ದೊಡ್ಡ ಬೆರಗು. ಶಬ್ದ, ನಾದ, ಲಯ, ಛಂದ ಎಂಬ ನಾಲ್ಕು ತಂತ್ರ ಚತುರ್ಮುಖತೆಯಿಂದ ಕನ್ನಡ ಕಾವ್ಯವಾಹಿನಿಗೆ ಬೆಲೆಯುಳ್ಳ ಚಿರಕಾವ್ಯವನ್ನು ಕೊಟ್ಟ ಧೀಮಂತ ಕವಿ. ಇವರ ಕಾವ್ಯವನ್ನು ಓದಿ ನಾಡು ತಣಿದಿದೆ. ಕವಿಯ ಕಾವ್ಯ ವ್ಯಕ್ತಿತ್ವದ ಆಯಾಮ ಒಂದು ಮಜಲಾದರೆ, ಆತನ ಸಾಮಾಜಿಕ ವ್ಯಕ್ತಿತ್ವ ಮತ್ತೊಂದು ಮಜಲು. ವಿದ್ವತ್ತಿನ ಗತ್ತು, ಕಾವ್ಯಪ್ರತಿಭೆಯ ಮೇಲರಿಮೆ, ಸಿಟ್ಟು, ಸೆಡವು, ಜಗಳಗಂಟಿತನ, ವಾಗ್ವಿಲಾಸದ ವೈಖರಿ, ಬಹುಶ್ರುತ ಆಸಕ್ತಿ, ಅಪಾರವಾದ ಜ್ಞಾನಾಕಾಂಕ್ಷೆ, ಜಗದೆಲ್ಲ ಚಟುವಟಿಕೆಗಳನ್ನು ಕಾವ್ಯ ಪರಿಪ್ರೇಕ್ಷ್ಯದಲ್ಲಿ ಕಾಣುವ, ಕಾಣಿಸುವ ಬಗೆ, ಮಗು ಸಹಜ ಮುಗ್ಧತೆ ಈ ಎಲ್ಲ ಗುಣಗಳ ಸಮ್ಮಿಲನದ ಗಾರುಡಿಗ ವ್ಯಕ್ತಿತ್ವ ಬೇಂದ್ರೆಯವರದು. ಇವರ ಬಗೆಗೆ ಪ್ರಚಲಿತದಲ್ಲಿರುವ ಕತೆಗಳನ್ನು, ಸಂಗತಿಗಳನ್ನು, ಪ್ರಸಂಗಗಳನ್ನು ಒಂದೆಡೆ ಸಂಗ್ರಹಿಸಿ ಉಳಿಸುವ ಮತ್ತು ಮುಂದಿನ ತಲೆಮಾರಿಗೆ ಒದಗಿಸಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ಈ ಕಾರಣದಿಂದ ಎಚ್. ಎಸ್. ಸತ್ಯನಾರಾಯಣ ಅವರ 'ಅಂಬಿಕಾತನಯದತ್ತನ ಹಾಡ ಬೆಳುದಿಂಗಳು ನೋಡಾ...' ಎಂಬ ಕೃತಿ ಮಹತ್ವದ್ದು.
#
nil
@#
75 ಪ್ರಾತಿನಿಧಿಕ ಕಿರುಗತೆಗಳ ಕಟ್ಟು
ರಾಜಿರಹಿತ ಮನೋಭಾವದಲ್ಲಿ ಅಪಾರ ಆಶಾವಾದ, ಜೀವನೋತ್ಸಾಹ, ಆದರ್ಶವಾದಿ ನೆಲೆಯಲ್ಲಿ ಬರೆದ ಬರಹಗಳಿವು. ಲೇಖಕರು ಅಮೆರಿಕದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 2006ರ ಇಸವಿಯ ಸ೦ದರ್ಭದಲ್ಲಿ ಕರ್ನಾಟಕದಲ್ಲಿ ಆರಂಭಿಸಿದ "ವಿಕ್ರಾಂತ ಕರ್ನಾಟಕ" ವಾರಪತ್ರಿಕೆಗೆ ಬರೆದ ಈ ಸಂಪುಟ-1 ಪುಸ್ತಕದಲ್ಲಿಯ ಲೇಖನಗಳಲ್ಲಿ ಕರ್ನಾಟಕ, ಭಾರತ, ಅಮೆರಿಕದ ತನಕ ವ್ಯಾಪಿಸಿಕೊಂಡ ರಾಜಕಾರಣವಿದೆ, ಸಾಮಾಜಿಕ ಸಂದರ್ಭಗಳ ವಿಶ್ಲೇಷಣೆ ಇದೆ, ಜನಬದುಕಿನ ಮೇಲೆ ವಿಜ್ಞಾನ-ತಂತ್ರಜ್ಞಾನಗಳ ನೂತನ ಆವಿಷ್ಕಾರ ಮತ್ತು ಅನ್ವಯಗಳ ಹಲವು ವಿವರಗಳಿವೆ, ಸಾಹಿತ್ಯ, ಸಿನಿಮಾ, ಕ್ರೀಡಾ ಸಂಬಂಧಿ ಲೇಖನಗಳಿವೆ. ಸ್ಥಳೀಯ ಮತ್ತು ಜಾಗತಿಕ ಆರ್ಥಿಕ ವಿದ್ಯಮಾನಗಳೂ ಚರ್ಚಿಸಲ್ಪಟ್ಟಿವೆ. ಪ್ರಜಾಪ್ರಭುತ್ವ ಮತ್ತು ಸಂವಾದದ ಮಹತ್ವವನ್ನು ಒಮ್ಮೊಮ್ಮೆ suttle ಆಗಿ, ಒಮ್ಮೊಮ್ಮೆ ಗಟ್ಟಿಯಾಗಿ ಹೇಳಲಾಗಿದೆ. ಹಲವು ವ್ಯಕ್ತಿಚಿತ್ರಗಳ ಮೂಲಕ ಸಾರ್ವತ್ರಿಕ ಮೌಲ್ಯಗಳನ್ನು ಮತ್ತು ಆದರ್ಶಗಳನ್ನು ಪ್ರತಿಪಾದಿಸಲಾಗಿದೆ.
Showing 151 to 180 of 3677 results