ಅಪರಂಜಿ ಶಿವು
nil
#
ನಾಡಿನ ಹೆಸರಾಂತ ಸಾಹಿತಿಗಳು, ತತ್ತ್ವ ದರ್ಶನಗಳ ರಸಮಯ ವ್ಯಾಖ್ಯಾನಕಾರರೂ ಆಗಿರುವ ಜಿ. ಬಿ. ಹರೀಶರು ಬರೆದಿರುವ ಸಾ.ಕೃ. ರಾಮಚಂದ್ರ ರಾಯರ ಜೀವನ ಚರಿತ್ರೆಯನ್ನು ಓದುವಾಗ ರೋಮಾಂಚನವಾಗುವ ಜೊತೆ ಜೊತೆಗೇ ದುಃಖವೂ ಆಗುತ್ತದೆ. ಬಹುಶ: ಅವರು ಅಮೆರಿಕದಲ್ಲೋ, ಜರ್ಮನಿಯಲ್ಲೋ ಹುಟ್ಟಿ ಆ ದೇಶಗಳ ಇತಿಹಾಸ ಇಂಡಿಕ್, ಅಧ್ಯಯನ ವಿಭಾಗಗಳಲ್ಲಿ ದುಡಿದಿದ್ದರೆ ಈಗಿಗಿಂತ ಹೆಚ್ಚಿನ ಜಗದ್ವಿಖ್ಯಾತಿ, ಧನ ಸಂಪಾದನೆ ಮಾಡಿ ಮೇಲೇರಬಹುದಿತ್ತು. ಆಸ್ತಿಕ ಸಮಾಜವೇನೋ ಅವರನ್ನು ಗೌರವಿಸಿತ್ತು. ಆದರೆ ಇದ್ದಷ್ಟು ದಿನ ಅವರಿಗೆ ಒಂದು ಪದ್ಮಪ್ರಶಸ್ತಿಯೂ ಬರಲಿಲ್ಲ ಎಂಬುದೇ ನಮ್ಮ ಕಾಲದ ಮಹಿಮೆಯನ್ನು ಹೇಳುತ್ತದೆ. ರಾಯರು ತುಂಬು ಜೀವನ ನಡೆಸಿ ಕನ್ನಡ, ಇಂಗ್ಲಿಷ್, ಸಂಸ್ಕೃತ, ಪ್ರಾಕೃತ ಪಾಳಿ ಭಾಷೆಗಳ ಕಣಜವನ್ನು ತಿಳಿವಿನಿಂದ ತುಂಬಿದರು. ಸಾವಿರದ ಹೊಳೆಯುವ ಈ ಸಾಲಿಗ್ರಾಮಕ್ಕೆ ಇದು ನಮಸ್ಕಾರ ಪೂರ್ವಕ ನುಡಿ ನಮನ.
Nil
ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು. ಆದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪುರುಷರಿಗೆ ಹೋಲಿಸದರೆ, ಮಹಿಳೆಯರು ವಹಿಸಿದ ಪಾತ್ರವು ಇತಿಹಾಸದ ಪುಟಗಳಲ್ಲಿ ಮಬ್ಬು ಮಬ್ಬಾಗಿ ದಾಖಲಾಗಿದೆ. ಆ ಹಿನ್ನಲೆಯಲ್ಲಿ ನೋಡಿದಾಗ ಬೆಳವಡಿ ಮಲ್ಲಮ್ಮ ಕೃತಿಯ ಮಹತ್ವ ನಮಗೆ ಅರಿವಾಗುತ್ತದೆ. ಬೆಳವಡಿ ಮಲ್ಲಮ್ಮ ಯುದ್ಧವ್ಯೂಹಗಳಿಗೆ, ಗಾಳಿವೇಗದ ಪ್ರಹಾರಗಳಿಗೆ, ಸ್ವಾಭಿಮಾನ, ಧೈರ್ಯ ಸಾಹಸಗಳಿಗೆ ಹೆಸರಾದವರು.
ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು
"ಬದುಕು ಗಣಿತದ ಸೂತ್ರಗಳ ಲೆಕ್ಕಾಚಾರದಂತೆ ಒಂದು ಅಂಕೆ ತಪ್ಪಿದರೆ ಇಡೀ ಸೂತ್ರವೇ ತಪ್ಪಿಹೋಗುತ್ತದೆ" ಎಂಬ ಕಾದಂಬರಿಯ ಕೇಂದ್ರ ಪಾತ್ರ ವಸಂತಿ ಹೇಳುವ ಮಾತು ಕಾದಂಬರಿಯ ಆಶಯವನ್ನು ಹೇಳುವಂತದ್ದು. ಬದುಕಿನ ಬವಣೆಗಳನ್ನು, ಕ್ಲಿಷ್ಟ ಸಮಸ್ಯೆಗಳನ್ನು ತಾಳ್ಮೆಯಿಂದ ಧೈರ್ಯದಿಂದ ಅಂತಃಕರಣದಿಂದ ಬಿಡಿಸುತ್ತಾ ಸಾಗಬೇಕೇ ಹೊರತು ಕೋಪತಾಪ ಆತುರದ ನಿರ್ಧಾರಗಳು ಬದುಕನ್ನು ಹಾಳುಗೆಡವುತ್ತವೆಂಬುದನ್ನು ಲೇಖಕಿ ಮಾಲತಿಯವರು ಈ ಕಾದಂಬರಿಯ ಮೂಲಕ ಚಂದದಲ್ಲಿ ಕಟ್ಟಿಕೊಡುತ್ತಾರೆ. ಯುವ ಮನಸ್ಸುಗಳು ಎದುರಿಸುವ ಅನೇಕ ಸಂಘರ್ಷಗಳಿಗೆ ಪ್ರೀತಿ ಬೆಂಬಲ ಪ್ರೋತ್ಸಾಹದ ಕೊರತೆ ಕಾರಣವಾಗಿರುವುದನ್ನು ಕುರಿತು ಹೇಳುವ ಲೇಖಕಿ, ಹಾಗೆಯೇ ಅತೀ ಕೊಂಡಾಟ ಕೂಡಾ ಅವರನ್ನು ದಿಕ್ಕುಗೆಡಿಸುತ್ತದೆ ಎಂಬ ಪ್ರಸ್ತುತ ಸಮಾಜದ ಜ್ವಲಂತ ಸಮಸ್ಯೆಯನ್ನು ಇಲ್ಲಿ ಕುತೂಹಲಕಾರಿಯಾಗಿ, ಆಪ್ತವಾಗಿ ಚಿತ್ರಿಸಿದ್ದಾರೆ. ತಲ್ಲಣಗಳನ್ನು ಎದುರಿಸುವ, ಅದರಿಂದ ಹೊರಬರುವ ಮಾರ್ಗಗಳನ್ನು ಕಥಾನಕ ಸರಳ, ಸುಂದರವಾಗಿ ಚಿತ್ರಿಸಿದರೂ, ಬದುಕೆಂಬುದು ಅಷ್ಟು ಸಲೀಸಲ್ಲ, ಅನೂಹ್ಯವಾದದ್ದು ಎಂಬ ಧ್ವನಿಯೂ ಅಂತರ್ಗತವಾಗಿದೆ. ಆಶಾದಾಯಕ, ಭರವಸೆಯ ದಿಕ್ಕಿನೆಡೆ ಕಥೆ ಮುಖಮಾಡಿರುವುದು ವಿಶೇಷವಾಗಿದೆ.
ಕನ್ನಡದ ಪ್ರಸಿದ್ಧ ಲೇಖಕರು, ಪತ್ರಕರ್ತರು ಆದ ಗಣೇಶ್ ಕಾಸರಗೋಡು ಅವರು ‘ವಿಜಯವಾಣಿ’ ಪತ್ರಿಕೆಯಲ್ಲಿ ಪ್ರತಿವಾರ ಕಲಾವಿದರ ಕುರಿತು ಬರೆದ ‘ಬೆಳ್ಳಿತೆರೆಯ ಬಂಗಾರದ ಗೆರೆ’ ಅಂಕಣ ಬರಹ ಈಗ ಪುಸ್ತಕವಾಗಿದೆ.
ರಘುನಾಥ ಚ ಹ
Showing 3241 to 3270 of 5270 results