#
ಈ ಭೂಮಿಯ ಮೇಲೆ ‘ಕಾಮ’ ಯಾರನ್ನೂ ಬಿಟ್ಟಿಲ್ಲ. ಆದರೆ ಎಲ್ಲರೂ ಕಾಮಕ್ಕಾಗಿಯೇ ಬದುಕುವವರಲ್ಲ. ಪ್ರತಿಯೊಬ್ಬರ ಬದುಕಿನಲ್ಲೂ ಕವಲು ದಾರಿಗಳು ಇದ್ದೇ ಇರುತ್ತವೆ.
nil
ಕನ್ನಡದಲ್ಲಿ ಹಲವು ಮಹನೀಯರು ವೃತ್ತಿ ಜೀವನದ ನೆನಪುಗಳನ್ನು ಬರೆದಿದ್ದಾರೆ. ಅವುಗಳ ಪೈಕಿ ನನಗೆ ಥಟ್ಟನೆ ನೆನಪಾಗುವುದು ಎಂ.ಆರ್. ಶ್ರೀನಿವಾಸಮೂರ್ತಿಯವರ `ರಂಗಣ್ಣನ ಕನಸಿನ ದಿನಗಳು', ನವರತ್ನರಾಮ್ ಬರೆದ `ಕೆಲವು ನೆನಪುಗಳು' ಮತ್ತು ಆಕಾಶವಾಣಿಯಲ್ಲಿ ಕಳೆದ `ಕಲಕತ್ತಾ ದಿನಗಳ' ಕುರಿತು ಜ್ಯೋತ್ಸ್ನಾ ಕಾಮತ್ ಕೃತಿ. ಇವೆಲ್ಲ ಸಾಹಿತ್ಯದ ವಿಶಿಷ್ಟ ಪ್ರಕಾರಗಳು. ದಿನದ ಹತ್ತು ಹನ್ನೆರಡು ಗಂಟೆಗಳನ್ನು ಮನೆಯಿಂದ ಹೊರಗೆ ಕಳೆಯುವಂತೆ ಮಾಡುವ ವೃತ್ತಿ ನಮಗೆ ಹೊಸ ಸವಾಲುಗಳನ್ನು ಒಡ್ಡುತ್ತದೆ, ಹೊಸ ಹೊಸ ಅನುಭವ ಮತ್ತು ಒಡನಾಟಗಳನ್ನು ಒದಗುವಂತೆ ಮಾಡುತ್ತದೆ. ಸಾಹಿತ್ಯದ ಮೂಲದ್ರವ್ಯ ಇದೇ ಆಗಿರುವುದರಿಂದ, ಈ ನೆನಪುಗಳಲ್ಲಿ ಕಥನದ ಕುತೂಹಲ ಮತ್ತು ಬದುಕಿನ ಆರ್ದ್ರತೆ ಎರಡೂ ಬೆರೆತಿರುತ್ತದೆ.ಪೂರ್ಣಿಮಾ ಮಾಳಗಿಮನಿ ಅವರ ವೃತ್ತಿ ಜೀವನ ಅವರನ್ನು ವಿಶಿಷ್ಟವಾಗಿ ರೂಪಿಸಿರುವ ಚಿತ್ರಣ ಈ ಕೃತಿಯಲ್ಲಿದೆ. ಪುಟ್ಟ ಹಳ್ಳಿಯಿಂದ ಬಂದ ಪೂರ್ಣಿಮಾ ನವೋದಯ ಶಾಲೆಯಲ್ಲಿ ಓದಿ, ಆಕಸ್ಮಿಕವಾಗಿ ವಾಯುಸೇನೆ ಸೇರಿಕೊಂಡು, ತನಗೆ ಅಪರಿಚಿತವಾದ ಜಗತ್ತಿನಲ್ಲಿ ಅಡ್ಡಾಡಿದ ಪ್ರಸಂಗಗಳು ಈ ನೆನಪುಗಳ ಬುತ್ತಿಯಲ್ಲಿವೆ. ತಮಾಷೆ, ಭಾವುಕತೆ, ದಿಟ್ಟತನ ಮತ್ತು ಬೆರಗು ಹಾಸುಹೊಕ್ಕಾಗಿರುವ ಈ ಕಥನದಲ್ಲಿ ನಡೆದುಬಂದ ದಾರಿಯ ಹೆಜ್ಜೆಗುರುತುಗಳಿವೆ. ಸಹಜ ಕುತೂಹಲದಿಂದ ಓದಿಸಿಕೊಳ್ಳುವ ಕೃತಿ ಇದು. – ಜೋಗಿ
ಆಕಾಶಬುಟ್ಟಿಯ ಲೇಖಕರಾದ ಪ್ರೊ. ನಟರಾಜ್ ಅರಳಸುರಳಿ, ತೀರ್ಥಹಳ್ಳಿ ತಾಲ್ಲೂಕಿನ ಪುಟ್ಟ ಗ್ರಾಮ ಅರಳಸುರಳಿಯ ನಿವಾಸಿ. ಮೂಲತಃ ವ್ಯಂಗ್ಯಚಿತ್ರಗಾರರಾಗಿರುವ ನಟರಾಜ್ ನಾಡಿನಾದ್ಯಂತ ವ್ಯಂಗ್ಯಚಿತ್ರಕಾರರಾಗಿ ಹೆಚ್ಚು ಜನ ಓದುಗರಿಗೆ ಪರಿಚಿತರಾದವರು. ಈವರೆಗೂ ಐದು ಸಾವಿರಕ್ಕೂ ಹೆಚ್ಚು ವ್ಯಂಗ್ಯಚಿತ್ರಗಳನ್ನು ರಚಿಸಿದ್ದಾರೆ. ಕನ್ನಡದ ಪ್ರಸಿದ್ದ ವಾರ, ಮಾಸ ಪತ್ರಿಕೆಗಳೆಲ್ಲೆಲ್ಲಾ ಇವರ ವ್ಯಂಗ್ಯಚಿತ್ರಗಳು ಪ್ರಕಟವಾಗಿವೆ. ತೀರ್ಥಹಳ್ಳಿಯ ಪ್ರಸಿದ್ದ ಶಿಕ್ಷಣ ಸಂಸ್ಥೆಯಾದ ತುಂಗಾ ಮಹಾವಿದ್ಯಾಲಯದಲ್ಲಿ ಸರಿ ಸುಮಾರು ಮುವತ್ತೈದು ವರ್ಷಗಳ ಕಾಲ ಇಂಗ್ಲಿಷ್ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಆಕಾಶಬುಟ್ಟಿ ನಟರಾಜ್ ಅರಳಸುರಳಿಯವರ ಚೊಚ್ಚಲ ಕೃತಿ.
ಕಥೆಗಳು ನಮ್ಮ ಅಂಗಳದಲ್ಲಿಯೇ ಇರುತ್ತದೆ. ಅದನ್ನು ಕೇಳುವ ಕಿವಿಗಳು, ನೋಡುವ ಕಣ್ಣುಗಳು ಕಥೆಗಾರನದಾಗಿರಬೇಕು. ಅಂದರೆ ಕಥೆಗಳು ಜನರ ನಡುವೆಯೇ ಹುಟ್ಟಬೇಕು. ಆಗಲೇ ಅದು ಓದುಗರ ಮನಸ್ಸು ತಟ್ಟಲು ಸಾಧ್ಯ. ಕಲ್ಪನೆಯ, ಪೆಂಟಾಸಿಯ ಕಥೆಗಳು ರಂಜಿಸುತ್ತವೆ. ಆದರೆ ಮನಸ್ಸಿನ ಆಳಕ್ಕೆ ತಿಳಿಯುವುದು ಕಷ್ಟ. ರಂಜನೆ ಒಂದು ಕಥಾಂಶವಾದರೆ ಹೆಚ್ಚಿನದು ಬದುಕಿನ ವಿಸ್ತಾರವನ್ನು ಹೆಚ್ಚಿಸುವ ಕಲೆಗಾರಿಕೆ ಆಗಿರಬೇಕು. ಸರಳವಾಗಿ, ಸಂದೇಶವನ್ನ ಅದು ಹೊತ್ತಿರಬೇಕು. ಹಾಗೆಯೇ ಹಲವು ಅರ್ಥಗಳನ್ನು ಹೊಮ್ಮಿಸುವಂತಾಗಬೇಕು. ಒಟ್ಟಿನಲ್ಲಿ ರಂಜನೆಯ ಜೊತೆಗೆ ಓದುಗನ ಬೆಳವಣಿಗೆಗೆ ಕಥೆಗಳು ಸಹಕಾರಿಯಾಗಿರಬೇಕು. ಶ್ರೀಮತಿ ಸತ್ಯವತಿ ಮೂರ್ತಿಯವರ ಕಥೆಗಳು ಈ ಅಂಶಗಳನ್ನು ಸಮೃದ್ಧವಾಗಿ ಒಳಗೊಂಡಿದೆ. ಓದಿಸಿಕೊಂಡು ಹೋಗುವ ಬರಹ, ಕಲಾತ್ಮಕವಾಗಿ ಕೂಡಿಕೊಂಡ ಪದ, ವಾಕ್ಯ ಪುಂಜಗಳು. ಆಸಕ್ತಿ ಹುಚ್ಛಿಸುವ ಘಟನಾವಳಿಗಳು, ಚಿಂತಿಸುವ ಅಂಶಗಳು... ಹೀಗೆ ಸುಪುಷ್ಟವಾದ ಕಥೆಗಳು ಅವರದು. ಡಾ.ಸತ್ಯವತಿ ಮೂರ್ತಿ
Nil
Showing 4681 to 4710 of 9456 results