಟು ಧಾನ್ಯವನ್ನು ಊರ ದೇವರಿಗೆ ಎಲ್ಲರೂ ಅರ್ಪಿಸುತ್ತಾರೆ. ಬಡವ, ಬಲ್ಲಿದ, ಮೇಲು, ಕೀಳು ಇತ್ಯಾದಿಗಳ ಸೋಂಕಿಲ್ಲದೆ ಎಲ್ಲರೂ ಈ ದಾನ ಮಾಡುತ್ತಾರೆ. ಅವನ್ನೆಲ್ಲಾ ಸ್ವೀಕರಿಸಿದ ದೇವಸ್ಥಾನವು ಸುಗ್ಗಿಹಬ್ಬ ಹಮ್ಮಿಕೊಳ್ಳುತ್ತದೆ. ಊರವರೇ ನೀಡಿದ ಧಾನ್ಯಗಳನ್ನು ಬಳಸಿ ಊರವರೇ ಅಡಿಗೆ ತಯಾರಿಸಿ, ಎಲ್ಲರೂ ಊಟ ಮಾಡುತ್ತಾರೆ. ಈ ಊಟವು ಊರವರಿಗೆಲ್ಲಾ ಅತ್ಯಂತ ರುಚಿಯೆನ್ನಿಸುತ್ತದೆ.ಇಂತಹ ಸುಗ್ಗಿಹಬ್ಬದ ರುಚಿ ಈ ಕಥಾಸಂಕಲನಕ್ಕೆ ದಕ್ಕಿದೆ. ಕನ್ನಡ ಸಾಹಿತ್ಯಲೋಕದ ಸಾಕಷ್ಟು ಹೊಸ ಕತೆಗಾರರು ಮತ್ತು ಒಂದಿಷ್ಟು ಹಳಬರು ಈ ಸಂಕಲನಕ್ಕೆ ತಮ್ಮ ಕತೆಯನ್ನು ನೀಡಿದ್ದಾರೆ. ಸದ್ಯದ ಕನ್ನಡ ಲೋಕದ ಹೊಸ ಬರವಣಿಗೆಯ ಪಕ್ಷಿನೋಟವನ್ನು ಈ ಸಂಕಲನ ನೀಡುತ್ತದೆ. ಊರವರೆಲ್ಲರೂ ಒಂದಾದಾಗ ಮೂಡುವ ಸಹೃದಯತೆ, ಆತ್ಮೀಯತೆ ಮತ್ತು ಲವಲವಿಕೆಯೂ ಇಲ್ಲಿ ಕಾಣುತ್ತದೆ. ಇಂತಹ ಒಗ್ಗಟ್ಟಿನ ಕಾರ್ಯಗಳು ಸದ್ಯದ ಸಾಹಿತ್ಯದ ಲೋಕವನ್ನು ಜೀವಂತ ಉಳಿಸುವುದಕ್ಕೆ ಅವಶ್ಯ ಬೇಕಾದ ಲಸಿಕೆಯಾಗಿದೆ. ಕನ್ನಡ ಸಾಹಿತ್ಯ ಚರಿತ್ರೆಯ ಹಿರಿಯ ಮಹನೀಯರೆಲ್ಲರ ಪ್ರತಿಫಲನವೂ ಈ ಕತೆಗಳಲ್ಲಿ ಕಾಣುತ್ತದೆ. ಆ ನಿಟ್ಟಿನಿಂದ ಇದು ಪರಂಪರೆಯ ನೆಲದಲ್ಲಿ ಬೆಳೆದ ಹೊಸ ಬೆಳೆಯಾಗಿದೆ. ಊರ ದೇವಸ್ಥಾನವೂ ಒಂದಿಷ್ಟು ಹೊಲವನ್ನು ಹೊಂದಿದ್ದು, ಅದೂ ಕೊಯ್ದು ಮಾಡಿದ ಧಾನ್ಯದಲ್ಲಿ ಒಂದಿಷ್ಟು ಭಾಗವನ್ನು ಸುಗ್ಗಿಹಬ್ಬಕ್ಕೆ ದಾನ ಮಾಡುತ್ತದೆ. ಅದೇ ರೀತಿ ಈ ಸಂಕಲನವನ್ನು ಶ್ರದ್ಧೆಯಿಂದ ಸಂಪಾದಿಸಿದ ಅಜಿತ್ ಹರೀಶಿ ಮತ್ತು ವಿಠಲ್ ಶೆಣೈ ತಮ್ಮ ಕತೆಯನ್ನೂ ಇಲ್ಲಿ ಓದುಗರಿಗೆ ಕೊಟ್ಟಿದ್ದಾರೆ. ರುಚಿಯ ನಿರ್ಧಾರದಲ್ಲಿ ನಾಲಿಗೆಗಿಂತಲೂ ಮನಸ್ಸು ದೊಡ್ಡ ಪಾತ್ರವಹಿಸುತ್ತದೆ. ಎಲ್ಲರೂ ಒಗ್ಗಟ್ಟಾಗಿ ಸಂಭ್ರಮದಿಂದ ತಯಾರಿಸಿದ ಸುಗ್ಗಿಯೂಟ ರುಚಿಯಾಗಿರಲು ಮನಸ್ಸೇ ಮುಖ್ಯ ಕಾರಣ. ಆದರೆ ಪಕ್ಕದೂರಿನವರೂ ನಮ್ಮೂರಿನ ಸುಗ್ಗಿ ಊಟ ರುಚಿ ಎಂದರೆ ಆಗ ಆ ಪಾಕ ಮಹತ್ವ ಪಡೆದುಕೊಳ್ಳುತ್ತದೆ. ಅಂತಹ ದಾರಿಯಲ್ಲಿ ಇಲ್ಲಿನ ಹಲವು ಕತೆಗಳಿವೆ ಎನ್ನುವುದು ನನಗೆ ಭರವಸೆಯನ್ನು ಕೊಟ್ಟಿದೆ.

₹290   ₹218

Buy Now
ಕಂದಕ | Kandaka

'ಕಂದಕ' ಈ ಕೃತಿಯ ಲೇಖಕರಾದ ಭಾರದ್ವಾಜ ಕೆ. ಆನಂದತೀರ್ಥ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಣಿವೆ ಗ್ರಾಮದ ನಿವಾಸಿ, ಕೆ. ಆನಂದತೀರ್ಥ ಮತ್ತು ಸುಮಿತ್ರಮ್ಮ ದಂಪತಿಯ ಮಗ. ಎಂ.ಎ. ಪದವೀಧರ ಭಾರದ್ವಾಜರಿಗೆ ಕೃಷಿ, ಪತ್ರಿಕೋದ್ಯಮ, ಬರವಣಿಗೆ, ಪ್ರವಾಸ ಎಲ್ಲವೂ ಹವ್ಯಾಸ. ಇವರ ಅವನಿ'ಗೆ (ಕವನ ಸಂಕಲನ), ನೆನಪುಗಳು ಮಾಸುವ ಮುನ್ನ (ಎಂ.ಸಿ. ನಾಣಯ್ಯ ಅವರ ಜೀವನ ಚರಿತ್ರೆಯ ನಿರೂಪಣೆ) ಕಾನನದ ಅಂಚಿನಲ್ಲಿ (ಕಾದಂಬರಿ), ಕಳೆದುಕೊಂಡವರು (ಕಾದಂಬರಿ), ಕಣಿವೆಯ ಆಳದಿಂದ (ಅಂಕಣ ಬರಹಗಳ ಸಂಗ್ರಹ), ಕನವರಿಕೆಗಳು (ಲಲಿತ ಪ್ರಬಂಧಗಳ ಸಂಗ್ರಹ), ಕಂದಿಲು (ಕೆಲವು ನಿವೃತ್ತ ಶಿಕ್ಷಕರ ಸಂಕ್ಷಿಪ್ತ ಜೀವನ ಚರಿತ್ರೆ), ಕೌತುಕವಲ್ಲದ ಕ್ಷಣಗಳು (ಲಲಿತ ಪ್ರಬಂಧಗಳ ಸಂಗ್ರಹ), ನೀರು ನುಗ್ಗಿದ ಮೇಲೆ (ಪ್ರಬಂಧಗಳ ಸಂಗ್ರಹ) ಹಾಗೂ ಕರೋನಯ್ಯ ಬಂದವ್ನಿಗೆ (ಕಾದಂಬರಿ), ಸಂದಾಯಿ(ಕಾದಂಬರಿ), ಕ್ರಮಣ (ಕಾದಂಬರಿ) ಈಗಾಗಲೇ ಪ್ರಕಟವಾಗಿದೆ. -ಎನ್. ನಾಗರಾಜ್‌ ರಾವ್ ರಂಗಕರ್ಮಿ ಬಸವನಗುಡಿ, ಬೆಂಗಳೂರು.

₹265   ₹225

Buy Now