• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಲೈಫ್ 360 | Life 360

ಸೋತವರಿಗೆ, ಗೆಲುವನ್ನು ಎದುರು ನೋಡುವವರಿಗೆ, ಸಮಾನ ಮನಸ್ಕರಿಗೆ ಉಡುಗೊರೆಯಾಗಿ ನೀಡಲು ಈ ಕೃತಿ ಬೆಸ್ಟ್‌ ಆಯ್ಕೆ. ನಮ್ಮ ಬದುಕು ಹುಟ್ಟಿನಿಂದಲೇ ಶುರುವಾಗಬಹುದು. ಆದರೆ ಸೋಲು-ಗೆಲುವುಗಳು ನಿರ್ಧಾರವಾಗುವುದು ನಮ್ಮ ಆಲೋಚನೆಗಳ ಮೇಲೆಯೇ.. ಆಲೋಚನೆಗಳು ಇಲ್ಲದೆ ಬದುಕಿಲ್ಲ! ಬದುಕಿನ 360 ಕೋನದಲ್ಲೂ ಯೋಚಿಸುವಂತಹ ಶಕ್ತಿಯನ್ನು ನಾವು ಗಳಿಸದಿದ್ದರೆ ಖಂಡಿತ ಸ್ಪರ್ಧೆಯ ಸಾಲಿನಿಂದ ತುಂಬಾ ಹಿಂದೆ ಉಳಿದುಬಿಡುತ್ತೇವೆ. ಇವತ್ತು ಯಾರಿಗೂ ಹಿಂದೆ ಉಳಿಯಲು ಇಷ್ಟವಿಲ್ಲವಾದ್ದರಿಂದ ಆಲೋಚನಾಕ್ರಮದ ಬಗ್ಗೆ ಈ ಕೃತಿ ನಿಮಗೆ, ನಿಮ್ಮ ಗೊಂದಲಗಳಿಗೆ ಉತ್ತರಿಸುತ್ತಲೇ ನಿಮ್ಮ ಯಶಸ್ಸಿನ ದಾರಿಗೆ ನೆರವಾಗಬಲ್ಲದು..

₹250   ₹212

Buy Now
ಲೈಫ್ ಸಖತಾಗಿತ್ತು ಕಣ್ರೀ ಇಬುಕ್ | LIFE SAKATTAGITTU KANREE Ebook

ರವೀಂದ್ರ ವೆಂಶಿಯವರ ಲೈಫ್ ಸಖತಾಗಿತ್ತು ಕಣ್ರೀ ಪುಸ್ತಕದಲ್ಲಿನ ಬರಹಗಳನ್ನು ಓದಿದ ಮೇಲೆ ನನ್ನ ಬಾಲ್ಯದ ಹಲವಾರು ಘಟನೆಗಳು ನೆನಪಾದದ್ದು ಸತ್ಯ. ಓದುವಾಗ ನನಗೆ ಇದು ಕಥೆಯಾ..? ಆತ್ಮಚರಿತ್ರೆಯಾ..? ಸುಲಲಿತ ಪ್ರಬಂಧವಾ..? ಎನ್ನುವ ಪ್ರಶ್ನೆ ಕಾಡುತ್ತಲೇ ಓದಿಸಿಕೊಂಡಿತು. ಓದಿಯಾದ ಮೇಲೆ ನನಗನ್ನಿಸಿದ್ದು ಇದು ಎಲ್ಲವೂ ಹೌದು ಎಂದು. ಭಾಗ-1ರಲ್ಲಿನ ಬರಹಗಳಲ್ಲಿ ತಿಳಿ ಹಾಸ್ಯದ ಮೂಲಕ ಘಟನೆಗಳನ್ನು ಕಟ್ಟಿಕೊಡುತ್ತಾ ನಿಧಾನಕ್ಕೆ ನಮ್ಮನ್ನು ಬರಹದೊಳಕ್ಕೆ ಸೆಳೆದುಕೊಂಡು ಬಿಡುತ್ತಾರೆ ಲೇಖಕರು. ಇಸ್ತ್ರೀಪೆಟ್ಟಿಗೆಯ ಪ್ರಸಂಗ, ಹೇರ್ ಕಟ್ ಸುತ್ತಲಿನ ವೃತ್ತಾಂತಗಳು, ಸಿನಿಮಾಗಳನ್ನು ಟೆಂಟ್ ನಲ್ಲಿ ನೋಡುವ ಸೊಬಗು - ಇವುಗಳನ್ನು ಲಘುಹಾಸ್ಯಮಯವಾಗಿ ಬರೆಯುತ್ತಾ, ಕಲಿಸಿದ್ದು ಕಲಿತದ್ದು ಲೇಖನದ ಮೂಲಕ ಚಿಂತನೆಗೆ ದೂಡುತ್ತಾರೆ. ಭಾಗ-2 ರಲ್ಲಿ ಕತೆಗಳ ಸ್ವರೂಪದಲ್ಲಿ ಬದುಕನ್ನು ತೆರೆದಿಡುತ್ತಾರೆ. ಒಂದೊಂದು ಕತೆಯೂ ಬೇರೆ ಬೇರೆಯದೇ ಆದ ದ್ರವ್ಯ, ನಿರೂಪಣೆ ಮತ್ತು ಭಾಷೆಯನ್ನು ಹೊಂದಿರುವುದು ರವೀಂದ್ರ ವೆಂಶಿಯವರ ವಿಶೇಷವೆನಿಸುವ ವಸ್ತುಗ್ರಹಿಕೆ ಮತ್ತು ಕತೆಯ ಕಟ್ಟುವಿಕೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ಸರಳವಾದ, ಅರ್ಥಪೂರ್ಣವಾದ, ನಮ್ಮದೇ ಬದುಕಿನ ಸನ್ನಿವೇಶಗಳು ಎನ್ನುವ ಆತ್ಮೀಯತೆ ಬೆಳೆಸುವ ಬರವಣಿಗೆಯ ಈ ಹೊತ್ತಗೆ ಪ್ರತಿಯೊಬ್ಬರೂ ಓದಲೇಬೇಕಾದದ್ದಾಗಿದೆ.

₹150   ₹75

Buy Now
ಲೋಕ ರಾವಣ | Loka raavana

'ಲೋಕ ರಾವಣ' ಲಂಕಾಧಿಪತಿಯಾದ ದಶಕಂಠ ರಾವಣನನ್ನು ಕುರಿತ ಕಾದಂಬರಿ. ಲೋಕ ಲೋಕಗಳನ್ನು ನಡುಗಿಸಿದ. ಪರಸ್ತ್ರೀ ಅಪಹಾರಕನಾದ ದುಷ್ಟನೆಂದು ರಾಮಾಯಣದಲ್ಲಿ ಚಿತ್ರಣಗೊಂಡಿರುವ ಪಾತ್ರ ಅದು. ಹುಟ್ಟಿನಿಂದ ಮಹಾ ತಪಸ್ವಿಯಾದ ವಿಶ್ರವಸ್ಸಿನ ಮಗ, ವೇದಾದಿಗಳನ್ನು ಓದಿದವನು. ಬ್ರಹ್ಮ, ಪರಮೇಶ್ವರರ ಅನುಗ್ರಹಕ್ಕೆ ಪಾತ್ರನಾದವನು. ಶಿವಭಕ್ತ. ಇಷ್ಟಿದ್ದೂ ರಾವಣನಂತಹ ಮೇಧಾವಿ ಯಾಕೆ ದುಷ್ಟನಾದ? ಲೋಕಪೀಡಕನಾದ ಅದಕ್ಕೆ ಕಾರಣವಾದುದು ಅವನ ಹುಟ್ಟಿ? ಸಂಸ್ಕಾರವೆ? ಅವನಿಗಾದ ಕಹಿ ಅನುಭವಗಳೆ? ಅಥವಾ ಅವನ ವ್ಯಕ್ತಿತ್ವವೇ ಆ ರೀತಿಯೆ? ಅವನ ಅಂತರಂಗವನ್ನು ಪ್ರವೇಶಿಸದೆ ಉತ್ತರ ದೊರೆಯಲಾರದು. ರಾವಣನ ಅಂತರಂಗವನ್ನು ಬಗೆಯುವ ಅಂತಹ ಒಂದು ಪ್ರಯತ್ನವೇ ಈ ಕಾದಂಬರಿ.. 'ಲೋಕ ರಾವಣ'

₹250   ₹213

Buy Now
ಲೋಕಶಿಕ್ಷಕ ಜೆ ಕೃಷ್ಣಮೂರ್ತಿ | Lokasiksaka je krrsnamurti

ಡಾ. ಮಹಾಬಲೇಶ್ವರ ರಾವ್

₹250   ₹223

Buy Now
ಲೋಕಾಂತ

nil

₹150   ₹134

Buy Now
ಲೋರ್ಕಾ ನಾಲ್ಕು ನಾಟಕಗಳು | Lorca Nalku Natakagalu

ಸ್ಪೇನಿನ ಮಣ್ಣಿಗೆ ಮಲ್ಲಿಗೆಯ ಕಂಪುಣಿಸಿ ಸ್ಪೇನನ್ನು ಬೆಳಗಿಸಿದ ಲೋರ್ಕಾ ಜಗತ್ತಿನ ವಿಸ್ಮಯ ಪ್ರತಿಭೆ. ರೂಪ, ಜಾಣೆ, ಎದೆಗೆ ರೆಕ್ಕೆ, ಜಲಪಾತದ ಮಿಂಚು- ಈ ಎಲ್ಲವೂ ಲೋರ್ಕಾನಲ್ಲಿ ಮೇಚ್ಚಿಸಿದಂತೆ ಬೇರೆ ಯಾರಲ್ಲೂ ನಾನು ಕಂಡಿಲ್ಲ. -ಪ್ಯಾಬ್ಲೊ ನೆರೂಡ ಪಿಕಾಸೋ ಮತ್ತು ಡಾಲಿಯ ಸರ್ರಿಯಲಿಸ್ಟಿಕ್ ಗ್ರಹಿಕೆಗಳು ಮತ್ತು ಅಬ್ಸರ್ಡ್ ನಾಟಕಗಳ ಅಸಂಗತ ರೂಪಕಗಳು, ನವ್ಯ ಕವಿಗಳ ಸಂಕೀರ್ಣ ಸೃಷ್ಟಿಗಳು ಎಲ್ಲವನ್ನೂ ಒಳಗೊಂಡ ಲೋರ್ಕಾನ ಕಾವ್ಯ ಮತ್ತು ನಾಟಕ ಇಪ್ಪತ್ತನೆಯ ಶತಮಾನದ ಅಚ್ಚರಿಗಳು. - ಪಿ. ಲಂಕೇಶ್ ಗೆಳೆಯರಾದ ಗಂಗಾಧರಯ್ಯ ಲೋರ್ಕಾನ ನಾಲ್ಕು ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿ ಕನ್ನಡ ರಂಗಭೂಮಿಯ ಸಾಧ್ಯತೆಯನ್ನು ಜೊತೆಗೆ ಅನುವಾದ ಸಾಧ್ಯತೆಯನ್ನು ಹಿಗ್ಗಿಸಿ, ಕನ್ನಡಕ್ಕೆ ಧೈರ್ಯ ತಂದಿದ್ದಾರೆ. - ನಟರಾಜ್ ಹೊನ್ನವಳ್ಳಿ

₹495   ₹441

Buy Now
ಲ್ಯಾಟರೀನಾ

ಪ್ರತಿಷ್ಠಿತ ಸಮಾಜದ ಹುಸಿ ಮೌಲ್ಯವನ್ನು, ಗಾಂಭೀರ್ಯವನ್ನು ಚುಚ್ಚಿ ವಿಡಂಬಿಸಿ ಘಾಸಿಗೊಳಿಸುವುದರಲ್ಲಿ ನಿಷ್ಣಾತರಾಗಿರುವ ಕುಂವೀಯವರು ಕನ್ನಡ ಕಾದಂಬರಿ ಲೋಕಕ್ಕೆ ವಿನೂತನ ತಿರುವು ನೀಡಿದ ಅಪೂರ್ವ ಕತೆಗಾರ. ಪ್ರತಿ ವರ್ಷ ಒಂದು ಕಾದಂಬರಿಯನ್ನು ಕನ್ನಡ ಓದುಗರಿಗೆ ನೀಡುತ್ತಿರುವ ಅವರು ನಿರ್ಲಕ್ಷಿತ ಸಮುದಾಯಗಳ ಮಾನಾವಮಾನಗಳಿಗೆ ದನಿ ಕೊಟ್ಟು ಮಡಿವಂತರನ್ನು ಗೇಲಿ ಮಾಡಿ ವಿಡಂಬನೆಗೆ ಗುರಿ ಮಾಡುವ ಮೂಲಕ ಸಾಮಾಜಿಕವಾಗಿ ಪ್ರಸ್ತುತವೆನ್ನಿಸಿದ್ದಾರೆ. ಅತಿ ರಂಜಿತ ವರ್ಣನಾ ಶೈಲಿ ಮತ್ತು ಪಾತ್ರವನ್ನು ಭೂತಗನ್ನಡಿಯಲ್ಲಿಟ್ಟು ಹಿಗ್ಗಿಸಿ ನೋಡುವ ಅವರ ನಿರೂಪಣೆ ಉದ್ದೇಶಪೂರ್ವಕವಾಗಿದ್ದು ವಿಡಂಬನಾತ್ಮಕ ಗುರಿ ಹೊಂದಿದೆ. ಪ್ರಸ್ತುತ ‘ಲ್ಯಾಟರೀನಾ’ ವಸ್ತುವೆ ವಿಶಿಷ್ಟವಾಗಿದ್ದು ಬಹಿಷ್ಕೃತವೆನ್ನಿಸಿದ್ದನ್ನು ಎಗ್ಗಿಲ್ಲದೆ ಚರ್ಚಿಸಿ ಎಲ್ಲರನ್ನು ಗಾಬರಿಗೊಳಿಸುವಂತಿದೆ. ಮಲವಿಸರ್ಜನೆಯಂತಹ ಸಹಜ ದೈಹಿಕ ಕ್ರಿಯೆಯನ್ನು ಮುಚ್ಚುಮರೆಯ ಅಸಹ್ಯದ ಸಂಗಾತಿಯನ್ನಾಗಿಸಿರುವ ಸಾಮಾಜಿಕ ವಾಸ್ತವವನ್ನು ವಿಡಂಬಿಸಿ ಬೃಹತ್ ಕಾದಂಬರಿಯ ವಸ್ತುವಾಗಿಸಿಕೊಂಡು ತನ್ಮೂಲಕ ಸಮಾಜದ ಪ್ರತಿಷ್ಠಿತ ವ್ಯಕ್ತಿಗಳಾದ ರಾಜಕಾರಣಿಗಳು, ಮಠಾಧಿಪತಿಗಳು, ಪತ್ರಕರ್ತರು, ಲೇಖಕರು ಮತ್ತು ಗಾಂಧಿವಾದಿಗಳೆಲ್ಲರನ್ನೂ ಗೇಲಿ ಮಾಡಲಾಗಿದೆ. ಹೆಗಲ ಮೇಲೆ ಮಲ ಹೊತ್ತು ಸಾಗಿಸುವ ಹೆಣ್ಣು ಮಕ್ಕಳ ಪಡಿಪಾಟಲಿಗೆ ಕನಿಕರಿಸುತ್ತಲೇ ಅವರ ಹೊಟ್ಟೆಪಾಡಿನ ಕ್ರೂರ ವಾಸ್ತವವನ್ನೂ ಮನವರಿಕೆ ಮಾಡಿಕೊಡಲಾಗಿದೆ. ಹಂದಿಗಳು, ಎಮ್ಮೆ, ಹಸು, ನಾಯಿಗಳೂ ಶುದ್ದೀಕರಣದಲ್ಲಿ ಪಾಲ್ಗೊಳ್ಳುವ ಚಿತ್ರ ನಮ್ಮ ದೇಶದ ಹುಸಿ ಪ್ರತಿಷ್ಠೆಯನ್ನು ಬಯಲು ಮಾಡುತ್ತದೆ. ಹಾಸ್ಯ ಮತ್ತು ವಿಡಂಬನೆಯೇ ಕಾದಂಬರಿಯ ಸ್ಥಾಯಿಭಾವವೆಂಬಂತಿದ್ದರೂ, ಆಳದಲ್ಲಿ ವ್ಯವಸ್ಥೆಯ ಬಗೆಗೆ ಆಕ್ರೋಶವಿದೆ. ಹುಸಿ ಸಾಮಾಜಿಕ ಪ್ರತಿಷ್ಠೆ ಬಗೆಗೆ ತಿರಸ್ಕಾರವಿದೆ. ಮನಸ್ಸಿನಲ್ಲಿ ತುಂಬಿಕೊಂಡಿರುವ ಗಲೀಜು ಬಾಹ್ಯ ಕೊಳಕಿಗಿಂತ ಅಸಹ್ಯಕಾರಿ ಎಂಬ ಸಂದೇಶದೊಂದಿಗೆ ಕಾದಂಬರಿಗೆ ಅರ್ಥಪೂರ್ಣ ಮುಕ್ತಾಯ ದೊರಕಿಸಿಕೊಡಲಾಗಿದೆ. – ಡಾ. ಕೆ. ಮರುಳಸಿದ್ದಪ್ಪ

₹350   ₹312

Buy Now
ವಕ್ಷ ಸ್ಥಳ | Vaksha Sthala

ವಾಸ್ತವ-ಕಲ್ಪನೆ-ಅತೀಂದ್ರಿಯ-ದೈವೀಕ ಈ ಎಲ್ಲ ನೆಲೆಗಳ ಚಿತ್ರಣವನ್ನೂ ಏಕತ್ರಗೊಳಿಸಿ ಪ್ರತಿಮಾತ್ಮಕವಾಗಿ ಕಟ್ಟಿಕೊಡುವಲ್ಲಿ ಆಶಾ ರಘು ಅವರು ಯಶಸ್ವಿಯಾಗಿದ್ದಾರೆ. ಸ್ವಾರಸ್ಯಕರವಾಗಿ ಕಥಾನಕವನ್ನು ಕಟ್ಟಿಕೊಡುವುದರಲ್ಲ. ಭಾಷೆಯನ್ನು ಸಮರ್ಥವಾದ ವಾಹಕವಾಗಿಸುವಲ್ಲ ಆಶಾ ಅವರು ಸಿದ್ಧಹಸ್ತರು. ಜೀವನ, ಅದರ ಅರ್ಥ, ಪ್ರೇಮ-ವಿಯೋಗ-ಮಿಲನ-ಆತ್ಮ-ಪರಮಾತ್ಮ ಹೀಗೊಂದು ಮಾಯಾಜಗತ್ತನ್ನು ಅನನ್ಯವಾಗಿ ಸೃಷ್ಟಿಸುವ 'ವಕ್ಷಸ್ಥಲ' ಕಾದಂಬರಿ ಓದುಗರ ಹೃದಯಕ್ಕೆ ಹತ್ತಿರವಾಗಲಿ ಎಂದು ಆಶಿಸುತ್ತೇನೆ. ರಂಜನಿ ಪ್ರಭು

₹270   ₹240

Buy Now