#
ತುಮಕೂರು ಜಿಲ್ಲೆಯ ಸಿರಾದಲ್ಲಿ ೧೮.೦೫.೧೯೭೫ ರಂದು ಜನನ. ಪ್ರಾಥಮಿಕ ಶಿಕ್ಷಣ ಸಿರಾ ತಾಲೂಕಿನ ಹೊಸೂರು ಎನ್ನುವ ಗ್ರಾಮದಲ್ಲಿ ಆಗುತ್ತದೆ. ಮಾಧ್ಯಮಿಕ ಶಿಕ್ಷಣ ಬೆಂಗಳೂರಿನ ಪೀಣ್ಯದಲ್ಲಿನ ಸರಕಾರಿ ಶಾಲೆಯಲ್ಲಿ, ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿಕೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಭಾಗದಲ್ಲಿ ಓದಿ ಬೆಂಗಳೂರು ಯೂನಿವರ್ಸಿಟಿಯಿಂದ ಕಾಮರ್ಸ್ ಪದವಿ ಪಡೆಯುತ್ತಾರೆ. ೨೩ ನೆಯ ವಯಸ್ಸಿಗೆ ಕೆಲಸದ ಮೇಲೆ ದೇಶವನ್ನ ತೊರೆದು ದುಬೈ ಸೇರುತ್ತಾರೆ. Read More...
nil
Morgan Housel
ಈ ಕಿರುನಾಟಕಗಳ ವಿಶೇಷತೆ ಏನು ಗೊತ್ತಾ ? ಇದು 3ಡಿ. ಕೇವಲ ಓದಿಯೂ ಖುಷಿ ಪಡಬಹುದು. ರೇಡಿಯೋ ನಾಟಕವಾಗಿಸಿಯೂ ಖುಷಿ ಪಡಬಹುದು ಮತ್ತು ರಂಗದ ಮೇಲೆ ಆಡಿಯೂ ಖುಷಿ ಪಡಬಹುದು. ಕೆಲವೇ ಕೆಲವು ಪಾತ್ರಗಳಿರುವುದರಿಂದ ಆಡುವವರಿಗೂ ಸುಲಭ. ಅದರಲ್ಲೂ ಶಾಲೆ, ಕಾಲೇಜುಗಳಲ್ಲಿ ಆಡುವುದಕ್ಕೆ, ರಾಜ್ಯೋತ್ಸವಾದಿ ಸಮಾರಂಭಗಳಲ್ಲಿ ಪ್ರದರ್ಶಿಸುವುದಕ್ಕೆ ಹೇಳಿ ಮಾಡಿಸಿದ ಹಾಗಿದೆ. ಅಲ್ಲಲ್ಲ, ಹೇಳಿ ಬರೆಸಿದ ಹಾಗಿದೆ. ಡುಂಡಿರಾಜರ ಶೈಲಿಯ ಪರಿಚಯವಿದ್ದವರು ನಾಟಕಗಳಲ್ಲಿ ಅವರ ಪಂಡ್ಗಳನ್ನು ಗುರುತಿಸಬಹುದಾದರೂ, ಇದರಲ್ಲಿ ಒಂದು ಸರ್ಪ್ರೈಸ್ ಎಲಿಮೆಂಟ್ ಕೂಡಾ ಇದೆ. ಏನು ಗೊತ್ತಾ? ಇವರು ದ ಕ ಆದರೂ ಕೆಲವು ಪ್ರಹಸನಗಳಲ್ಲಿ ಉಕ ಆಗಿದ್ದಾರೆ. ಅಂದರೆ ಉತ್ತರ ಕರ್ನಾಟಕದ ಭಾಷೆ ಬಳಸಿರೋದರಿಂದ ಈ ನಾಟಕಗಳು ಅಲ್ಲಿಯೂ ಜನಪ್ರಿಯವಾಗುವುದರಲ್ಲಿ ಸ್ವಲ್ಪವೂ ಸಂಶಯವಿಲ್ಲ. ಇಡೀ ಕರ್ನಾಟಕಕ್ಕೆ ಸಲ್ಲುವ ನಾಟಕಗಳಿವು. "ಡಿವೈಡ್ ৬০মে ರೂಲ್" ಅಂತಾರಲ್ಲ? ಅದರಲ್ಲಿ ಡುಂಡಿರಾಜ್ ಸಿದ್ಧಹಸ್ತರು. "ಡಿವೈಡ್ ಅಂಡ್ ರೂಲ್" ಅಂದರೆ ಒಡೆದಾಳುವ ನೀತಿ. ಇವರದ್ದು "ಪದಗಳನ್ನು" ಒಡೆದು ಆಡುವ ರೀತಿ. ಅಲ್ಲದೆ ಹೊಸ ಹೊಸ ಪದಗಳನ್ನೂ ಕನ್ನಡ ಭಾಷೆಗೆ ಕಾಣಿಕೆಯಿತ್ತಿದ್ದಾರೆ. ಉದಾಹರಣೆಗೆ ಸಿನಿಮಹಾತ್ಮ, ಶೇಗ್ ಬಹದ್ದೂರ್, ಭಯವದನ, ಬರಿಯಪ್ಪ, ಮೋಸಪತ್ರಿಕೆ ಇತ್ಯಾದಿ.
ಡಾ ಎನ್ ಗೋಪಾಲಕೃಷ್ಣ
ಎಚ್ ಡುಂಡಿರಾಜ್
ತನಗೆ ತಾನು ಬಹುತೇಕ ಅನುಕೂಲ ಕಲ್ಪಿಸಿಕೊಳ್ಳಲಿಕ್ಕಾಗಿ ಲೋಕವು ತನ್ನದೇ ಕೆಲಪಾಲನ್ನು ಪ್ರತಿಕೂಲಕ್ಕೆಂದು ಮೀಸಲಿಡುತ್ತದೆ. ಇಲ್ಲಿರುವ ಕೆಲವೇ ಕೆಲಮಂದಿಯೂ ಹೀಗೇ.. ಬಹುತೇಕರಿಗೆ ಸ್ವರ್ಗ ದಕ್ಕಿಸಲೆಂದು ನರಕದಂತಹ ಕೋಟಲೆಯನ್ನೂ ಒಪ್ಪಿ ಅಪ್ಪಿಕೊಳ್ಳುತ್ತಾರೆ. -ಫೈರುಪೀಸ್ ಫೀಸ್ ಕತೆಯ ಮುಮ್ಮಾತು
ತಾರಕ್ಕನನ್ನು ಮನೆಯ ಹೊರಕಟ್ಟೆಯಿಂದ ಹಿಡಿದು ಹಿತ್ತಲವರೆಗೂ ಹುಡುಕಿದ. ಎದೆಬಡಿತ ಹೆಚ್ಚಾಗುತ್ತಿದ್ದಂತೆ ಕಟ್ಟಕಡೆಯದಾಗಿ ದೇವರಮನೆಯ ಬಾಗಿಲು ದೂಡಿದ. ನಂದಾದೀಪದ ಬೆಳಕಲ್ಲಿ ತಾರಕ್ಕನ ಮುಖ ಕಂಡಿತು. ಸಮಾಧಾನಕ್ಕಿಂತ ಹೆಚ್ಚಾಗಿ ಅಚ್ಚರಿ ಆಯಿತು. ನಿಟ್ಟುಸಿರು ಬಿಟ್ಟ. ಮೊಣಕಾಲುಗಳ ಮೇಲೆ ಗದ್ದವನ್ನಿಟ್ಟುಕೊಂಡು ದೀಪವನ್ನೇ ದಿಟ್ಟಿಸುತ್ತಿದ್ದ ಆಕೆಯ ಕಣ್ಣುಗಳು, ಉನ್ನತ್ತ ಗಂಧರ್ವನೊಬ್ಬನ ಕೈಯಿಂದ ಜಾರಿಬಿದ್ದ ಕಪ್ಪು ದ್ರಾಕ್ಷಿಗಳನ್ನು ಹಿಡಿದಿಟ್ಟುಕೊಂಡು ಮತ್ತೆ ಅವನ ಬರುವಿಕೆಗಾಗಿ ಕಾಯುತ್ತಿವೆಯೇನೋ ಎಂಬಂತಿದ್ದವು. ಆ ನಿಶ್ಚಲ ಕಣ್ಣುಗಳನ್ನೇ ನೋಡುತ್ತ ಗೋಡೆಗಾತು ಕುಳಿತ. ಸ್ವಲ್ಪ ಹೊತ್ತಿನ ನಂತರ ತಾನೂ ಅದೇ ದೀಪ ನೋಡಹತ್ತಿದ. ತಾರಕ್ಕನ ಪ್ರಭೆಯೆದುರು ಅಲ್ಲಿದ್ದ ದೇವ-ದೇವತೆಯರು ತಮ್ಮ ಪ್ರಭಾವಳಿಗಳನ್ನು ಕಳೆದುಕೊಂಡು ಕೇವಲ ಪಟದಲ್ಲಿ ಲೋಹದಲ್ಲಿ ಮೂಡಿಸಿಕೊಂಡ ನಿರ್ಜೀವ ಆಕೃತಿಗಳಂತೆ ಕಂಡರು.
Showing 5341 to 5370 of 5590 results