nil
#
'ನಮ್ಮ ಬದುಕಿನಲ್ಲಿ ನಾಲ್ಕು ಜನರಿಗೆ ಒಳ್ಳೆಯದು ಮಾಡಬೇಕು, ನಮ್ಮ ಬದುಕು ಹಾಗೆಯೇ ರೂಪುಗೊಳ್ಳಬೇಕು' ಎಂದು ಹಿರಿಯರು ಸದಾ ಹೇಳುವ ಮಾತುಗಳು. ಆದರೆ ದೇವಿಕಾ ನಾಲ್ಕು ಜನರಿಗೆ ಒಳ್ಳೆಯದು ಮಾಡಬೇಕು ಎಂಬ ವಿಚಾರವನ್ನು ಘಂಟಾಘೋಷವಾಗಿ ಹೇಳುತ್ತ ಭಾಷಣವನ್ನೇನೂ ಬಿಗಿಯುವುದಿಲ್ಲ. ಬದಲಿಗೆ ಈ ಆಶಯವು ತಮ್ಮ ಅಂತರಂಗದಲ್ಲಿ ಸದಾ ಹಸಿರಾಗಿರುವಂತೆ ನೋಡಿಕೊಂಡವರು. ಈ ಅರಿವು ತೆಳುವಾಗಿ ನನ್ನ ಮನದಲ್ಲಿ ಮೂಡಿದ್ದರೂ, ಅವರ ಲೇಖನಗಳನ್ನು ಓದುತ್ತ ಹೋದಂತೆ ಅವರ ಅಂತರಂಗದ ಆಶಯವನ್ನು ಓದುವ ಅವಕಾಶವೊ೦ದು ನನಗೆ ದೊರೆತಂತಾಯಿತು.
ಕರ್ಣನಿಗೆ ಪೂರ್ವ ಜನ್ಮದಲ್ಲಿ ಸಹಸ್ರ ಕವಚಗಳಿದ್ದುವೆಂದೂ, ಅದನ್ನು ನರ ಮತ್ತು ನಾರಾಯಣರೆಂಬ ಋಷಿಗಳು ಯುದ್ಧದಲ್ಲಿ ಕತ್ತರಿಸುತ್ತ ಬಂದರೆಂಬುದು ಕಥೆ. ಅವುಗಳಲ್ಲಿ ಒಂದು ಕವಚ ಉಳಿದು ಬಂತು. ಅದನ್ನು ಕತ್ತರಿಸುವುದಕ್ಕಾಗಿ ಕೃಷ್ಣಾರ್ಜುನರು ಈ ಜನ್ಮದಲ್ಲಿ ಕಾಣಿಸಿಕೊಂಡರು. ಅಷ್ಟೇ ಅಲ್ಲ, ಜೀವನೊಬ್ಬನಿಗೆ ಅನೇಕ ಕವಚಗಳು, ಕರ್ಣನಂತೆ. ಅವುಗಳನ್ನು ಕಳೆದುಕೊಳ್ಳುತ್ತ, ಕಳೆದುಕೊಳ್ಳುತ್ತ ಸಾಗುವುದೇ ಅವನ ಪಾಡು. ಆ ಕವಚಗಳು ಲೋಹದ ಕವಚಗಳಲ್ಲ. ಕವಚ ಸಾಂಕೇತಿಕ ಅಷ್ಟೇ. ಕರ್ಣನ ಬದುಕೂ ಈ ಕವಚಗಳನ್ನು ಕಳೆದುಕೊಳ್ಳುವ ಪ್ರಕ್ರಿಯೆ. ಅದನ್ನೇ ಕಾದಂಬರಿಯೂ ಧ್ವನಿಸುತ್ತದೆ..
ಒಟ್ಟು 28 ಅಧ್ಯಾಯಗಳಿರುವ ಈ ಪುಸ್ತಕದ ಎಲ್ಲಾ ಅಧ್ಯಾಯಗಳೂ ಭರಪೂರ ಆತ್ಮ ನಿವೇದನೆಯಂಥಾ ರಸಪಾಕಗಳೇ. ಯಾವುದು ಚೆನ್ನಾಗಿದೆ, ಯಾವುದು ಚೆನ್ನಾಗಿಲ್ಲ ಎಂದು ವಿಂಗಡಿಸುವುದು ಸಾಧ್ಯವೇ ಇಲ್ಲ. ಒಮ್ಮೆ ಓದಲು ಶುರುವಿಟ್ಟುಕೊಂಡರೆ ಸಾಕು ನಿಲ್ಲಿಸುವ ಮನಸ್ಸೇ ಬಾರದು. ಉದಾಹರಣೆಗೆ 'ಎನೌಂಟರ್ ವಿತ್ ಮುತ್ತಪ್ಪ ರೈ' ಅಧ್ಯಾಯವನ್ನೇ ತೆಗೆದುಕೊಳ್ಳಿ, ಇಲ್ಲಿ ಯಾವುದಿಲ್ಲ, ಯಾವುದುಂಟು ಎಂದು ವಿಂಗಡಿಸುವುದು ಕಷ್ಟ ಕಷ್ಟ.. 'ಹಮ್ಮುಬಿಮ್ಮಿಲ್ಲದ ಹೃದಯವಂತ ದೊರೆ'ಯಲ್ಲಿನ ಅಂಬರೀಶ್ ನಮ್ಮ ಮುಂದೆ ಬೇರೆಯದ್ದೇ ಅವತಾರ ತಾಳಿ ಪ್ರತ್ಯಕ್ಷರಾಗುತ್ತಾರೆ. 'ಸಾಹಸಸಿಂಹನ ಸನ್ನಿಧಿಯಲ್ಲಿ'ನ ವಿಷ್ಣುವರ್ಧನ್ ಮತ್ತಷ್ಟು ಹತ್ತಿರವಾಗುವುದು ಕವಿಯ ನಿರ್ಮಲ ಹೃದಯದ ಅಭಿವ್ಯಕ್ತಿಯಿಂದ. 'ಈ ಮನುಷ್ಯರನ್ನೇಕೆ ದೇವತಾ ಮನುಷ್ಯ ಅನ್ನೋದು' ಅಧ್ಯಾಯದ ರಾಜಕುಮಾರ್ ನಮ್ಮ ಮುಂದೆ ಪ್ರತ್ಯಕ್ಷವಾಗುವ ರೀತಿ ಬೇರೆಯದ್ದೇ ಆದ ಅಂಗಲ್ನಲ್ಲಿ. 'ಕಿಚ್ಚನ ಪತ್ನಿಯ ಕಿವಿಯೋಲೆ ಪ್ರಸಂಗ'ದಲ್ಲಿ ಈ ಕವಿ ತಮ್ಮನ್ನು ತಾವೇ ಹೀಯಾಳಿಸುತ್ತಾರೋ, ಸಾಂತ್ವನಗೊಳಿಸುತ್ತಾರೋ, ರಹಸ್ಯ ಬಿಚ್ಚಿಡುತ್ತಾರೋ... ಅದೊಂದು ಸಸ್ಪೆನ್ಸ್. ಹಾಗೆಯೇ 'ಸಲಾಂ ಯಶ್ ಭಾಯ್', 'ರಶ್ಮಿಕಾ ಕ್ರಶ್ಮಿಕಾ ಆಗುವ ಮುನ್ನ...' ಮೊದಲಾದ ಅಧ್ಯಾಯಗಳು ರಸಿಕ ಹೃದಯದ ಸಂವೇದನೆಗಳು! ಸರಾಗವಾಗಿ ಓದಿಸಿಕೊಂಡು ಹೋಗುವ ಕವಿಯ ಶೈಲಿಗೆ ನಮೋ ನಮಃ. ಕಣ್ಣಿಗೆ ಕಟ್ಟಿದಂತೆ ಅಕ್ಷರಗಳಲ್ಲಿ ಘಟನೆಗಳನ್ನು ಹೆಣೆಯುವ ಪರಿಗೆ ಯಾರಾದರೂ ಅಚ್ಚರಿಗೊಳ್ಳಲೇಬೇಕು. ಎಲ್ಲೂ ಬೋರು ಹೊಡೆಯದಂತೆ ವಾಕ್ಯ ರಚನೆಯಲ್ಲಿ ತೆಗೆದುಕೊಂಡ ಜಾಗ್ರತೆ ನಿಚ್ಚಳವಾಗಿ ಎದ್ದುಕಾಣುತ್ತದೆ. ಇದು ಈ ಕೃತಿಯ ಸಾರ್ಥಕತೆ. ಗಣೇಶ್ ಕಾಸರಗೋಡು
NA
ಭುವನೇಶ್ವರ ಸುತ್ತ ಮುತ್ತಲಿನ ಆಯ್ದ ಸುಂದರ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ
ಎನ್ ಎಸ್ ಶ್ರೀನಿವಾಸಮೂರ್ತಿ
ವೀರಲೋಕದ 63ನೇ ಕೃತಿ ವಿಕ್ರಮ್ ಹತ್ವಾರ್ ಅವರ “ಕಾಗೆ ಮೇಷ್ಟ್ರು”… ಝೀರೋ ಮತ್ತು ಒಂದು’ ಹಾಗು ‘ಹಮಾರಾ ಬಜಾಜ್’ ಎಂಬ ಕಥಾ ಸಂಕಲನದಿಂದ ಓದುಗರನ್ನು ಸೆಳೆದಿರುವ ವಿಕ್ರಮ ಹತ್ವಾರ್, ಕನ್ನಡದ ಅನನ್ಯ ಕತೆಗಾರ ಮತ್ತು ಕವಿ. ಹೊಸ ಭಾಷೆ, ವಿಶಿಷ್ಟ ವಸ್ತು-ನಿರ್ವಹಣೆ, ಮಾಹಿತಿ ತಂತ್ರಜ್ಞಾನ ಯುಗದ ಪಲ್ಲಟಗಳು, ಜಾಗತೀಕರಣ ಸಂದರ್ಭದಲ್ಲಿನ ಮನುಷ್ಯ ಸಂಬಂಧಗಳು, ದ್ವಂದ್ವಗಳು, ಆಧುನಿಕ ಮನುಷ್ಯನ ಸಂಕಟ ತವಕ-ತಾಕಲಾಟ ಹುಡುಕಾಟ, ಬದಲಾಗುತ್ತಿರುವ ಕೌಟುಂಬಿಕ ವ್ಯವಸ್ಥೆ ಮತ್ತು ಮೌಲ್ಯ – ಇವು ವಿಕ್ರಮ ಹತ್ವಾರರ ಕತೆಗಳಲ್ಲಿ ವಿಮರ್ಶಕರು ಗುರುತಿಸಿರುವ ಕೆಲವು ವಿಶೇಷತೆಗಳು. ಪ್ರಸ್ತುತ ‘ಕಾಗೆ ಮೇಷ್ಟ್ರು’ ಎಂಬ ಕಥಾ ಸಂಕಲನದಲ್ಲಿ ಹುಟ್ಟು ಸಾವು ಎನ್ನುವ ಎರಡು ತುರೀಯ ಸತ್ಯಗಳ ನಡುವೆ, ಮನುಷ್ಯನ ನೆಮ್ಮದಿಯ ಹುಡುಕಾಟದಲ್ಲಿ ವೇದ್ಯವಾಗುವ ಅಸಂಖ್ಯ ಅಣು ಸತ್ಯಗಳ ಮೇಳವಿದೆ. ಬದುಕಿನ ಅಸಂಗತ ಕ್ಷಣಗಳ ಆಳದಲ್ಲಿ ಹುದುಗಿರುವ ದರ್ಶನವು ಕತೆಗಾರನ ಕಾವ್ಯ ಕುಸುರಿಯಲ್ಲಿ ಅನಾವರಣಗೊಳ್ಳುವ ಸೋಜಿಗವನ್ನು ಓದಿನ ಮಾಯೆಯಲ್ಲೇ ಅನುಭವಿಸಬೇಕು. ಇಂಥ ಅನುಭವ ಸುಖದ ಸೆಳೆತ ಈ ಕತೆಗಳನ್ನು ಮತ್ತೆ ಮತ್ತೆ ಓದುವಂತೆ ಪ್ರೇರೇಪಿಸುತ್ತವೆ. ಓದುವ ನಶೆ ನಿಮಗೇರಲಿ…
ವೀರಲೋಕದ 63ನೇ ಕೃತಿ ವಿಕ್ರಮ್ ಹತ್ವಾರ್ ಅವರ “ಕಾಗೆ ಮೇಷ್ಟ್ರು”… ಝೀರೋ ಮತ್ತು ಒಂದು’ ಹಾಗು ‘ಹಮಾರಾ ಬಜಾಜ್’ ಎಂಬ ಕಥಾ ಸಂಕಲನದಿಂದ ಓದುಗರನ್ನು ಸೆಳೆದಿರುವ ವಿಕ್ರಮ ಹತ್ವಾರ್, ಕನ್ನಡದ ಅನನ್ಯ ಕತೆಗಾರ ಮತ್ತು ಕವಿ.
ಬ್ರಿಟಿಷ್ ವಿದ್ವಾಂಸರು ಮತ್ತು ಸ್ವಾತಂತ್ಯೋತ್ತರ ಕಾಲದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಸ್ವಾತಂತ್ರ್ಯ ಹೋರಾಟದ ನೈಜ ಇತಿಹಾಸವನ್ನು ಮರೆಮಾಜಿ, ತಪ್ಪು ಇತಿಹಾಸವನ್ನೇ ಯುವ ಪೀಳಿಗೆಯ ತಲೆಯಲ್ಲಿ ತುಂಬಿತು. ನೈಜ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಪ್ರಾಮಾಣಿಕ ಅನಾವರಣ ಹಾಗೂ ಗಂಭೀರ ಅಧ್ಯಯನ ನಡೆಯಲೇ ಇಲ್ಲ. ತಮಗೆ ಬೇಕಾದಂತೆ ನೈಜ ಇತಿಹಾಸವನ್ನು ತಿರುಚಿ, ಭಾರತದ ಹೋರಾಟದ ಇತಿಹಾಸವನ್ನು ಕಾಂಗ್ರೆಸ್ ಇತಿಹಾಸವಾಗಿ ಶಾಲಾ-ಕಾಲೇಜು-ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಮಸ್ತಿಷ್ಕದಲ್ಲಿ ತುರುಕಲಾಯಿತು. ಇದೊಂದು ಕಾಂಗ್ರೆಸ್ ಸರಕಾರದ ಅನುಚಿತ, ಅಸಂಬದ್ಧ ಹಾಗೂ ಅಹಂಕಾರದ ಕ್ರಮವೇ ಆಗಿತ್ತು ಏ. ಓ.ಹೂಮ್ ಎಂಬ ವಿದೇಶೀಯನಿಂದ ಸ್ಥಾಪನೆಗೊಂಡು ಇಟಿಷರನ್ನು ಓಲೈಸುವುದಕ್ಕಾಗಿಯೇ ಹುಟ್ಟಿದ ಕಾಂಗ್ರೆಸ್ಗೆ ಈಗಲೂ ಭಾರತ ನಿಷ್ಠೆಗಿಂತ ವಿದೇಶಿ ನಿಷ್ಠೆಯೇ ಹೆಚ್ಚು ಎನ್ನುವುದು ಪದೇಪದೇ ಸಾಬೀತಾಗುತ್ತಲೇ ಇದೆ. ಕಾಂಗ್ರೆಸ್ ಕರಾಳ ಇತಿಹಾಸ ಮುಂದುವರೆಯುತ್ತಲೇ ಇದೆ. ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಕಾಂಗ್ರೆಸ್ ನಡೆಸಿದ ಅಪಸವ್ಯಗಳ ಇತಿಹಾಸವನ್ನು ಆಧಾರಸಹಿತ ಈ ಕೃತಿಯಲ್ಲಿ ಆದಷ್ಟೂ ಸರಳವಾಗಿ ವಿಶ್ಲೇಷಿಸಲಾಗಿದೆ.
Showing 751 to 780 of 3317 results