• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಅನುರಾಯ ಶಾಲ್ಮಲೆ | Anuraaya Shalmale

ಲಕ್ಷ್ಮೀಶ್ ಹೆಗಡೆ ಸೋಂದಾ, ಇತಿಹಾಸಕಾರರಾಗಿ, ವಾಗ್ನಿಗಳಾಗಿ ನಾಡಿನ ಚಿರಪರಿಚಿತ ಹೆಸರು. ಕಳೆದ 15 ವರ್ಷಗಳಿಂದ ಇತಿಹಾಸ ಸಂಶೋಧನೆಯಲ್ಲಿ ಸಕ್ರಿಯರಾಗಿ ಹಲವಾರು ಶಾಸನಗಳು, ವೀರಗಲ್ಲುಗಳು, ಐತಿಹಾಸಿಕ ಕುರುಹುಗಳನ್ನು ಸಂಶೋಧಿಸಿ ಅವುಗಳನ್ನ ಅಭ್ಯಸಿಸಿ ಸಮಾಜಕ್ಕೆ ಪರಿಚಯಿಸಿರುತ್ತಾರೆ. ಇದುವರೆಗೂ 14 ಕೃತಿಗಳು, 400ಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಸಂಶೋಧನೆಗಾಗಿ 2013ರಲ್ಲಿ ಬಸವರಾಜ ಕಟ್ಟಿಮನಿ ರಾಜ್ಯ ಪ್ರಶಸ್ತಿ ಮತ್ತು 2016ರಲ್ಲಿ ಕದಂಬ ಸೇವಾರತ್ನ ರಾಜ್ಯ ಪ್ರಶಸ್ತಿ, 2022ರಲ್ಲಿ ರವಿದಾತಾರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿ ವರ್ಷ ಇವರ ಸಂಚಾಲಕತ್ವದಲ್ಲಿ ನಡೆಯುವ ಸೋಂದಾ ಇತಿಹಾಸೋತ್ಸವ ನಾಡಿನಲ್ಲಿ ಪ್ರಸಿದ್ದಿ ಪಡೆದಿದೆ. ಯುವ ಜನತೆಯಲ್ಲಿ ಸ್ಥಳೀಯ ಇತಿಹಾಸದ ಕುರಿತು ಆಸಕ್ತಿ ಮೂಡಿಸಲು ಕಳೆದ 6 ವರ್ಷಗಳಿಂದ ಇವರು ನಡೆಸಿಕೊಂಡು ಬರುತ್ತಿರುವ ಉತ್ತರ ಕನ್ನಡ ಜಿಲ್ಲಾ ಚರಿತ್ರಾ ಅಭಿಯಾನ' ಆದರ್ಶ ಸಮಾಜದ ಸ್ಥಾಪನೆಗೊಂದು ಮಾದರಿ ಯೋಜನೆಯಾಗಿದೆ. * ಅನುರಾಯ ಶಾಲ್ಮಲೆ " ಎಂಬ ಈ ಐತಿಹಾಸಿಕ ಕಾದಂಬರಿಯ ಮೂಲವಸ್ತು ಸದಾಶಿವರಾಯ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋದೆ ಎಂಬ ಪ್ರದೇಶವನ್ನು ಕ್ರಿ.ಶ 1678ರಿಂದ 1718ರ ವರೆಗೆ ಆಳ್ವಿಕೆ ಮಾಡಿದ ಪರಾಕ್ರಮಿ, ಸಾಹಿತಿ, ಸಂಗೀತ ತಜ್ಞ ಅರಸ. ಈತನ ಶ್ರೇಷ್ಠ ಸಾಧನೆಯೆಂದರೆ ಕ್ರಿಶ 1680ರಲ್ಲೇ ಭಾರತದಲ್ಲಿ ಮೊದಲ ಬಾರಿಗೆ ಬ್ರಿಟಿಷರನ್ನು ಸೋಲಿಸಿದ ಮಹೋನ್ನತ ಶ್ರೇಯ, ಈತನನ್ನ ಕಥಾವಸ್ತುವನ್ನಾಗಿಸಿಕೊಂಡು ಕೃತಿಕಾರರು ಈ ಕಾದಂಬರಿಯನ್ನು ರಚಿಸಿದ್ದಾರೆ. ఈ ఐతియౌనిక ఊరు ಕಾದಂಬರಿಯನ್ನು ಓದುಗರು ಸ್ವಾಗತಿಸುವರೆಂದು ನಂಬಿದ್ದೇನೆ. -ಪ್ರಕಾಶಕ

₹130   ₹116

Buy Now
ಅನೂಹ್ಯ | Anoohya

ಹೊಸುರೆಲೆಗಳನ್ನು ಹುಡುಕುತ್ತಲೇ ಸಾಗುತ್ತಿರುವ ಮನುಷ್ಯನಿಗೆ, ಎಡತಾಗುತ್ತಲೇ ಇರುವ ಪ್ರಶ್ನೆ "ನಾನ್ಯಾರು?' ಎಂಬುದು. ಇದು ಅಧ್ಯಾತ್ಮದ 'ಅಲೌಕಿಕ ನಾನು' ಅಲ್ಲ, ಬದಲಿಗೆ ನಮ್ಮ ಅರಿವಿನಲ್ಲೇ ಇರುವ 'ಲೌಕಿಕ ನಾನು' ಜಟಿಲವಾದ ಪ್ರಶ್ನೆಯಾದ್ದರಿಂದ ಕಟ್ಟಿಕೊಳ್ಳುವ ಉತ್ತರವೂ ಶಿಥಿಲವಾಗಿರುತ್ತದೆ. ರಾಜ್ಯದ ನಾನಾ ಕಡೆಗಳಿಂದ ಬೆಂಗಳೂರಿನಂತಹ ಮಹಾನಗರಕ್ಕೆ ಬಂದು ಬದುಕು ಕಟ್ಟಿಕೊುವ ಯುವಕ ಯುವತಿಯರಿಗೆ ಕಾಡುವುದೂ ಇದೇ ಪ್ರಶ್ನೆ ಈ ಕಾದಂಬರಿಯಲ್ಲಿರುವುದು ಅಂತಹ ಯುವಪ್ರೇಮಿಗಳಿಬ್ಬರ ಕಥನ. ಜನಸಮೂಹವನ್ನು ಅಪ್ಪಳಿಸಿದ ಕರೋನಾದ ಹಿನ್ನೆಲೆಯಲ್ಲಿ ನಡೆಯುವ ಪ್ರೇಮಕಥನ, ಅವರು ದಂಪತಿಗಳಾದ ನಂತರವೂ ವಿಸ್ತರಿಸುವ ದಾಂಪತ್ಯದ ಕಥನ. ನೈಜ ಬದುಕು, ಪ್ರಾರಂಭಹಾಗೂ ಅಂತ್ಯ ಎಂಬ ಒತ್ತಡಗಳಿಂದ ಮುಕ್ತವಾಗಿರುವುದರಿಂದ; ಇಲ್ಲಿನ ಪಾತ್ರಗಳಿಗೂ ಆ ಹೊರೆಯನ್ನು ಹೇರಲಾಗಿಲ್ಲ. ಆ ನಿಟ್ಟಿನಲ್ಲಿ ಇದೊಂದು ಹೊಸಪ್ರಯೋಗ ಎಂದು ಆಶಿಸುತ್ತೇನೆ. ಡಾ| ಶ್ರೀಧರ್ ಕೆ ಬಿ

₹220   ₹198

Buy Now
ಅನೇಕ | Aneka

#

₹180   ₹160

Buy Now
ಅಪಸ್ವರ

nil

₹150   ₹134

Buy Now
ಅಪ್ಪನ ಅಂಗಿ | Appana angi

ಡಾ. ಲಕ್ಷ್ಮಣ ವಿ. ಎ. ಬೆಳಗಾವಿ ಜಿಲ್ಲೆ ಅಥಣಿ (ಈಗ ಕಾಗವಾಡ) ತಾಲೂಕಿನ ಮೋಳೆ ಗ್ರಾಮದಲ್ಲಿ ೧೯೭೭ರಲ್ಲಿ ಜನನ, ಪ್ರಾಥಮಿಕ ಹಾಗು ಮಾಧ್ಯಮಿಕ ಶಿಕ್ಷಣ ಹುಟ್ಟೂರಿನಲ್ಲಿ ಪಿಯೂಸಿ ಧಾರವಾಡದ ಕರ್ನಾಟಕ ಸೈನ್ಸ್ ಕಾಲೇಜಿನಲ್ಲಿ, ವೈದ್ಯಕೀಯ ಪದವಿ ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ, ಮೈಸೂರು ವಿ.ವಿ.ಯಿಂದ 'ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ'ದಲ್ಲಿ ಡಿಪ್ಲೋಮಾ ಪದವಿ ಮತ್ತು ಡಿಪ್ಲೋಮಾ ಇನ್ ಫಾರ್ಮಾಸಿ ತುಮಕೂರಿನ ಜಿಲ್ಲೆ ಕೊರಟಗೆರೆ ಕಾಲೇಜಿನಿಂದ, ಪ್ರಸ್ತುತ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ Read More...

₹100   ₹89

Buy Now
ಅಂಬಿಕಾತನಯದತ್ತನ ಹಾಡ ಬೆಳುದಿಂಗಳ ನೋಡs... | Beludingala Noda..

ದೊಡ್ಡ ಬೆರಗು. ಶಬ್ದ, ನಾದ, ಲಯ, ಛಂದ ಎಂಬ ನಾಲ್ಕು ತಂತ್ರ ಚತುರ್ಮುಖತೆಯಿಂದ ಕನ್ನಡ ಕಾವ್ಯವಾಹಿನಿಗೆ ಬೆಲೆಯುಳ್ಳ ಚಿರಕಾವ್ಯವನ್ನು ಕೊಟ್ಟ ಧೀಮಂತ ಕವಿ. ಇವರ ಕಾವ್ಯವನ್ನು ಓದಿ ನಾಡು ತಣಿದಿದೆ. ಕವಿಯ ಕಾವ್ಯ ವ್ಯಕ್ತಿತ್ವದ ಆಯಾಮ ಒಂದು ಮಜಲಾದರೆ, ಆತನ ಸಾಮಾಜಿಕ ವ್ಯಕ್ತಿತ್ವ ಮತ್ತೊಂದು ಮಜಲು. ವಿದ್ವತ್ತಿನ ಗತ್ತು, ಕಾವ್ಯಪ್ರತಿಭೆಯ ಮೇಲರಿಮೆ, ಸಿಟ್ಟು, ಸೆಡವು, ಜಗಳಗಂಟಿತನ, ವಾಗ್ವಿಲಾಸದ ವೈಖರಿ, ಬಹುಶ್ರುತ ಆಸಕ್ತಿ, ಅಪಾರವಾದ ಜ್ಞಾನಾಕಾಂಕ್ಷೆ, ಜಗದೆಲ್ಲ ಚಟುವಟಿಕೆಗಳನ್ನು ಕಾವ್ಯ ಪರಿಪ್ರೇಕ್ಷ್ಯದಲ್ಲಿ ಕಾಣುವ, ಕಾಣಿಸುವ ಬಗೆ, ಮಗು ಸಹಜ ಮುಗ್ಧತೆ ಈ ಎಲ್ಲ ಗುಣಗಳ ಸಮ್ಮಿಲನದ ಗಾರುಡಿಗ ವ್ಯಕ್ತಿತ್ವ ಬೇಂದ್ರೆಯವರದು. ಇವರ ಬಗೆಗೆ ಪ್ರಚಲಿತದಲ್ಲಿರುವ ಕತೆಗಳನ್ನು, ಸಂಗತಿಗಳನ್ನು, ಪ್ರಸಂಗಗಳನ್ನು ಒಂದೆಡೆ ಸಂಗ್ರಹಿಸಿ ಉಳಿಸುವ ಮತ್ತು ಮುಂದಿನ ತಲೆಮಾರಿಗೆ ಒದಗಿಸಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ಈ ಕಾರಣದಿಂದ ಎಚ್. ಎಸ್. ಸತ್ಯನಾರಾಯಣ ಅವರ 'ಅಂಬಿಕಾತನಯದತ್ತನ ಹಾಡ ಬೆಳುದಿಂಗಳು ನೋಡಾ...' ಎಂಬ ಕೃತಿ ಮಹತ್ವದ್ದು.

₹150   ₹134

Buy Now