#
ವಿತ್ತ ಜಗತ್ತಿನ ಬರಹಗಾರರಾಗಿ ಖ್ಯಾತರಾಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದಿರುವ ಪುಸ್ತಕವೇ ‘ಮನಿ ಮನಿ ಎಕಾನಮಿ. ’ ಇದು ಬ್ಯಾಂಕಿಂಗ್, ಹಣಕಾಸು ಕ್ಷೇತ್ರ ಕುರಿತ ಮಾಹಿತಿಪೂರ್ಣ ಪುಸ್ತಕವಾಗಿದೆ. ವಿತ್ತ ಜತ್ತಿನ ಆಗುಹೋಗುಗಳನ್ನು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ತಿಳಿದುಕೊಳ್ಳುವ ಅಗತ್ಯವಿದೆ. ಸಾಮಾನ್ಯ ಪ್ರಜೆಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಲೇಖಕರು ಹಲವು ಉಪಯುಕ್ತ ಮಾಹಿತಿಯ ಲೇಖನಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು, ಸಾಮಾನ್ಯ ಪ್ರಜೆಗಳಿಗೂ ಉಪಯುಕ್ತ ಪುಸ್ತಕ ಇದಾಗಿದೆ.
ವಿತ್ತ ಜಗತ್ತಿನ ಬರಹಗಾರರಾಗಿ ಖ್ಯಾತರಾಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದಿರುವ ಪುಸ್ತಕವೇ ‘ಮನಿ ಮನಿ ಎಕಾನಮಿ.’ ಇದು ಬ್ಯಾಂಕಿಂಗ್, ಹಣಕಾಸು ಕ್ಷೇತ್ರ ಕುರಿತ ಮಾಹಿತಿಪೂರ್ಣ ಪುಸ್ತಕವಾಗಿದೆ. ವಿತ್ತ ಜತ್ತಿನ ಆಗುಹೋಗುಗಳನ್ನು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ತಿಳಿದುಕೊಳ್ಳುವ ಅಗತ್ಯವಿದೆ. ಸಾಮಾನ್ಯ ಪ್ರಜೆಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಲೇಖಕರು ಹಲವು ಉಪಯುಕ್ತ ಮಾಹಿತಿಯ ಲೇಖನಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು, ಸಾಮಾನ್ಯ ಪ್ರಜೆಗಳಿಗೂ ಉಪಯುಕ್ತ ಪುಸ್ತಕ ಇದಾಗಿದೆ.
ಎಂ ಎಸ್ ಶರತ್
nil
ಡಾ. ಬಿ. ಭಾಸ್ಕರ ರಾವ್
ಮನೆ ಇಂಜಿನಿಯರ್" ಶೀರ್ಷಿಕೆ ಹೊತ್ತ ಈ ಪುಸ್ತಕದಲ್ಲಿ ನಿವೇಶನದಿಂದ ಮೊದಲಾಗಿ ಮನೆಯನ್ನು ಕಟ್ಟಲು ಅಗತ್ಯವಿರುವ ಎಲ್ಲ ತರಹದ ಉಪಯುಕ್ತ ಮಾಹಿತಿಗಳನ್ನು ಅಚ್ಚುಕಟ್ಟಾಗಿ, ಸಾಮಾನ್ಯ ಜನರಿಗೂ ಅರ್ಥವಾಗುವಂತಹ ಸರಳವಾದ ಕನ್ನಡ ಭಾಷೆಯಲ್ಲಿ ರಾಮ್ಕದಮ್ರವರು ಬರೆದಿದ್ದಾರೆ. ನನ್ನ ಬಹುಕಾಲದ ಪರಿಚಿತರಾದ ಇವರು ಕನ್ನಡ ಸಾರಸ್ವತ ಲೋಕಕ್ಕೆ ಒಂದು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕೆಲವು ವಿಷಯಗಳು ಸಂಕ್ಷಿಪ್ತವಾಗಿವೆಯಾದರೂ ಅಗತ್ಯವಿರುವಷ್ಟು ವಿವರಣೆಯನ್ನು ಒಳಗೊಳ್ಳುವ ಮೂಲಕ 'ಮನೆ ಇಂಜಿನಿಯರ್' ಪರಿಪೂರ್ಣತೆಯನ್ನು ಪಡೆದು ಕೊಳ್ಳುವುದರಲ್ಲಿ ಸಫಲವಾಗಿದೆ. ವಿಶ್ವದ ಕೆಲವು ದೇಶಗಳಲ್ಲಿ ಬಳಕೆಯಲ್ಲಿರುವ ಆಯ್ದ ಮನೆಗಳ ಮಾದರಿ ನಕಾಶೆಗಳೂ ಇದರಲ್ಲಿವೆ. ವಾಸ್ತುಶಾಸ್ತ್ರದ ಗೊಂದಲಗಳಿಗೆ ಆಧಾರಸಹಿತವಾದ ಸ್ಪಷ್ಟ ವಿವರಣೆಯಿದೆ. ವಿದ್ಯುತ್, ಪ್ಲಂಬಿಂಗ್, ಒಳಾಂಗಣ ವಿನ್ಯಾಸ, ತಾಂತ್ರಿಕ ಸಲಹೆ ಹೀಗೆ ಅನೇಕ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟಿನಲ್ಲಿ ಮನೆಯನ್ನು ಕಟ್ಟುವವರಿಗೆ ಅಗತ್ಯವಾಗಬಹುದಾದ ಎಲ್ಲ ಮಾಹಿತಿಗಳು ಇಲ್ಲಿ ಸಮಗ್ರವಾಗಿ ಒಂದೇ ಪುಸ್ತಕದಲ್ಲಿ ಲಭ್ಯವಿದೆ. 'ಮನೆ ಕಟ್ಟಿನೋಡು, ಮದುವೆ ಮಾಡಿನೋಡು' ಎಂಬ ಕನ್ನಡದ ಗಾದೆ ಮಾತೊಂದಿದೆ. ಮದುವೆಯೇನೋ ಹಾಗೂ ಹೀಗೂ ಕೆಲವು ಚಿಕ್ಕಪುಟ್ಟ ಕೊರತೆಗಳ ನಡುವೆಯೂ ಮಾಡಿ ಮುಗಿಸಿಬಿಡಬಹುದು. ಆದರೆ ಮನೆಯನ್ನು ಕಟ್ಟುವುದು ಹಾಗಾಗುವುದಿಲ್ಲ. ಅದು ಕಷ್ಟದ ಕೆಲಸ. ಎಲ್ಲವನ್ನೂ ತರ್ಕಬದ್ಧವಾಗಿ ಹೊಂದಿಸಬೇಕಾದ ಅನಿವಾರ್ಯತೆಯಿರುತ್ತದೆ. ಈ ನಿಟ್ಟಿನಲ್ಲ. ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ವೃತ್ತಿಪರರಾದ ವಾಸ್ತುಶಿಲ್ಪಿಗಳು, ಇಂಜಿನಿಯರ್ಗಳು, ಗುತ್ತಿಗೆದಾರರು ಹಾಗೂ ಮನೆಯನ್ನು ಕಟ್ಟುವ ಮಾಲೀಕರು ಹೀಗೆ ಪ್ರತಿಯೊಬ್ಬರಿಗೂ ಈ ಪುಸ್ತಕವು ಅತ್ಯಂತ ಉಪಯುಕ್ತವಾಗಿದೆ. ಇವರಿಗೆ ಶುಭವಾಗಲಿ. -ಎಸ್. ಶ್ಯಾಮಸುಂದರ್ ಆರ್ಕಿಟೆಕ್ಟ್, ಶಿವಮೊಗ್ಗ
ಮನೆ ಇಂಜಿನಿಯರ್" ಶೀರ್ಷಿಕೆ ಹೊತ್ತ ಈ ಪುಸ್ತಕದಲ್ಲಿ ನಿವೇಶನದಿಂದ ಮೊದಲಾಗಿ ಮನೆಯನ್ನು ಕಟ್ಟಲು ಅಗತ್ಯವಿರುವ ಎಲ್ಲ ತರಹದ ಉಪಯುಕ್ತ ಮಾಹಿತಿಗಳನ್ನು ಅಚ್ಚುಕಟ್ಟಾಗಿ, ಸಾಮಾನ್ಯ ಜನರಿಗೂ ಅರ್ಥವಾಗುವಂತಹ ಸರಳವಾದ ಕನ್ನಡ ಭಾಷೆಯಲ್ಲಿ ರಾಮ್ಕದಮ್ರವರು ಬರೆದಿದ್ದಾರೆ. ನನ್ನ ಬಹುಕಾಲದ ಪರಿಚಿತರಾದ ಇವರು ಕನ್ನಡ ಸಾರಸ್ವತ ಲೋಕಕ್ಕೆ ಒಂದು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕೆಲವು ವಿಷಯಗಳು ಸಂಕ್ಷಿಪ್ತವಾಗಿವೆಯಾದರೂ ಅಗತ್ಯವಿರುವಷ್ಟು ವಿವರಣೆಯನ್ನು ಒಳಗೊಳ್ಳುವ ಮೂಲಕ 'ಮನೆ ಇಂಜಿನಿಯರ್' ಪರಿಪೂರ್ಣತೆಯನ್ನು ಪಡೆದು ಕೊಳ್ಳುವುದರಲ್ಲಿ ಸಫಲವಾಗಿದೆ. ವಿಶ್ವದ ಕೆಲವು ದೇಶಗಳಲ್ಲಿ ಬಳಕೆಯಲ್ಲಿರುವ ಆಯ್ದ ಮನೆಗಳ ಮಾದರಿ ನಕಾಶೆಗಳೂ ಇದರಲ್ಲಿವೆ. ವಾಸ್ತುಶಾಸ್ತ್ರದ ಗೊಂದಲಗಳಿಗೆ ಆಧಾರಸಹಿತವಾದ ಸ್ಪಷ್ಟ ವಿವರಣೆಯಿದೆ. ವಿದ್ಯುತ್, ಪ್ಲಂಬಿಂಗ್, ಒಳಾಂಗಣ ವಿನ್ಯಾಸ, ತಾಂತ್ರಿಕ ಸಲಹೆ ಹೀಗೆ ಅನೇಕ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟಿನಲ್ಲಿ ಮನೆಯನ್ನು ಕಟ್ಟುವವರಿಗೆ ಅಗತ್ಯವಾಗಬಹುದಾದ ಎಲ್ಲ ಮಾಹಿತಿಗಳು ಇಲ್ಲಿ ಸಮಗ್ರವಾಗಿ ಒಂದೇ ಪುಸ್ತಕದಲ್ಲಿ ಲಭ್ಯವಿದೆ. 'ಮನೆ ಕಟ್ಟಿನೋಡು, ಮದುವೆ ಮಾಡಿನೋಡು' ಎಂಬ ಕನ್ನಡದ ಗಾದೆ ಮಾತೊಂದಿದೆ. ಮದುವೆಯೇನೋ ಹಾಗೂ ಹೀಗೂ ಕೆಲವು ಚಿಕ್ಕಪುಟ್ಟ ಕೊರತೆಗಳ ನಡುವೆಯೂ ಮಾಡಿ ಮುಗಿಸಿಬಿಡಬಹುದು. ಆದರೆ ಮನೆಯನ್ನು ಕಟ್ಟುವುದು ಹಾಗಾಗುವುದಿಲ್ಲ. ಅದು ಕಷ್ಟದ ಕೆಲಸ. ಎಲ್ಲವನ್ನೂ ತರ್ಕಬದ್ಧವಾಗಿ ಹೊಂದಿಸಬೇಕಾದ ಅನಿವಾರ್ಯತೆಯಿರುತ್ತದೆ. ಈ ನಿಟ್ಟಿನಲ್ಲ. ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ವೃತ್ತಿಪರರಾದ ವಾಸ್ತುಶಿಲ್ಪಿಗಳು, ಇಂಜಿನಿಯರ್ಗಳು, ಗುತ್ತಿಗೆದಾರರು ಹಾಗೂ ಮನೆಯನ್ನು ಕಟ್ಟುವ ಮಾಲೀಕರು ಹೀಗೆ ಪ್ರತಿಯೊಬ್ಬರಿಗೂ ಈ ಪುಸ್ತಕವು ಅತ್ಯಂತ ಉಪಯುಕ್ತವಾಗಿದೆ. ಇವರಿಗೆ ಶುಭವಾಗಲಿ.
ಇದು ಜನಾರ್ದನ ಭಟ್ ಅವರ ವಿನೂತನ ಪ್ರತಿಮಾತ್ಮಕ ಕಾದಂಬರಿ, ಮೇಧಾವಿ ವಿದ್ವಾಂಸನೊಬ್ಬನ ವಿಶಿಷ್ಟ ಜೀವನ ದರ್ಶನ ಮತ್ತು ಸಾಧನೆಯ ಅನಾವರಣದ జతే ಜತೆಗೆ ಅಂದಿನ ಐತಿಹಾಸಿಕ ಸಾಂಸ್ಕೃತಿಕ ಪರಿಪ್ರೇಕ್ಷೆ ಈ ಕಾದಂಬರಿಯಲ್ಲಿ ರೋಚಕವಾಗಿ ಮೂಡಿಬಂದಿದೆ. ಪ್ರೊ. ಜಿ. ಎನ್. ಉಪಾಧ್ಯ ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ
ಡಾ. ಲೋಕೇಶ ಎಂ.ಯು. ಮತ್ತು ಪವಿತ್ರ ಎ.ವಿ.
ಏನನ್ನೂ ಅಪೇಕ್ಷಿಸಿದ, ಯಾರನ್ನೂ ಉಪೇಕ್ಷಿಸದ ಈಕೆ ಅಪ್ಸರೆ. ಅಮರರಿಗೆ ಕಾಲದ ಹಂಗಿಲ್ಲ. ಹಾಗಾಗಿ ಭೂತ ಭವಿಷ್ಯತ್ತಿನ ಎಲ್ಲೆಗಳಿಲ್ಲ, ನಿರಂತರ ವರ್ತಮಾನ. ಕಾದದ್ದು ಊರ ಚೌಡಿಯಂತೆ, ಮುಟ್ಟಿದ್ದೆಲ್ಲಾ ಅಮೃತ, ಬೇಯಿಸಿದ ಅನ್ನ, ಕಾಯಿಸಿದ ಹಾಲು ಎಲ್ಲಾ ಹದ. ಕುದಿಯುತ್ತೆ; ಉಕ್ಕಲ್ಲ, ಕತ್ತಲ ಅಟ್ಟದ ಜಾಡಿಯ ಮಿಡಿ ಉಪ್ಪಿನಕಾಯಿಯೂ ವರ್ಷಗಳಾದರೂ ಕೆಡೊಲ್ಲ. ಉರಿಗಾರದ ಬಾಣಂತಿ ಲೇಹ್ಯ ಕೇವಲ ಅವಶ್ಯಕ ಕಾವನ್ನಷ್ಟೇ ಕೊಡುತ್ತೆ. ಆಷ್ಟ್ಯಾಕೆ ಸುತ್ತಲಿನ ನಿರ್ಲಿಪ್ತ ಗಾಳಿ ಕೂಡಾ ಅ೦ಟಿಕೊ೦ಡವರಿಗೆ ಉಸಿರಾಗುತ್ತೆ. ಓದಿ ಮುಗಿಸಿದೆ, ಮೈ ಮನ ತು೦ಬಿದೆ. ಭಾವೋದ್ವೇಗದಲ್ಲಿ ಅಲ್ಲಲ್ಲಿ ಉಕ್ಕಿದರೂ ಎಲ್ಲೆ ಮೀರಿ ಎಲ್ಲೂ ಚೆಲ್ಲಿಲ್ಲ. ಹಾಲು ಕುದ್ದು ನೀರು ಆವಿಯಾಗಿ ಅನುಭವದ ಸಾರ ಹೆಪ್ಪುಗಟ್ಟಿದಾಗ ಖಾಲಿತನ ಕಾಡಿದ್ದುಂಟು ಹೌದು ಆದರೆ ಅದನ್ನು ಮೀರಿದ ಪರಿಮಳ ಆವರಿಸಿದ್ದು ಸುಳ್ಳಲ್ಲ. -ಸೇತುರಾಂ
Showing 2251 to 2280 of 3317 results