nil
#
ಹಿರಿಯ ಸಾಹಿತಿ ನಾ. ದಾಮೋದರ ಶೆಟ್ಟಿಯವರ 'ಕರಿಮಾಯಿ ಗುಡ್ಡ' ಕಾದಂಬರಿ ಸಂಶೋಧನಾತ್ಮಕ ಹಾಗೂ ಪತ್ತೇದಾರಿಯ ಗುಣಗಳನ್ನು ಹೊಂದಿದೆ. ಆಧುನಿಕ ಬದುಕಿಗೆ ಸಮೀಪವಾದ ಕಥಾವಸ್ತುವನ್ನೊಳಗೊಂಡಿದ್ದು ರೋಚಕ ತಿರುವುಗಳಿಂದ ಕೂಡಿ. ಕುತೂಹಲ ಕೆರಳಿಸುತ್ತ ಸಾಗುವ ಕಾದಂಬರಿ ಚೇತೋಹಾರಿ ಶೈಲಿಯಿಂದ ಕೂಡಿದೆ. ఇంగ్లీష్ ಸಾಹಿತ್ಯದಲ್ಲಿ ಇರಬಹುದಾದ ಇಂಥ ಕಥಾನಕಗಳು ಕನ್ನಡದಲ್ಲಿ ಅಪರೂಪ. ಎಸ್ಟೇಟ್ ಮಧ್ಯದ ಸಿರಿವಂತರ ಬದುಕಿನ ನಿಗೂಢ ಘಟನೆಯೊಂದನ್ನು ನಾದಾ ಅವರು ರೋಚಕವಾಗಿ ಹೆಣೆದಿದ್ದಾರೆ. ಎಸ್ಟೇಟು ಬಂಗಲೆಯಲ್ಲಿ ನಡೆಯುವ ಈ ಕಥೆಯು ಪ್ರೀತಿ, ದ್ವೇಷ, ಅಸೂಯೆ, ವಂಚನೆ ಮುಂತಾದ ಹಲವು ಭಾವಗಳ ಸಮ್ಮಿಲನವಾಗಿದೆ. ವಿನಾಕಾರಣ ಕೊಲೆಯಾಗುವ ಓರ್ವ ಅಮಾಯಕ ಹೆಣ್ಣಿನ ಮನಸ್ಸನ್ನು ಆರ್ಥೈಸಲಾಗದೆ ಆಕೆಯ ಭಾವನೆಗಳ ಮೌಲ್ಯವನ್ನು ತಿಪ್ಪೆಗೆಸೆಯುವ ಕ್ರೌರ್ಯ ತಮ್ಮ ಜನ್ಮಸಿದ್ದ ಹಕ್ಕು ಎಂಬಂತೆ ವರ್ತಿಸುವ ಪುರುಷ ಸಮಾಜವನ್ನು ಈ ಕಾದಂಬರಿ ನಿಕಷಕ್ಕೊಡ್ಡುತ್ತದೆ. ಕೊಡಗಿನ ಪ್ರಾಕೃತಿಕ ರಮಣೀಯತೆ ಯನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿರುವುದು ಈ ಕಾದಂಬರಿಯ ಮತ್ತೊಂದು ವಿಶೇಷ. ಕರಾವಳಿ ತೀರದ ನಾದಾ ಅವರ ಈ ಕಾದಂಬರಿ ಕನ್ನಡ ಸಾರಸ್ವತ ಲೋಕಕ್ಕೆ ಒಂದು ಅನುಪಮ ಕೊಡುಗೆ. ಟಿ.ಎಸ್. ದಕ್ಷಿಣಾಮೂರ್ತಿ
NA
ಎಚ್ ಡುಂಡಿರಾಜ್
ಟಿ ಎಂ ಈಶ್ವರ್ ಸಿಂಗ್
ಟಿ ಶ್ರೀನಿವಾಸ
ಬಸವರಾಜ್ ಹಳ್ಳೂರ್ ಕಲಕೇರಿ
ಕರ್ನಾಟಕ ಅಗ್ನಿವಂಶ ಕ್ಷತ್ರಿಯರು ಎಂಬ ಕೃತಿಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಕೆಂಜಗನಹಳ್ಳಿಯ ಶ್ರೀ ಮದುಸೂಧನ್ ಕೆ ಆರ್ ಅವರು ಬರೆದಿದ್ದು ಅಗ್ನಿವಂಶ ಕ್ಷತ್ರಿಯರ ಬಗ್ಗೆ ನಾನಾ ಮೂಲಗಳಿಂದ ವಿವರಗಳನ್ನು ಸಂಗ್ರಹಿಸಿದ್ದಾರೆ. ಭಾರತದಾದ್ಯಂತ ಅಗ್ನಿಯಿಂದ ನಿಷ್ಪನ್ನರಾದವರೆಂದು ಹೇಳಿಕೊಳ್ಳುವ ಅನೇಕ ಗುಂಪುಗಳಿವೆ. ಭಾರತದಲ್ಲಿ ಅಳ್ವಿಕೆ ನಡೆಸಿದ ಹಿಂದೂ ರಾಜರನ್ನು ಸಾಮಾನ್ಯವಾಗಿ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಒಂದು ಚಂದ್ರವಂಶ' ಇನ್ನೊಂದು ಸೂರ್ಯವಂಶ', ಅಗ್ನಿವಂಶವು ಇವೆರಡರಲ್ಲಿಯೂ ಸೇರಿದೆ. ಚಂದ್ರವಂಶದವರು ಪ್ರಮುಖವಾಗಿ ಯಾದವರು ಯಾದವ ಮೂಲದಿಂದ ಬಂದವರು. ಕರ್ನಾಟಕ, ಮಹಾರಾಷ್ಟ್ರ, ಗುಜರಾತನ್ನು ಆಳಿದ ಬಹುತೇಕ ಅರಸು ಮನೆತನಗಳಿಗೆ ಮೂಲ ಪುರುಷ ಯದುರಾಯನಾಗಿದ್ದಾನೆ. ಯಾದವರ ಮೂಲ ಪುರುಷನೂ ಯದುವೇ. ಹೊಯ್ಸಳರು, ದೇವಗಿರಿ ಯಾದವರು, ಕಾಕತೀಯ ಅರಸರು, ವಿಜಯನಗರದ ಅರಸರು, ಕೊನೆಗೆ ಮೈಸೂರು ಅರಸರು ತಮ್ಮ ಮೂಲವನ್ನು ಯಧು ವಿನಿಂದಲೇ ಪ್ರಾರಂಭಿಸಿದ್ದಾರೆ. ಸೂರ್ಯವಂಶ ಅಥವಾ ಇನಾಕುಲ ಅಥವಾ ರವಿಕುಲದ ಮೂಲವನ್ನು ಹೇಳುವ ವಂಶಗಳಿಗೆ ಮೂಲ ಸೂರ್ಯ. ಇವನ ವಂಶದಲ್ಲಿ ಬಂದವನು ದಿಲೀಪ, ಕರ್ನಾಟಕದ ಕದಂಬರು, ಆಂಧ್ರದ ಇಕ್ಷಾಕುಗಳು. ತೆಲುಗು ಜೋಳ ಮನೆತನ ಮೊದಲಾದವರು ತಮ್ಮನ್ನು ಸೂರ್ಯ ಅಥವಾ ರವಿಕುಲಕ್ಕೆ ಸೇರಿದವರೆಂದು ಹೇಳಿಕೊಂಡಿದ್ದಾರೆ. ಮಧುಸೂಧನ್ ಅವರು ಇನ್ನೂ ಅನೇಕ ರಾಜವಂಶಗಳನ್ನು ಈ ಪಟ್ಟಿಯಲ್ಲಿ ಸೇರಿಸಿದ್ದಾರೆ. ಕರ್ನಾಟಕ ಜಾತಿಗಳಲ್ಲಿ ಒಂದು ಸಣ್ಣ ಗುಂಪಾದ ಅಗ್ನಿವಂಶ ಕ್ಷತ್ರಿಯರ ಬಗ್ಗೆ ಮಾಹಿತಿ ಕಲೆಹಾಕಿ ಆ ಜಾತಿಯ ಆಚರಣೆಗಳ ಬಗ್ಗೆ ಹೊರ ಪ್ರಪಂಚಕ್ಕೆ ಮಾಹಿತಿಯನ್ನು ಒದಗಿಸಲು ಪ್ರಯತ್ನಿಸುತ್ತಿರುವ ಮಧುಸೂಧನ್ ಅವರ ಪ್ರಯತ್ನಕ್ಕೆ ಯಶಸ್ಸು ದೊರೆಯಲೆಂದು ಹಾರೈಸುತ್ತೇನೆ.
Showing 721 to 750 of 3317 results