nil
ನಿಮ್ಮ ನಾಲಿಗೆ ಬಯಸುವ ಚಾಕೋಲೆಟೊಂದು ಸಲೀಸಾಗಿ ನಿಮ್ಮನ್ನು ತಲುಪುವಂತೆ, ನಿಮ್ಮ ಬುದ್ದಿ ಇಷ್ಟಪಡುವ ಪುಸ್ತಕವೊಂದು ನಿಮ್ಮ ಗೂಡಿಗೆ ತಲುಪಿಸಲು ಹರಸಾಹಸ ಪಡಬೇಕಾದ ಸ್ಥಿತಿ ಕನ್ನಡದಲ್ಲಿದೆ. ಅದನ್ನು ಮನಗಂಡು ನೀವು ಇರುವಲ್ಲೇ, ನೀವು ಇಷ್ಟ ಪಡುವ ಪುಸ್ತಕಗಳನ್ನು ನಿಮಗೆ ತಲುಪಿಸುವ ಜವಾಬ್ದಾರಿ ಇನ್ಮುಂದೆ 'ವೀರಲೋಕ ಬುಕ್ಸ್' ಹೊರಲಿದೆ. ನಿಶ್ಚಿಂತೆಯಿಂದ ಓದುವ ಸುಖ ನಿಮ್ಮದಾಗಲಿ. ಯುವ ಜನತೆ ಪುಸ್ತಕ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದಾರೆ ಎನ್ನುವುದು ಎಷ್ಟು ಸತ್ಯವೋ, ಅವರನ್ನು ಓದಿಸಬೇಕಾದ ಜವಾಬ್ದಾರಿ ಕೂಡ ನಮ್ಮದು ಎನ್ನುವುದು ಅಷ್ಟೇ ಸತ್ಯ. ಅವರಿಗೆ ಓದಿನ ರುಚಿ ಹೆಚ್ಚಿ, ಪುಸ್ತಕಗಳ ಮಹತ್ವ ತಿಳಿಸುವ ಉದ್ದೇಶ ವೀರಲೋಕ ಬುಕ್ಸ್ ಹಿಂದಿದೆ. ಪ್ರಾಮೀಸ್, ನಾವು ರಾಜ್ಯದ ಕಟ್ಟಕಡೆಯ ಓದುಗನಿಗೆ ಪುಸ್ತಕ ತಲುಪಿಸುವ ಬಹು ದೊಡ್ಡನೆಟ್ ವರ್ಕ್ ಹೊಂದಿದ್ದೇವೆ. ನಿಮ್ಮೂರು ಯಾವುದೇ ಆಗಿರಲಿ, ಅಲ್ಲಿಗೆ ಪುಸ್ತಕ ಮುಟ್ಟಿಸುತ್ತೇವೆ. ಈ ಕಾರ್ಯದಲ್ಲಿ ನಮ್ಮ ಬೆನ್ನಹಿಂದೆ ಈ ನಾಡಿನ ಅಸಂಖ್ಯಾತ ಲೇಖಕರ ಬಳಗವೇ ಇದೆ. ನಮ್ಮದು ಉದ್ಯಮವಲ್ಲ. ಇದೊಂದು ಅಕ್ಷರ ಕ್ರಾಂತಿ ಹಂಚುವ ಕಾಯಕ. ಸದಭಿರುಚಿ ಪುಸ್ತಕಗಳ ತಲುಪಿಸುವ ಅಭಿಯಾನ. ಈ ಕೆಲಸದಲ್ಲಿ ನಮ್ಮೊಂದಿಗೆ ನೀವೂ ಕೈಜೋಡಿಸಿ. ಹೆಚ್ಚಿನ ಮಾಹಿತಿ ಮತ್ತು ನಮ್ಮ ಉದ್ದೇಶವನ್ನು ಇತರರಿಗೆ ತಲುಪಿಸಲು ವೀರಲೋಕ ಬುಕ್ಸ್ ಕಾಮ್ ಗೆ ಭೇಟಿ ನೀಡಿ. ಪುಸ್ತಕ ಖರೀದಿಸಿ, ಕೊಂಡುಕೊಳ್ಳುವಂತೆ ಪ್ರೋತ್ಸಾಹಿಸಿ.
ಸಮಲೈಂಗಿಕತೆ ಎಂದರೇನು? ನಮ್ಮ ಧರ್ಮಗಳು ಇದನ್ನು ಕುರಿತು ಏನು ಹೇಳುತ್ತವೆ? ಹಿಂದೂ ಪೌರಾಣಿಕ ಧರ್ಮ ಗ್ರಂಥಗಳು, ಇಸ್ಲಾಂ, ಜೈನ ಹಾಗೂ ಬೌದ್ಧ ಧರ್ಮಗಳು ಸಾಮಾಜಿಕವಾಗಿ ಈ ಬಗ್ಗೆ ಏನನ್ನು ಹೇಳುತ್ತವೆ? ಆಧುನಿಕ ದೃಷ್ಟಿಕೋನದಿಂದಲೂ, ಪೌರಾಣಿಕ ಸಾಹಿತ್ಯದ ವೈವಿಧ್ಯಮಯ ವಿಶ್ಲೇಷಣೆಯ ಮೂಲಕವೂ, ಪ್ರಖ್ಯಾತ ಚಿಂತಕರಾದ ದೇವದತ್ತ ಪಟ್ಟನಾಯಕ ಸಮಲೈಂಗಿಕತೆ ಕುರಿತಾದ ಆಳವಾದ ಚರ್ಚೆಯನ್ನು ಈ ಕೃತಿಯಲ್ಲಿ ಮಂಡಿಸಿದ್ದಾರೆ. ಪೌರಾಣಿಕ ದಂತಕಥೆಗಳು, ಶಿಲ್ಪಕಲಾ ಪರಂಪರೆ, ಪುರಾತನ ಗ್ರಂಥಗಳು, ಹೀಗಾಗಿ ವಿವಿಧ ಸಂಸ್ಕೃತಿಗಳ ಪಾರದರ್ಶಕ ಅಧ್ಯಯನ ಈ ಕೃತಿಯ ವೈಶಿಷ್ಟ್ಯವಾಗಿದೆ. ಇದು ಧರ್ಮ ಮತ್ತು ಸಮಲೈಂಗಿಕತೆ ನಡುವಿನ ಸಂಬಂಧದ ಕುರಿತಾದ ಅನ್ವೇಷಣೆ, ಪುರಾಣಗಳು ಮತ್ತು ಸಮಾಜದ ನಡುವಿನ ಸಂವಾದ. ಪ್ರಗತಿಶೀಲ ಯೋಗ್ಯತೆ ಮತ್ತು ಮಾನವೀಯತೆಗೆ ಒಲವು ಇರುವ ಪ್ರತಿಯೊಬ್ಬರಿಗೂ ಈ ಕೃತಿ ಓದಲು ತಕ್ಕದ್ದು.
#
ಗಂಗಾವತಿ ಬಿ ಪ್ರಾಣೇಶ್
ಯಶೋಮತಿ ರವಿ ಬೆಳಗೆರೆ
ತೀರಾ ಸಂಪ್ರದಾಯದ ಚೌಕಟ್ಟಿನಲ್ಲಿ ಬೆಳೆದು ಅನಿವಾರ್ಯವಾಗಿ ಶಾಸ್ತ್ರಿಗಳ ಮನೆ ಸೇರುವ ಸೌಭಾಗ್ಯಳಿಗೆ ವಾದ್ಯ, ಸಂಗೀತಗಳಲ್ಲಿ ಆಸಕ್ತಿ. ಶಾಸ್ತ್ರಿಯವರ ಬಳಿ ಸಂಗೀತ ಅಭ್ಯಾಸ ಮಾಡಿ ಪಕ್ಕದ ಮನೆಯವರ ಬಳಿ ವೀಣೆ ನುಡಿಸುವುದನ್ನು ಕಲಿತರೂ ಅವಳ ಪ್ರತಿಭೆಗೆ ಅವಕಾಶವಿರುವುದಿಲ್ಲ. ಶಾಸ್ತ್ರಿಗಳೇ ತಮ್ಮ ಬೆಂಗಳೂರಿನ ಗೆಳೆಯ ಅವಧಾನಿಯ ಬಳಿಗೆ ಕಳುಹಿಸಿ ಅವಳ ಪ್ರತಿಭೆಗೆ ಅವಕಾಶ ಮಾಡಿಕೊಡುವಂತೆ ಕೇಳಿಕೊಳ್ಳುತ್ತಾರೆ. ಅವಧಾನಿಗಳ ಮನೆ ಕೂಡ ಸಂಗೀತಾರಾಧನೆಯ ದೇಗುಲ. ಅವರ ಮಗ ಮುರಳಿಗೆ ಇದು ಒಮ್ಮತವಿಲ್ಲದ್ದು. ತನಗೆ ಅದೃಷ್ಟ ದೊರಕಿತೆಂದು ಸೌಭಾಗ್ಯ ಹರ್ಷಿಸುತ್ತಿರುವಾಗಲೇ ಜಿ ಮನೆಯಿಂದ ಹೊರಹೋಗಬೇಕಾದ ಸನ್ನಿವೇಶ ಏರ್ಪಡುತ್ತದೆ. ಅವಳು ನೊಂದುಕೊಂಡರು ಜೀವನೋಪಾಯಕ್ಕಾಗಿ ತನ್ನ ಪ್ರತಿಭೆಯನ್ನು ಬಳಸಿಕೊಳ್ಳುವುದು ಸಮಂಜಸವೆನಿಸಿ, ಮುಗ್ಗಳಾದ ಆಕೆ ಪತ್ರಿಕೆಯ ಜಾಹೀರಾತು ನೋಡಿ ಅಲ್ಲಿಗೆ ಹೋಗುತ್ತಾಳೆ. ಅವಳ ಪ್ರತಿಭೆಗೆ ಸದಾವಕಾಶವಿದ್ದರೂ ಅದು ಸರಿಯಾದ ಸ್ಥಳವಲ್ಲವೆನ್ನುವುದು ತಿಳಿಯುತ್ತದೆ. ಮುಂದೆ ಅವಳ ಬದುಕಿನಲ್ಲಿ ಸಂಕರ್ಷ ನೆನ್ನುವ ಆಧುನಿಕ ಮನೋಭಾವದ ಯುವಕನ ಪ್ರವೇಶವಾಗುತ್ತದೆ. ಅಲ್ಲಿಯವರೆಗೂ ಎಲ್ಲವೂ ಒಳ್ಳೆಯ ರೀತಿಯಲ್ಲಿಯೇ ಸಾಗುವ ಬದುಕು ಇದ್ದಕ್ಕಿದ್ದಂತೆ ಸಂಕಷ್ಟಕ್ಕಿದಾಗುತ್ತದೆ. ಸಂಕರ್ಷ್, ಆಕರ್ಷ್. ಮುರಳಿ ಅವಳ ಬದುಕಿನಲ್ಲಿ ಮೂಡಿದ ಮಂಜಿನ ಬಿಂದುಗಳಾಗುತ್ತಾರೆಯೇ? ಅವಳ ಕನಸುಗಳು ಸಾಕಾರಗೊಳ್ಳುತ್ತವೆಯೇ? ಇವಕ್ಕೆಲ್ಲ ಉತ್ತರ... ನಗು ಎಂದಿದೆ... ಕಾದಂಬರಿಯಲ್ಲಿದೆ.
ದಶರಥ
ಪ್ರಸ್ತುತ ಜಮಾನದಲ್ಲಿ ನಿಸ್ವಾರ್ಥ ಮನಸ್ಸಿನ ಯುವ ಪೀಳಿಗೆ ಕಾಣಸಿಗುವುದು ಅಪರೂಪ. ಎಲ್ಲೋ ನೋಡಿದ ಕೇಳಿದ ಆದರ್ಶಗಳನ್ನು ಪಾಲಿಸಿಕೊಂಡು ಬಂದಿರುವ ವ್ಯಕ್ತಿಯ ಚಿತ್ರಣ ನನ್ನ ಮನಸ್ಸಿನಲ್ಲಿ ಮೂಡಿತ್ತು. ಅದೇ ವ್ಯಕ್ತಿತ್ವವನ್ನು ಈ ಕಾದಂಬರಿಯಲ್ಲಿ ಒಂದು ಪಾತ್ರವನ್ನಾಗಿಸಿದೆ. ಅಂತಹ ಯುವಕನ ‘ಜೊತೆಯಾಗಿ ಬೆಳೆಯೋಣ’ ಎನ್ನುವ ಧ್ಯೇಯ ನನ್ನನ್ನು ಬಹಳವಾಗಿ ಕಾಡಿತ್ತು. ಇನ್ನೂ ಅಂತಹ ಆದರ್ಶ ಧ್ಯೇಯಗಳನ್ನು ಹೊತ್ತ ಯುವಕರು ನಮ್ಮ ನಡುವೆ ಇದ್ದಾರೆ ಎನ್ನುವ ಅಚ್ಚರಿಯಿಂದ ಈ ಕಾದಂಬರಿಯನ್ನು ಬರೆದೆ. ಈ ರೀತಿಯ ಯುವ ಪೀಳಿಗೆ ಇನ್ನಷ್ಟು ಬೆಳೆದರೆ ಗಾಂಧೀಜಿ ಯವರು ಕಂಡ ರಾಮರಾಜ್ಯದ ಕನಸು ನನಸಾದೀತು. ತನ್ನ ಗುರಿ ತಲುಪಿದ ಮೇಲೆಯೇ ಬಾಕಿ ವಿಚಾರಗಳೆಂದು ಸಂಯಮದಿAದ ವರ್ತಿಸಿ ತನ್ನ ಪ್ರೀತಿಯಲ್ಲಿಯೂ ಆದರ್ಶವನ್ನು ಮೆರೆದ ಆರ್ಯನ್ನ ಪಾತ್ರ, ಎಂದೂ ಎಲ್ಲೆ ಮೀರದ ಚಿಗುರುವಿನಂತಹ ಪಾತ್ರ ಓದುಗರಿಗೆ ಮುದ ನೀಡದಿರಲಾರದು.
ಸಂಪಟೂರು ವಿಶ್ವನಾಥ್
ನರಸಿಂಹಮೂರ್ತಿ ಎಂ ಎಸ್
ರತ್ನ ನ
Showing 1441 to 1470 of 3497 results