• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಪದ್ದಣ ಮನೋರಮೆ | Paddanna Manorame

ಶಾಲಿನಿಯದ್ದು ರಕ್ತಗತೆ ಪ್ರತಿಭೆ. ಅಪ್ಪನಂತೆ ಅಕ್ಷರಗಳ ಜತೆ, ವಾಕ್ಯಗಳ ಜತೆ ಪದಗಳ ಜತೆ ಸರಸವಾಡುವ ಚತುರೆ ಕೀ ಬೋರ್ಡ ಮೇಲೆ ಬೆರಳಾಡಿಸಲು ಹೊರಟರೆ ಒಂದು ಸಶಕ್ತ ಲೇಖನ ಸಿದ್ಧವಾದಂತೆಯೇ ಹಾಗೆಯೇ ಹೊಂಚು ಹಾಕಿ ಕಥೆ ಬರೆಯಲು ಹೊರಟರೆ ಜೀವನನ್ಯುಸ್ ವಿಷಯಗಳು ಕೂಡ ರೂಪ ಪಡೆಯುವ ಚಮತ್ಕಾರವನ್ನೊಮ್ಮೆ ನೀವು ನೋಡಬೇಕು. - ಗಣೇಶ್ ಕಾಸರಗೋಡು ಖ್ಯಾತ ಸಿನಿ ಪತ್ರಕರ್ತರು, ಲೇಖಕರು.

₹150   ₹134

Buy Now
ಮುಂಬಯಿ ಮತ್ತು ಮಹಿಳೆ | Mumbai Mattu Mahile

ಶ್ರೀಮತಿ ಸುಖಲಾಕ್ಷಿಯವರು ಅನೇಕ ಬಗೆಯ ಲೇಖನಗಳನ್ನಿಲ್ಲಿ ಸಂಕಲಿಸಿದ್ದಾರೆ. ಮುಂಬಯಿಗಷ್ಟೇ ಸೀಮಿತಗೊಳಿಸದೆ, ಮಹಾರಾಷ್ಟ್ರದ ಹಿನ್ನೆಲೆಯೊಂದಿಗೆ, ಭಾಷೆ- ಸಂಸ್ಕೃತಿ, ಕೃಷಿಪದ್ಧತಿ, ರಂಗಭೂಮಿ, ನೃತ್ಯಕಲೆ ಇತ್ಯಾದಿ ಮತ್ತು ವಿವಿಧ ವಿಷಯಗಳ ಮೂವತ್ತಕ್ಕೂ ಮಿಕ್ಕಿದ ಬರೆಹಗಳಿವೆ. ಇದೊಂದು ಸಂಕೀರ್ಣ ಸಾಹಿತ್ಯ ಪ್ರಕಾರದ ಅಭಿವ್ಯಕ್ತಿ! ಇಲ್ಲಿ ಸಂದರ್ಭ ಚಿತ್ರಗಳಿವೆ, ವ್ಯಕ್ತಿಚಿತ್ರಗಳಿವೆ, ಸಾಮಾಜಿಕ ಹಿನ್ನೆಲೆಯ ಬರೆಹಗಳಿವೆ, ಸಾಧನಾ ಪಥಗಳ ದಾಖಲಾತಿಗಳೂ ಇವೆ! ವಿಶೇಷತಃ ಮಹಿಳೆಯರ ಸಾಧನೆಗಳನ್ನಿಲ್ಲಿ ರೇಖಿಸುವ ಪ್ರಯತ್ನವಿದೆ. ಏಷಿಯಾದ ಅತಿದೊಡ್ಡ ಕೊಳೆಗೇರಿಯೆನಿಸಿದ ಧಾರಾವಿಯ ವ್ಯಾವರ್ಣನೆಯೂ, ಕಾಮಾಟಿಪುರದ 'ಕೆಂಪುದೀಪ'ದ ಪ್ರದೇಶವೂ, ತೃತೀಯ ಲಿಂಗಿಗಳ ಪ್ರಸ್ತಾಪಗಳ ಸಹಿತ ಅನೇಕ ಸಾಂಸ್ಕೃತಿಕ ವಿಚಾರಗಳೂ ಇಲ್ಲಿ ಹಾದುಹೋಗುತ್ತವೆ. ಅನೇಕ ಲೇಖನಗಳ ಸಂಚಯನದ ಈ ಕೃತಿಯಲ್ಲಿ ಅತ್ಯಂತ ಸರಳವೂ " ನೇರವೂ ಆದ ಬಗೆಯಲ್ಲಿ ನಿರೂಪಿಸಿರುವ ಪ್ರಯತ್ನದ ಸಾಫಲ್ಯವನ್ನು ಕಾಣಬಹುದು

₹650   ₹579

Buy Now
ಲಿಂಗಾಯತ ಚಳುವಳಿ (2017-18) | Lingayata Chaluvali 2017-18

ಇತಿಹಾಸವನ್ನು ಯಥಾವತ್ತಾಗಿ ದಾಖಲಿಸುವುದು ಪ್ರಜ್ಞಾವಂತ ನಾಗರಿಕನ ಲಕ್ಷಣ. ಸಮಾಜೋಧಾರ್ಮಿಕ ಚಳುವಳಿಯೊಂದರ ರಾಜಕೀಯ ಮಾನ್ಯತೆಗಾಗಿ ಶತಶತಮಾನಗಳಿಂದ ನಡೆದ ಚಳುವಳಿಯ ಮುಂದುವರಿದ ಭಾಗವಾಗಿ ೨೦೧೭-೧೮ರ ಲಿಂಗಾಯತ ಚಳುವಳಿ ವಿಪ್ಲವವಾಗಿ ಮಾರ್ಪಟ್ಟು, ಮನುಕುಲದಲ್ಲಿ ವೈಚಾರಿಕತೆಯನ್ನು ಬಡಿದೆಬ್ಬಿಸಿ, ಯಶಸ್ಸು ಕಾಣುತ್ತಿರುವ ಹೋರಾಟದ ಏಳುಬೀಳುಗಳ ವಿವಿಧ ಮಜಲುಗಳನ್ನು ಓದುಗನ ಕಣ್ಣಿಗೆ ಕಟ್ಟಿದಂತೆ ಅಕ್ಷರಗಳ ಚಿತ್ರ ಚಿತ್ರಿಸುವ ಮಾಂತ್ರಿಕತೆಯ ಕಲೆ ಜಿ. ಬಿ. ಪಾಟೀಲರಿಗೆ ಸಿದ್ದಿಸಿದೆ. ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಅಲ್ಪಸಂಖ್ಯಾತ ಧರ್ಮ ಮಾನ್ಯತೆ ಪಡೆಯುವ ಹೊಸ್ತಿಲಲ್ಲಿರುವ ಈ ಜನಾಂದೋಲನದ ಇತಿಹಾಸ ದಾಖಲಿಸುವ ಈ ಕೃತಿಗೆ ಅಭಿನಂದನೆ ಸಲ್ಲಿಸುವುದು ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷನಾದ ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ. ಕರ್ನಾಟಕ ಸರ್ಕಾರವು ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಿ, ಅದನ್ನು ಕೇಂದ್ರ ಸರ್ಕಾರದ ಒಪ್ಪಿಗೆಗಾಗಿ ಕೇಂದ್ರಕ್ಕೆ ರವಾನಿಸಿದೆ. ಸುಮಾರು ಆರು ವರ್ಷಗಳ ನಂತರ 'ಹಿಸ್ಟಾರಿಕಲ್ ಡಾಕ್ಯುಮೆಂಟರಿ' ರೂಪದಲ್ಲಿ ಈ ಗ್ರಂಥವನ್ನು ಪ್ರಕಟಿಸುತ್ತಿರುವುದು ಜಿ. ಬಿ. ಪಾಟೀಲರ ಸಾಧನೆಯ ಸಿಂಹಾವಲೋಕನದ ಬಗೆ ಹಾಗೂ ಮುಂದಿನ ಸಾಧನೆಯ ದಿಕ್ಕೂಚಿ. ಲೇಖನದ ಈ ಕೈಂಕರ್ಯ ಲಿಂಗಾಯತರಿಗೆ ಮಾತ್ರವಲ್ಲದೆ ಸರ್ವರಿಗೂ ಮಾರ್ಗದರ್ಶಿ ದೀವಿಗೆ. ಅವರನ್ನು ಬಲ್ಲ ನನಗೆ ಈ ಕಾರ್ಯ ಸಾಧನೆ ಸಂತೋಷವನ್ನುಂಟು ಮಾಡಿದೆ ಎನ್ನುತ್ತ ಶುಭಹಾರೈಸುವೆ. - ಬಸವರಾಜ ಹೊರಟ್ಟಿ ( ಸಭಾಪತಿ, ಕರ್ನಾಟಕ ವಿಧಾನ ಪರಿಷತ್ತು )

₹450   ₹400

Buy Now