nil
ನಮ್ಮ ದೇಶದಲ್ಲಿ ರಾಮಾಯಣ, ಮಹಾಭಾರತ, ಭಾಗವತಗಳಿಗೆ ಸಂಬಂಧಪಡದ ನದಿಗಳಿಲ್ಲ, ಬೆಟ್ಟಗಳಿಲ್ಲ, ಯಾವ ಊರೂ ಇಲ್ಲ. ಹಾಗಾಗಿ ಇಡೀ ಭಾರತವೇ ಒಂದು ತೀರ್ಥಕ್ಷೇತ್ರ. ತೀರ್ಥಯಾತ್ರೆ ಅಭಯದ ಸಂಕೇತ. ಮನಸ್ಸಿಗೆ ಬಲ ಕೊಡುವ ಪ್ರಕ್ರಿಯೆ. ಭರವಸೆ ಕುಗ್ಗಿದಾಗ, ಚೈತನ್ಯ ತರುತ್ತದೆ. ಮನುಷ್ಯನ ತಿರುಗಾಟಕ್ಕೊಂದು ಆಧ್ಯಾತ್ಮಿಕ ಸ್ಪರ್ಶ ನೀಡುವುದೇ ತೀರ್ಥಯಾತ್ರೆ.. ಪ್ರವಾಸ ಲೌಕಿಕ ಅನುಭವವನ್ನು ಕೊಟ್ಟರೆ, ತೀರ್ಥಯಾತ್ರೆ ಅಲೌಕಿಕ ಅನುಭವವನ್ನು ತಂದುಕೊಡುತ್ತದೆ.
#
ದೇಶ ವಿಭಜನೆಯನ್ನು ಕುರಿತು ಈಗಾಗಲೇ ಲೆಕ್ಕವಿಲ್ಲದಷ್ಟು ಪುಸ್ತಕಗಳು ಬಂದಿವೆ. ಹಾಗೆ ನೋಡಿದರೆ ಇದೊಂದು ಮುಗಿಯದ ಸರಕು.ಕಾಲದಿಂದ ಕಾಲಕ್ಕೆ ಈ ದುರಂತವು ಬೇರೆ ಬೇರೆ ಮಾಹಿತಿ, ಅಂಕಿ-ಅಂಶ,ಸಂಶೋಧನೆ, ಚರಿತ್ರೆಯ ಅಧ್ಯಯನಗಳೊಂದಿಗೆ ಹೊಸ ಹೊಸ ಕೃತಿಗಳನ್ನು ಸೃಷ್ಟಿಸುತ್ತಿದೆ. ಅಂದಂತೆ,ಭಾರತದಲ್ಲಿ ಸಮಾಜವಾದದ ಯುಗದಲ್ಲಿ ಒಬ್ಬರಾದ ರಾಮ ಮನೋಹರ ಲೋಹಿಯಾ ಅವರು, ಅಖಂಡ ಭಾರತದ ಇಬ್ಭಾಗಕ್ಕೆ ನೇರ ಸಾಕ್ಷಿಯಾಗಿದ್ದವರು. ನೇರ ನಡೆ-ನುಡಿಗಳಿಗೆ ಮತ್ತು ನಿಲುವುಗಳಿಗೆ ಹೆಸರಾಗಿದ್ದ ಅವರು, ಭಾರತದ ಚಿಂತಕರ ವರ್ತುಲ ಮತ್ತು ಸಾರ್ವಜನಿಕ ಬದುಕಿನ ಮೇಲೆ ಬೀರಿರುವ ಪ್ರಭಾವ ಅಗಾಧವಾದುದು.ಅದರಲ್ಲೂ ಲೋಹಿಯಾ ಅವರು ದೇಶ ವಿಭಜನೆಗೆ ಕಾರಣರಾದವರು ಯಾರೆಂದು ಬಗೆದು ನೋಡಿ ಬರೆದಿರುವ The Guilty Men of India's Partition ಅತ್ಯಂತ ಮಹತ್ವದ ಕೃತಿಯಾಗಿದೆ.ಇದನ್ನು ಹೆಸರಾಂತ ಲೇಖಕ ಡಾ.ಟಿ ಎನ್ ವಾಸುದೇವಮೂರ್ತಿ ಅವರು "ದೇಶ ವಿಭಜನೆಯ ಪಾಪ ಹೊತ್ತವರು" ಎನ್ನುವ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿ ಕೊಟ್ಟಿದ್ದಾರೆ. ಇದಕ್ಕಾಗಿ ನಾವು ಅವರಿಗೆ ಆಭಾರಿಗಳಾಗಿದ್ದೇವೆ ದೊಡ್ಡದೊಡ್ಡ ಪದಗಳ ಬಾರವಿಲ್ಲದೆ ಸಹಜವಾದ ತಿಳಿಗನ್ನಡದಲ್ಲಿ ಮೂಡಿಬಂದಿರುವ ಈ ಭಾಷಾಂತರವು ಕನ್ನಡ ವಾಙ್ಮಯಕೊಂದು ಬೆಲೆಯುಳ್ಳ ಸೇರ್ಪಡೆಯಾಗಿದೆ
ಮೇಟಿ ರುದ್ರೇಶ
ಸಿ ಕೇಶವ , ಕು ವೆಂ ಶ್ರೀನಿವಾಸ್
ನಿಮ್ಮ ನಾಲಿಗೆ ಬಯಸುವ ಚಾಕೋಲೆಟೊಂದು ಸಲೀಸಾಗಿ ನಿಮ್ಮನ್ನು ತಲುಪುವಂತೆ, ನಿಮ್ಮ ಬುದ್ದಿ ಇಷ್ಟಪಡುವ ಪುಸ್ತಕವೊಂದು ನಿಮ್ಮ ಗೂಡಿಗೆ ತಲುಪಿಸಲು ಹರಸಾಹಸ ಪಡಬೇಕಾದ ಸ್ಥಿತಿ ಕನ್ನಡದಲ್ಲಿದೆ. ಅದನ್ನು ಮನಗಂಡು ನೀವು ಇರುವಲ್ಲೇ, ನೀವು ಇಷ್ಟ ಪಡುವ ಪುಸ್ತಕಗಳನ್ನು ನಿಮಗೆ ತಲುಪಿಸುವ ಜವಾಬ್ದಾರಿ ಇನ್ಮುಂದೆ 'ವೀರಲೋಕ ಬುಕ್ಸ್' ಹೊರಲಿದೆ. ನಿಶ್ಚಿಂತೆಯಿಂದ ಓದುವ ಸುಖ ನಿಮ್ಮದಾಗಲಿ. ಯುವ ಜನತೆ ಪುಸ್ತಕ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದಾರೆ ಎನ್ನುವುದು ಎಷ್ಟು ಸತ್ಯವೋ, ಅವರನ್ನು ಓದಿಸಬೇಕಾದ ಜವಾಬ್ದಾರಿ ಕೂಡ ನಮ್ಮದು ಎನ್ನುವುದು ಅಷ್ಟೇ ಸತ್ಯ. ಅವರಿಗೆ ಓದಿನ ರುಚಿ ಹೆಚ್ಚಿ, ಪುಸ್ತಕಗಳ ಮಹತ್ವ ತಿಳಿಸುವ ಉದ್ದೇಶ ವೀರಲೋಕ ಬುಕ್ಸ್ ಹಿಂದಿದೆ. ಪ್ರಾಮೀಸ್, ನಾವು ರಾಜ್ಯದ ಕಟ್ಟಕಡೆಯ ಓದುಗನಿಗೆ ಪುಸ್ತಕ ತಲುಪಿಸುವ ಬಹು ದೊಡ್ಡನೆಟ್ ವರ್ಕ್ ಹೊಂದಿದ್ದೇವೆ. ನಿಮ್ಮೂರು ಯಾವುದೇ ಆಗಿರಲಿ, ಅಲ್ಲಿಗೆ ಪುಸ್ತಕ ಮುಟ್ಟಿಸುತ್ತೇವೆ. ಈ ಕಾರ್ಯದಲ್ಲಿ ನಮ್ಮ ಬೆನ್ನಹಿಂದೆ ಈ ನಾಡಿನ ಅಸಂಖ್ಯಾತ ಲೇಖಕರ ಬಳಗವೇ ಇದೆ. ನಮ್ಮದು ಉದ್ಯಮವಲ್ಲ. ಇದೊಂದು ಅಕ್ಷರ ಕ್ರಾಂತಿ ಹಂಚುವ ಕಾಯಕ. ಸದಭಿರುಚಿ ಪುಸ್ತಕಗಳ ತಲುಪಿಸುವ ಅಭಿಯಾನ. ಈ ಕೆಲಸದಲ್ಲಿ ನಮ್ಮೊಂದಿಗೆ ನೀವೂ ಕೈಜೋಡಿಸಿ. ಹೆಚ್ಚಿನ ಮಾಹಿತಿ ಮತ್ತು ನಮ್ಮ ಉದ್ದೇಶವನ್ನು ಇತರರಿಗೆ ತಲುಪಿಸಲು ವೀರಲೋಕ ಬುಕ್ಸ್ ಕಾಮ್ ಗೆ ಭೇಟಿ ನೀಡಿ. ಪುಸ್ತಕ ಖರೀದಿಸಿ, ಕೊಂಡುಕೊಳ್ಳುವಂತೆ ಪ್ರೋತ್ಸಾಹಿಸಿ.
Showing 1381 to 1410 of 3317 results