ಪ್ರಿಯ ಪ್ರಸಾದ್ ಚತುರ್ಮುಖ ಬಸದಿಯ ಕಲ್ಲ ಮೇಲೆ ಕೂತು ಪುಟ್ಟ ಚೀಲದಿಂದ ಬಿಟು, ಚಕ್ಕುಲಿ, ಬನ್ನುಗಳನ್ನು ಮುಖದ ಬಣ್ಣ, ತುಟಿಯ ಕೆಂಪು ಹಾಳಾಗದಂತೆ ತಿನ್ನುವ ಮರಿ ಮಹಿಷಾಸುರ "ವೇಷದ ಸಂತು". ನಿಗೂಢ ಮಳೆಯ ಕಾಡಿನಲ್ಲಿ ಕಂಬಳಿಕೊಪ್ಪೆ ಹಾಕಿಕೊಂಡು, ಅದೃಷ್ಟಕ್ಕಾಗಿ ಕಾದವನಂತೆ, ಕಲ್ಲಣಬೆಗಾಗಿ ಅಲೆಯುವ ನಿಚ್ಚು, ತನ್ನ ಸಿರಿಕಂಠದ ಭಾಗವತಿಕೆಯ ಯಕ್ಷಬಿಂಬಕೆ ತಾನೇ ಮಾರು ಹೋಗಿ, ತನ್ನನ್ನೇ ಕಳೆದುಕೊಂಡು ಕಂಗಾಲಾದ ಗಿರಿಧರ, ಇಂಥವರ ಕತೆಗಳನ್ನು ಕಣ್ಣಿಗೆ ಕಟ್ಟುವಂತೆ ಹೇಳಿದ್ದೀಯ. ಮೇಲ್ನೋಟಕ್ಕೆ ಒಂದು ಬಗೆಯ ವರ್ಣನಾತ್ಮಕ ಗುಣ ಈ ನಿರೂಪಣೆಗಳಲ್ಲಿ ಎದ್ದು ಕಂಡರೂ, ಸೂಕ್ಷ್ಮವಾಗಿ ನೋಡಿದರೆ ಅದು ಆಯಾ ಜೀವಿಗಳ ಖಾಸಗೀ ಜೀವನದ ದಾರುಣತೆಯ ವಿರೋಧಾಭಾಸವನ್ನು ಧ್ವನಿಸುತ್ತದೆ. ಹಬ್ಬದ ನೆಪದಲ್ಲಿ ಪುರಾಣದ ವೇಷಗಳನ್ನು ತೊಟ್ಟುಕೊಂಡು ಮನೆಮನೆಗೆ ಕಾಣಿಕೆಗಾಗಿ ಅಲೆಯುವುದು, ಕಲ್ಲಣಬೆಯ ರುಚಿ ಏನೆಂದೇ ತಿಳಿಯದವ ಅದನ್ನು ಅಲೆದಾಡಿ ಹಕ್ಕಿ ತಂದು ತನಗಾಗಿ ಒಂದನ್ನೂ ಉಳಿಸಿಕೊಳ್ಳದೇ ಪುಡಿಗಾಸಿಗೆ ಮಾರುವುದು, ಸಾರ್ವಜನಿಕರ ಕಣ್ಣಲ್ಲಿ ಏರುತ್ತ ಹೋದ ಕಲಾವಿದ ಅತ್ಮಮೋಹದ ನರಕಕ್ಕೆ ಜಾರುವುದು, ಇಂಥ ವಿರೋಧಾಭಾಸಗಳು ಈ ಕತೆಗಳ ಮುಖ್ಯ ಲಕ್ಷಣಗಳಾಗಿ ನನ್ನನ್ನು ತಟ್ಟಿದವು. ಮೊದಲೇ ಅಸ್ಪಷ್ಟವಾಗಿಯಾದರೂ ಮನಗಂಡಿರುವ ಕತೆಯನ್ನು ಆರಾಮಾಗಿ “ಎಲೆಗೆ ಸುಣ್ಣ ಹಚ್ಚುತ್ತ ಹೇಳುವ ಶೈಲಿ" ನಿನ್ನದು. ಹೀಗಾಗಿ ಚೂರೂ ಹದ ತಪ್ಪಿದರೂ ವಿರೋಧಾಭಾಸದ ಆ ಅಜ್ಞಾತ ನಾಡಿಬಿಂದು ಎಲ್ಲೋ ಹಗುರಾಗಿಬಿಡಬಹುದು, ಅಥವಾ ಮರೆಯಾಗಿಬಿಡಬಹುದು. ನಿನಗೂ ಗೊತ್ತಿರದ ಸಂಗತಿಗಳು ಬಂದು ಸೇರಿಕೊಳ್ಳಲು ನೀನು ಬಾಗಿಲುಗಳನ್ನು ತೆರೆದಿಟ್ಟುಕೊಂಡಾಗ ಮಾತ್ರ ಹೊಸತೊಂದು ಅನಿರೀಕ್ಷಿತ, ಅಸಂಗತ ಅಂಶ ಬಂದು ನಿನ್ನನ್ನು ಚಕಿತಗೊಳಿಸಬಹುದು. ಗಿರಿಧರನಿಗೆ ಅನಿಸುವಂತೆ, ಕಥನವೂ ಸಹ ಕಾಣದ ಕಡಲಿನೆಡೆಗೆ ಚಲಿಸುತ್ತಿರುವ ನದಿಯಂತೆ, ಅದು ತನ್ನ ದಂಡೆಯನ್ನು ತಾನೇ ರೂಪಿಸಿಕೊಳ್ಳುತ್ತದೆ. ನಿನ್ನ ಬರವಣಿಗೆ ನಿನ್ನನ್ನು ಒರೆಗೆ ಹಚ್ಚುತ್ತಲೇ ಇರಲಿ, ಹೊಸ ಹೊಸ ಅಸಂಗತ, ಅನಿರೀಕ್ಷಿತ ತಿರುವುಗಳಿಗೆ ತೆರೆದುಕೊಳ್ಳುತ್ತ ಜೀವಜಾಲದೊಂದಿಗಿನ ನಂಟನ್ನು ಒಳಗೊಳ್ಳುತ್ತ ಪ್ರವಹಿಸಲಿ, ಜಯಂತ ಕಾಯ್ಕಿಣಿ
ಹಿರಿಯರಾದ ಕೊಡಸೆ ಸರ್. ನಾನು ಅದೆಷ್ಟೋ ಸಲ ನನ್ನಲ್ಲಿಯೇ ಅಂದುಕೊಂಡದ್ದಿದೆ. ಪ್ರತಿಭೆ ಮತ್ತು ಕಠಿಣ ಶ್ರಮ ಎರಡೂ ಒಟ್ಟಿಗೇ ಸೇರಿದರೆ ಏನಾಗಬಹುದು ಎಂಬುದಕ್ಕೆ ನೀವೊಂದು ತಾಜಾ ಉದಾಹರಣೆಯಾಗಿ ನಿಲ್ಲಬಲ್ಲರಿ!! ನೀವು ಪತ್ರಿಕಾ ಕ್ಷೇತ್ರದಲ್ಲಿ ನಿಮ್ಮ ಬರವಣಿಗೆಯಿಂದ, ಪ್ರಾಮಾಣಿಕ ಕೆಲಸದಿಂದ, ಕರ್ತೃತ್ವಶಕ್ತಿಯಿಂದ, ಜಾಣ್ಯ, ದಕ್ಷತೆಗಳಿಂದ, ಹುರುಪು, ಹುಮ್ಮಸ್ಸಿನಿಂದ, ನಿರಂತರ ಚಿಂತನಶೀಲತೆಯಿಂದ, ಕಳಕಳಿ-ಕಾಳಜಿಯಿಂದ. ಕರ್ತವ್ಯ ನಿಷ್ಠೆಯಿಂದ ಮಾಡಿರುವ ಸೇವೆ ಅನುಪಮವಾದುದು. ಪ್ರೊ. ಓಂಕಾರ ಕಾಕಡೆ
ಪ್ರಸನ್ನ ಅವರ ಪ್ರಮುಖ ಕಾಳಜಿ ಮನುಷ್ಯ ಭಿನ್ನ-ಭಿನ್ನ ಕಾಲಗಳಲ್ಲಿ ಹಿಮ ಸನ್ನಿವೇಶಗಳಲ್ಲಿ ಹೇಗೆ ಮತ್ತು ಎಷ್ಟು ಭಿನ್ನವಾಗಿ ನಡೆದುಕೊಳ್ಳುತ್ತಾನೆ ಎನ್ನುವುದನ್ನು ಅನ್ವೇಷಿಸುವುದು ಆಗಿದೆ. ಈ ಅನ್ವೇಷಣೆ ಸಾಧಾರಣವಾಗಿ ಮಧ್ಯಮ ವರ್ಗದ ಬದುಕಿನ ವ್ಯವಸ್ಥೆಯಲ್ಲಿ ಸಿಲುಕಿರುವ ಜನಗಳ ಮನೋಭಾವದ ಅನ್ವೇಷಣೆಯೇ ಆಗಿದೆ. ಈ ಗುಂಪಿನಲ್ಲಿ ಸರ್ಕಾರಿ ಮತ್ತು ವಿವಿಧ ಉದ್ಯೋಗಗಳಲ್ಲಿ ತೊಡಗಿಕೊಂಡವರು. ನಿವೃತ್ತರು, ರಾಜಿನಾಮೆ ಕೊಟ್ಟವರು ಮುಂತಾದವರೆಲ್ಲ ಇದ್ದಾರೆ. ಅವರು ಇರುವುದು ತಮ್ಮ ತಮ್ಮ ದೌರ್ಬಲ್ಯಗಳ ಪ್ರತೀಕಗಳಾಗಿಯೇ ಹೌದು. ದೌರ್ಬಲ್ಯಗಳನ್ನು ಎದುರುಗೊಳ್ಳುವ, ಅದನ್ನು ನಿರ್ವಿಣ್ಣರಾಗಿ ಒಪ್ಪಿಕೊಳ್ಳುವ, ಎದುರಿಸುವ ಎಲ್ಲ ಬಗೆಯ ಜನಗಳನ್ನು ನಾವು ಈ ಕಥೆಗಳಲ್ಲಿ ಮುಖಾಮುಖಿಯಾಗುತ್ತೇವೆ.
ವಿಶಿಷ್ಟ ಸಂವೇದನೆಗಳಿಂದ ರೂಪುಗೊಂಡ ಈ ಕಥೆಗಳನ್ನು ಒಂದು ಸೀಮಿತ ಸಾಹಿತ್ಯದ ವಾದದ ಚೌಕಟ್ಟಿಗೆ ತಂದು ಕೂಡಿಸುವದು ಸಾಧ್ಯವಾಗುವದಿಲ್ಲ. ಬಹುತೇಕ ಎಲ್ಲಾ ಕಥೆಗಳು ಭಾರತದ ಸಾಮುದಾಯಿಕ ಪ್ರಜ್ಞೆಯನ್ನು ಎತ್ತಿ ಹಿಡಿದಿವೆ
nil
...ಒಂದು ಶಾಸ್ತ್ರನಿರ್ಮಾಣಕ್ಕೆ ನೆರವಾಗಬಲ್ಲ ಪದಗಳ ಪ್ರಪಂಚವನ್ನೇ ಪರಿಚಯ ಮಾಡಿಕೊಡುವ 'ಪರಿಸರ ನಿಘಂಟು' ಇದೀಗ ಇಬ್ಬರು ತರುಣ ಮಿತ್ರರ ಸಾಹಸದ ಪರಿಣಾಮವಾಗಿ ಕನ್ನಡದಲ್ಲಿ ಮೊಟ್ಟಮೊದಲಿಗೆ ಸಿದ್ಧವಾಗಿದೆ. ...ಇದು ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಕೇವಲ ಪಾರಿಭಾಷಿಕ ಪದಗಳ ನಿಘಂಟಲ್ಲ; ಒಟ್ಟಾರೆಯಾಗಿ ಪರಿಸರ ವಿಜ್ಞಾನದ 'ಭಾಷಿಕ ನಿಘಂಟು', ಕನ್ನಡದಲ್ಲಿ ಪರಿಸರ ವಿಜ್ಞಾನವನ್ನು ತಿಳಿದುಕೊಳ್ಳಬೇಕೆನ್ನುವವರಿಗೆ, ಬರೆಯಬೇಕೆನ್ನುವವರಿಗೆ ಈ ಕುರಿತ ಜಾಗತಿಕ ತಿಳುವಳಿಕೆಯನ್ನು ಹಿಡಿದಿರಿಸಿದ ಭಾಷೆಯನ್ನು ಪರಿಚಯ ಮಾಡಿಕೊಡುವ ನಿಘಂಟು. ಆದ ಕಾರಣವೇ ಈ ನಿಘಂಟುಕಾರರ ಉದ್ದೇಶ, ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಯಾವುದೇ ಪದಕ್ಕೆ ಇರಬಹುದಾದ ಅರ್ಥವನ್ನು ಸೂಚಿಸಿ ವಿರಮಿಸುವಷ್ಟಕ್ಕೆ ಸೀಮಿತವಾಗಿಲ್ಲ.. -ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಡಾ. ಟಿ.ಎಸ್. ವಿವೇಕಾನಂದ.. ಪರಿಸರವಾದವನ್ನು ಸೃಜನಾತ್ಮಕವಾಗಿ ಪುನರಾವಲೋಕನಕ್ಕೊಳಪಡಿಸಿದ ಮಹತ್ವದ ಕೃತಿ 'ಭೂಮಿಗೀತೆ', ತೇಜಸ್ವಿಯವರೊಂದಿಗೆ ಕೂಡಿ ಮಾಡಿದ 'ಕಿರಿಯರಿಗಾಗಿ ಪರಿಸರ', ಭಾರತದ ವೃಕ್ಷಗಳನ್ನು ಕುರಿತು ನಿರ್ಮಿಸಿದ 'ಹಸಿರ ಕೊಳಲು', ಹಂಪಿ ವಿಶ್ವವಿದ್ಯಾಲಯದ ಡಿ.ಲಿಟ್ ಪದವಿಯನ್ನು ದೊರಕಿಸಿಕೊಟ್ಟ ಅಧ್ಯಯನದ ಪುಸ್ತಕರೂಪ 'ಪರಿಸರ ಕಥನ' ಇವರ ಮಹತ್ವದ ಕೃತಿಗಳಲ್ಲಿ ಕೆಲವು. ಹಲವಾರು ಬಹುಮಾನಿತ ಕಥೆ, ಪದ್ಯಗಳೊಂದಿಗೆ ಜಿಮ್ ಕಾರ್ಬೆಟ್ರ ಇಡೀ ಶಿಕಾರಿ ಕಥೆಗಳ ಕನ್ನಡ ರೂಪಾಂತರ ಇವರ ಹೆಸರಿನಲ್ಲಿದೆ. ಭೂಮಿಗೀತೆ ಕೃತಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಇವರ ಮಹತ್ವಾಕಾಂಕ್ಷೆಯ ಪ್ರಯತ್ನ 'ಪರಿಸರ ನಿಘಂಟು' ಭಾರತೀಯ ಭಾಷೆಗಳಲ್ಲಿಯೇ ಮೊದಲ ಪ್ರಯತ್ನ. ಇದು ಕನ್ನಡದ ಪರಿಸರ ಸಾಹಿತ್ಯದಲ್ಲಿಯೇ ಒಂದು ನಿರ್ಣಾಯಕ ಮೈಲುಗಲ್ಲು ಸಹ ಸಂಪಾದಕರಾದ ಶೇಷಗಿರಿ ಜೋಡಿದಾರ್ ಈ ಪ್ರಯತ್ನದ ಜೊತೆಗಾರ. -ಪ್ರೊ. ಕಿ.ರಂ. ನಾಗರಾಜ,
ಫಲ್ಗುಣಿ ಎಂಬ ಮಿಸ್ಟೀರಿಯಸ್ ಹುಡುಗಿ ಏನಾಗಬೇಕು ನನ್ನ ಬದುಕಿಗೆ? ಅಂದು ಅವಳ ಕಾರಣದಿಂದಲೇ ಸಮ್ಯಕ್ ನಿಂದ ಸಂಬಂಧ ಕಡಿದುಕೊಂಡೆ. ಇಂದು ಅವಳು ಕರೆದಿದ್ದಕ್ಕೆ ಮತ್ತದೇ ಹಳೆಯ ಜಾಗಕ್ಕೆ ಹೋಗುತ್ತಿದ್ದೇನೆ. ನಾವು ಭೇಟಿಯಾಗೋ ಪ್ರತಿ ವ್ಯಕ್ತಿಯೂ ಯಾವುದೋ ಉದ್ದೇಶಕ್ಕೆ ನಮಗೆ ಸಿಕ್ಕಿರುತ್ತಾರೆ ಅಂತಾರಲ್ಲ? ನಿಜವೇ? ಇರಲಾರದು. ನಮಗಾಗಿ ಯಾರು ಹೀಗೆಲ್ಲಾ ಪ್ಲಾನ್ ಮಾಡುತ್ತಾರೆ! ಎಲ್ಲವೂ ಕೋ-ಇನಸಿಡೆನ್ಸ್ ಅಷ್ಟೇ. ಲೈಫ್ ಇಸ್ ಅ ಕಲೆಕ್ಷನ್ ಆಫ್ ರಾಂಡಮ್ ಇನ್ಸಿಡೆನ್ಸ್ ಹೆಚ್ಚಿನ ಅರ್ಥಗಳನ್ನು ನಾವೇ ಕಂಡುಕೊಂಡು ಅದರೊಳಗೊಂದು ಸಣ್ಣ ಥ್ರಿಲ್ ಅನುಭವಿಸುತ್ತಿರುತ್ತೇವೆ ಮೇ ಬಿ?...
ಬದುಕಿಗೆ? ಅಂದು ಅವಳ ಕಾರಣದಿಂದಲೇ ಸಮ್ಯಕ್ ನಿಂದ ಸಂಬಂಧ ಕಡಿದುಕೊಂಡೆ. ಇಂದು ಅವಳು ಕರೆದಿದ್ದಕ್ಕೆ ಮತ್ತದೇ ಹಳೆಯ ಜಾಗಕ್ಕೆ ಹೋಗುತ್ತಿದ್ದೇನೆ. ನಾವು ಭೇಟಿಯಾಗೋ ಪ್ರತಿ ವ್ಯಕ್ತಿಯೂ ಯಾವುದೋ ಉದ್ದೇಶಕ್ಕೆ ನಮಗೆ ಸಿಕ್ಕಿರುತ್ತಾರೆ ಅಂತಾರಲ್ಲ? ನಿಜವೇ? ಇರಲಾರದು. ನಮಗಾಗಿ ಯಾರು ಹೀಗೆಲ್ಲಾ ಪ್ಲಾನ್ ಮಾಡುತ್ತಾರೆ! ಎಲ್ಲವೂ ಕೋ-ಇನಸಿಡೆನ್ಸ್ ಅಷ್ಟೇ. ಲೈಫ್ ಇಸ್ ಅ ಕಲೆಕ್ಷನ್ ಆಫ್ ರಾಂಡಮ್ ಇನ್ಸಿಡೆನ್ಸ್ ಹೆಚ್ಚಿನ ಅರ್ಥಗಳನ್ನು ನಾವೇ ಕಂಡುಕೊಂಡು ಅದರೊಳಗೊಂದು ಸಣ್ಣ ಥ್ರಿಲ್ ಅನುಭವಿಸುತ್ತಿರುತ್ತೇವೆ ಮೇ ಬಿ?...
ಇದು ಪುಟ್ಕತೆಯ ಲೋಕ. ಪುಟಪುಟದಲ್ಲೂ ಪುಟ್ಟಪುಟ್ಟ ಕತೆಗಳು, ಬೃಹತ್ತಾದುದನ್ನೇ ಹೇಳುವ ಕತೆಗಳು. ಅವರ ಕತೆ, ಇವರ ಕತೆ, ನಿಜದ ಕತೆ, ಕಟ್ಟುಕತೆ... ಎಷ್ಟೆಲ್ಲಾ ಕತೆಗಳು. ನಿಮಗೆ ಗೊತ್ತೇ, ಇಲ್ಲಿ ನಿಮ್ಮ ಕತೆಯೂ ಇದೆ! ಓದ್ಯೋಡಿ.
ಇಲ್ಲೊಂದು ಹೊಸ ಲೋಕವಿದೆ.. ಓಹ್! ಒಂದು ಭಾವಸಮುದ್ರದಲ್ಲಿ ಮುಳುಗೇಳುವುದು ಅಂದರೆ ಏನು ಎನ್ನುವುದು ಗೊತ್ತಾಗಬೇಕಾದರೆ ಪಿ ಚಂದ್ರಿಕಾ ಅವರ ಈ 'ಪ್ಯಾಲೆಟ್' ಓದಬೇಕು. 'ನಿಮ್ಮ ಚರಿತ್ರೆಯಲ್ಲಿ ನಮಗೆ ಜಾಗವಿಲ್ಲ' ಎಂದಾದಾಗ ಅವರು ಕಟ್ಟಿಕೊಡಲು ಹೊರಟಿದ್ದು ತನ್ನದೇ ಲೋಕವನ್ನು ಕಟ್ಟಿಕೊಟ್ಟ ಬರಹಗಳೆಲ್ಲವೂ ಅವರೇ ಬಣ್ಣಿಸಿಕೊಳ್ಳುವ ಹಾಗೆ ಅದು ತಾನು 'ಒಬ್ಬಳೆ ಆಡುವ ಆಟ'. ಚಂದ್ರಿಕಾ ಏನನ್ನೇ ಆದರೂ ತೀವ್ರವಾಗಿ ಅನುಭವಿಸುತ್ತಾರೆ. ಹಾಗಾಗಿಯೇ ಅವರ ಒಂದೊಂದು ಅನುಭವವೂ ಜೋಡಿ ರೆಕ್ಕೆ ಪಡೆದ ಬರಹಗಳಾಗಿಬಿಡುತ್ತದೆ. ಅವರ ಇನ್ನೊಂದು ಶಕ್ತಿ ಎಂದರೆ ಅವರು ತನ್ನ ಅನುಭವಕ್ಕೆ, ತನ್ನದೇ ಎನ್ನುವ ಅನುಭವಕ್ಕೆ ಅಕ್ಷರ ಮೂಡಿಸಲು ಇನ್ನೊಬ್ಬರ ಶಬ್ದಗಳ ಹಂಗಿಗೆ ಬೀಳುವುದೇ ಇಲ್ಲ, ತನ್ನದೇ ರೂಪಕಗಳನ್ನು ಕಟ್ಟಿಕೊಳ್ಳುತ್ತಾರೆ. ಅವರ ರೂಪಕಗಳು ಒಂದು ಸುಳಿಯಲ್ಲಿ ನಮ್ಮನ್ನು ಸಾಕಷ್ಟು ಕಾಲ ಸಿಕ್ಕಿಸಿ ತಿರುಗಿಸುತ್ತದೆ. ಈ 'ಪ್ಯಾಲೆಟ್' ನನ್ನನ್ನು ಹಲವು ಕಾಲ ತನ್ನ ತಿರುಗಣಿಯಲ್ಲಿ ಸಿಕ್ಕಿಸಿಕೊಂಡಿದೆ. ಶಾಶ್ವತ ಭಾವವೊಂದು ಎದೆಯಲ್ಲಿ ಮೊಳೆಯುವುದು ಅದೃಷ್ಟ ಎನ್ನುತ್ತಾರೆ ಚಂದ್ರಿಕಾ. 'ಪ್ಯಾಲೆಟ್' ಓದಿದಮೇಲೆ ಅಂತಹ 'ಅದೃಷ್ಟ' ನನ್ನದಾಗಿದೆ. ಇದನ್ನು ಓದಿದ ನಂತರ ನಿಮಗೂ ಆ ಅದೃಷ್ಟ ಒಲಿಯಲಿದೆ.
"ನಮ್ಮ ಪ್ರೀತಿಪಾತ್ರರು ಸಾಧ್ಯವಾದಷ್ಟು ಕಾಲ ರಕ್ತಮಾಂಸದ ನಡುವೆ ಇರಲಿ ಎಂದು ಬಯಸುವುದೇ ನಿಜಕ್ಕೂ ಸ್ವಾರ್ಥ ಬಯಕೆ. ಇದು ನಮ್ಮ ದೌರ್ಬಲ್ಯದಿಂದ ಹುಟ್ಟಿಕೊಂಡಿದ್ದು ಅಥವಾ ಕಾಯವನ್ನು ತೊರೆದ ಬಳಿಕ ಅತ್ಯದ ಉಳಿವಿನ ಬಗ್ಗೆ ಇರುವ ನಂಬಿಕೆಯ ಫಲ. ಅಕಾರವು ಬದಲಾಗುತ್ತ ಬದಲಾಗುತ್ತ ಅಳಿದು ಹೋಗುತ್ತದೆ. ಆದರೆ ಮಾರ್ಗದರ್ಶಿಯಾದ ಚೈತನ್ಯವು ಬದಲಾಗುವುದೂ ಇಲ್ಲ, ಅಳಿದು ಹೋಗುವುದೂ ಇಲ್ಲ. ಪರಿಶುದ್ಧವಾದ ಪ್ರೀತಿಯು ಭೌತಿಕವಾದ ಕಾಯವನ್ನು ಮೀರಿ ಅಂತರಾತ್ಮವನ್ನು ಸೇರಿಕೊಂಡಾಗ ಅಗಣಿತ ಕಾಯಗಳಲ್ಲಿ ಇರುವ ಎಲ್ಲ ಜೀವಗಳಲ್ಲಿ ಏಕೀಭವಿಸುತ್ತದೆ..."
ಕಾವ್ಯದಂತೆ, ಸಣ್ಣಕಥೆಯಲ್ಲೂ ಲಕ್ಷಣರಾವ್ ಸದ್ಯ ಬಂಡಾಯಗಳ ಹಣೆಪಟ್ಟಿಗೆ ದಕ್ಕುವವರಲ್ಲ, ನವ್ಯದ ಅಂತರ್ಮುಖಿಕೆ, ಅಂತಃಪ್ರಶ್ನೆ, ಪ್ರಜ್ಞಾಪ್ರವಾಹತಂತ್ರ ಇದೇ ಮೊದಲಾದವು ಇವರ ಕಥೆಗಳಲ್ಲಿ ಕಾಣುವುದಿಲ್ಲ ಸಾಮಾಜಿಕ ಕಳಕಳಿಗಿಂತ ಭಿನ್ನ, ಅಂದರೆ ಸಾಮಾಜಿಕ ಸಮಸ್ಯೆಗಳಿಂದ ವಿಮುಖರು ಎಂದಲ್ಲ, ಸಾಮಾಜಿಕ ಸಮಸ್ಯೆಗಳು, ಕ್ರೂರ ವ್ಯವಸ್ಥೆ ಇವುಗಳ ಒತ್ತಡದಲ್ಲಿ, ದಮನಕಾರಿ ನಿಲುವುಗಳಲ್ಲಿ ಮನುಷ್ಯ ಸಂಬಂಧಗಳು, ಪ್ರೀತಿ ವಿಶ್ವಾಸಗಳು ಹೇಗೆ ನಲುಗಿಹೋಗುತ್ತಿವೆ ಎಂಬುದು ಲಕ್ಷಣರಾವ್ ಅವರ ಸೃಜನಶೀಲ ಮನಸ್ಸಿನ ಮುಖ್ಯ ಕಾಳಜಿಯಾಗಿದೆ. ಪ್ರೀತಿ, ಗಂಡು-ಹೆಣ್ಣಿನ ಪ್ರೀತಿ, ಜೀವನಪ್ರೀತಿ - ಇವು ವ್ಯವಸ್ಥೆಯ ಕ್ರೂರ ಹಿಡಿತದಲ್ಲಿ ನಲುಗಬಾರದು. ನಿಷೇಧ ಮೊದಲಾದ ನಕಾರಾತ್ಮಕ ಪ್ರವೃತ್ತಿಗಳಲ್ಲಿ ಪ್ರೀತಿ ಮುರುಟಿಹೋಗಬಾರದು ಎಂಬ ಆರೋಗ್ಯಕರ ಜೀವನದೃಷ್ಟಿ ಲಕ್ಷಣರಾವ್ ಅವರ ಕಥೆಗಳ ಹಿಂದಿನ ಮುಖ್ಯ ಮಾನವೀಯ ದನಿಯಾಗಿದೆ. ಲಕ್ಷಣರೊಳಗಿನ ಕವಿಯ ಆರೋಗ್ಯಕರ ಜೀವನದೃಷ್ಟಿ, ಸ್ಪಷ್ಟ ವಿಚಾರಗಳ ಜೊತೆಗೆ ಅವರ ಗದ್ಯವು ವಾಚ್ಯವಾಗದೆ ಧ್ವನಿಪೂರ್ಣವಾಗಿ ಕಾವ್ಯಕ್ಕೆ ಹತ್ತಿರವಾಗುತ್ತದೆ. ಜಿ.ಎಸ್.ಆಮೂರರು ಹೇಳಿರುವಂತೆ ಪ್ರಾಮಾಣಿಕತೆ, ತೀವ್ರತೆ ಮತ್ತು ಹೊಸದೃಷ್ಟಿ ಲಕ್ಷಣರಾವ್ ಅವರ ಕಾವ್ಯದ ಮುಖ್ಯ ಗುಣಗಳಾಗಿರುವಂತೆ ಕಥೆಗಳ ಮುಖ್ಯ ಗುಣವೂ ಆಗಿದೆ: ಶಕ್ತಿಯೂ ಆಗಿದೆ.
ಇದು ಕಡಲ ತೀರದ ಹುಡುಗ ಮತ್ತು ಬಯಲು ಸೀಮೆಯ ಹುಡುಗಿಯರ ನಡುವಿನ ಒಂದು ನವಿರಾದ ಪ್ರೇಮ ಕಥೆ. ಹದಿಹರೆಯವನ್ನು ಆಗಷ್ಟೇ ದಾಟಿರುವ ಆದರೆ ಬದುಕಿನ ಬಗ್ಗೆ ಇನ್ನೂ ಪ್ರೌಢರಾಗಬೇಕಾದ ಯುವ ಮನಸುಗಳ ಪ್ರೇಮಕಥೆ.
ಕೊಡಗಿನ ಆಂತರ್ಯದಲ್ಲಿ ಹುದುಗಿದ್ದ ಅರಣ್ಯಾಧಿಕಾರಿಯೊಬ್ಬರ ಜೀವನಗಾಥೆ. ಮಲೆನಾಡಿನ ಬದಲಾದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿ.
ಕೊಡಗಿನ ಆಂತರ್ಯದಲ್ಲಿ ಹುದುಗಿದ್ದ ಅರಣ್ಯಾಧಿಕಾರಿಯೊಬ್ಬರ ಜೀವನಗಾಥೆ. ಮಲೆನಾಡಿನ ಬದಲಾದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿ. ಹೆಣ್ಣು, ಹಣದ ಹಿಂದೆ ಹೋಗಿ ಕೊನೆಗೆ ಭಿಕ್ಷೆ ಬೇಡುವಂತಾದವನ ದುರಂತ! ದಾರಿ ತಪ್ಪಿದ ಮಗನಿಗಾಗಿ ಚಡಪಡಿಸುವ ಹಿರಿಜೀವಗಳ ದಾರುಣ ಪರಿಸ್ಥಿತಿ! ಗುಡ್ಡಗಾಡಿನ ವಾಸ್ತವತೆ ಮತ್ತು ಅಂತರಾತ್ಮ. ಮರಗಳ್ಳರಿಗೆ ಸಿಂಹಸ್ವಪ್ನವಾಗಿದ್ದ ಕೊಡಗಿನ ಅರಣ್ಯಾಧಿಕಾರಿಯೊಬ್ಬರ ರೋಚಕ ಕಥೆ (ಜೀವನಚರಿತ್ರೆ)
ಫೀನಿಕ್ಸ್ ಎಂದಾಕ್ಷಣ ಮನಸ್ಸಿನಲ್ಲಿ ಮೂಡುವ ಕಾಲ್ಡನಿಕವೂ ಪೌರಾಣಿಕವೂ ಆದ ಪಕ್ಷಿಯಿದೆಯಲ್ಲಾ ಅದರ ನಿಜ ಸ್ವರೂಪದ ಭಾವವನ್ನು ಜಂಚಿಸುವ ಸಾಮರ್ಥ್ಯವಿರುವ ಪುಸ್ತಕವಿದು. ಬೆಂಕಿಯಲ್ಲಿ ಸುಟ್ಟು ಕರಕಲಾಗುತ್ತಿದ್ದರೂ ತನ್ನ ಬೂದಿಯಿಂದಲೇ ಮರಳಿ ಚೈತನ್ಯವನ್ನು ಪಡೆದು ಉಲ್ಲಾಸದಿಂದ ಬದುಕುವ ಪಕ್ಷಿಯು ಇಲ್ಲಿನ ಅನೇಕ ಪಾತ್ರಗಳನ್ನು, ಅವರ ಬದುಕನ್ನೂ ಪ್ರತಿಜಂಚಿಸುತ್ತದೆ.
ಬಡತನವನ್ನು ಎದುರಿಸಿ ಗೆದ್ದ ಸಾಧಕರಿಗೆ ನನ್ನ ನಲ್ಮೆಯ ಮಾತು. ಸಾಧಕರ ಜೀವನ ಚರಿತ್ರೆಯನ್ನು ಓದಿದ ಹಲವರಿಗೆ, ಈ ಸಾಧಕರು ಸ್ಫೂರ್ತಿಯಾಗುತ್ತಾರೆ. ಆದರ್ಶದ ಜ್ಯೋತಿ ಆಗುತ್ತಾರೆ, ಜ್ಯೋತಿಯ ಬೆಳಕಿನಲ್ಲಿ ಕಾಣುವ ಮಾರ್ಗದಲ್ಲಿ ತಾವೂ ನಡೆಯಲು ಪ್ರಯತ್ನಿಸುತ್ತಾರೆ. ಬಡತನ ಸಂಕಷ್ಟಗಳು ಭಗವಂತನ ಶಾಲೆಯಲ್ಲಿ ಅವನಿಟ್ಟ ಒಂದು ಪರೀಕ್ಷೆ ಅದರಲ್ಲಿ ಪೂರ್ತಿ ಅಂಕಗಳೊಂದಿಗೆ ತೇರ್ಗಡೆಯಾದ ಸಾಧಕರ ಹೆಸರು ಅಜರಾಮರವಾಗಿ ನಿಲ್ಲುತ್ತದೆ. 84 ಲಕ್ಷ ಜನ್ಮಗಳನ್ನು ದಾಟಿ ಶ್ರೇಷ್ಠವಾದ ಮಾನವ ಜನ್ಮಕ್ಕೆ ಕಾಲಿರಿಸಿದ ನಮಗೆ ಬಡತನ, ಕಷ್ಟಗಳನ್ನು ಒಂದು ವರವಾಗಿ ಕೊಟ್ಟಿದ್ದಾನೆ ಭಗವಂತ. ಬಡತನ, ಸಂಕಷ್ಟಗಳನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಂಡ ನಮಗೆ ಪ್ರಪಂಚದ ನಾನಾ ವಿಚಾರಗಳು ಅರ್ಥವಾಗುತ್ತವೆ ನಾನಾ ಮನುಷ್ಯರ ಪರಿಚಯ ಆಗುತ್ತದೆ. ತಾಯಿ-ತಂದೆ ಬಂಧು ಬಳಗ, ಯಾರನ್ನು ನಂಬಬೇಕು ಬಿಡಬೇಕು, ಸ್ನೇಹಿತರು, ಮಕ್ಕಳು, ಗಂಡ ಹೆಂಡತಿ, ಎನ್ನುವ ಪಾತ್ರಗಳ ಪರಿಚಯವಾಗುತ್ತದೆ. ಇವೆಲ್ಲದರ ಮಧ್ಯೆ ನಮ್ಮ ಸಾಧನೆಯ ಬದುಕು ಸ್ವಾಭಿಮಾನದಿಂದ ನಿಸ್ವಾರ್ಥತೆಯಿಂದ ಪುಟಕ್ಕಿಟ್ಟ ಚಿನ್ನವಾಗುತ್ತದೆ. ನಾವು ಬಡವರು, ಕಷ್ಟಜೀವಿಗಳು ಎಂಬ ಭಾವನೆ ಸಲ್ಲದು. ಭಗವಂತನ ಪರೀಕ್ಷೆಗೆ ಒಳಪಟ್ಟಿರುವ ನಾವು ನಿಜಕ್ಕೂ ಧನ್ಯರು, ಮಾನ್ಯರು. ಈ ದಿಸೆಯಲ್ಲಿ ಇಂತಹ ಹಲವು ಸಾಧಕರನ್ನು ಪರಿಚಯಿಸುವ ಸ್ತುತ್ಯ ಕಾರ್ಯ ಮಾಡಿರುವ ಲೇಖಕರಾದ ಡಾ.ಶ್ರೀನಿವಾಸ ಪ್ರಸಾದ್ ಅವರಿಗೂ, ಈ ಕೃತಿಯನ್ನು ಪ್ರಕಟಿಸುತ್ತಿರುವ ವೀರಲೋಕ ಪ್ರಕಾಶನ ಸಂಸ್ಥೆಯ ವೀರಕಪುತ್ರ ಶ್ರೀನಿವಾಸ್ ಅವರಿಗೂ ಶುಭಾಶಯ.
Showing 121 to 150 of 261 results