ಕನ್ನಡ ಪ್ರೇಮಕಾವ್ಯಗಳಲ್ಲಿ ಇದೊಂದು ವಿಲಕ್ಷಣವಾದ ನಾಟ್ಯದ ರಚನೆ... ಕನ್ನಡ ಕಾವ್ಯಪ್ರಪಂಚಕ್ಕೆ ಈ ದಿನಗಳಲ್ಲಿ ಪ್ರವೇಶ ಮಾಡಿರುವ ಈ ಪದ್ಯ ಘನವಾದ ಒಂದು ಅನುಭವವನ್ನು ಸರಳವಾಗಿಯೇ ಅಭಿವ್ಯಕ್ತಗೊಳಿಸುತ್ತದೆ. ಬೇಂದ್ರೆಯವರು ಹೇಳುತ್ತಾರಂತೆ: “ಭಾಷೆ ಬೆದರಿ ಕಾವ್ಯವಾಗುತ್ತದೆ.” ತೇಜಶ್ರೀ ಕವನದಲ್ಲಿ ಭಾಷೆ ಬೆದರಿ, ಬೆವರಿ, ಮಿಂಚಿ, ಮಳೆಗರೆದು ಸುಖದ ಅನುಭವವನ್ನೂ, ಸಾವಿನ ಅನುಭವವನ್ನೂ, ಮರುಹುಟ್ಟಿನ ವಿಸ್ಮಯವನ್ನೂ ಕೊಡುತ್ತ ಕಾವ್ಯವಾಗುತ್ತದೆ. ಯು.ಆರ್.ಅನಂತಮೂರ್ತಿ