Nil
ಅವರು ನಮ್ಮ ಒಗ್ಗಟ್ಟನ್ನು ಮುರಿಯಲು ಸುಲಭ ದಾರಿ ಕಂಡುಕೊಂಡಿದ್ದಾರೆ. ಅದು ಸಿಂಪಲ್ ದಾರಿ. ನಮಗೂ ಗೊತ್ತಿರುವ ದಾರಿ! ಆದರೂ ನಾವು ಎಚ್ಚೆತ್ತುಕೊಂಡಿಲ್ಲ! ಒಮ್ಮೆ ಧರ್ಮ, ಇನ್ನೊಮ್ಮೆ ಜಾತಿ, ಮತ್ತೊಮ್ಮೆ ಲಿಂಗ, ಮಗದೊಮ್ಮೆ ಬಣ್ಣ ಹೀಗೆ ಒಂದಲ್ಲ ಒಂದು ಬಾಂಬುಗಳನ್ನು ನಮ್ಮ ನಡುವೆ ತಂದಿಡುತ್ತಲೇ ಇರುತ್ತಾರೆ. ಆ ಬಾಂಬಿಗೆ ಸಿಡಿಯುವ ಶಕ್ತಿ ಇದೆಯಾ? ಸಿಡಿದರೆ ಎಷ್ಟು ಜನ ಆಹುತಿಯಾಗಬಹುದು? ಆ ಬಾಂಬನ್ನು ನಿಷ್ಕ್ರಿಯಗೊಳಿಸುವ ದಾರಿ ಯಾವುದು? ಎಂಬ ಸಣ್ಣಪುಟ್ಟ ಆಲೋಚನೆಗಳೂ ನಮ್ಮ ಮನಸ್ಸನ್ನು ಕದಡುವುದಿಲ್ಲ. ಹೊರತಾಗಿ ಬಾಂಬಿನ ಬಗ್ಗೆ ಹರಡುವ ಊಹಾಪೋಹಗಳಿಗೆ ಕಿವಿ ಕೊಡುತ್ತೇವೆ. ಕೇಳಿದ್ದೆಲ್ಲಾ ಸತ್ಯ ಅನ್ನುವಹಾಗೆ ಒಂದಷ್ಟು ದಿನ ಹಾರಾಡುತ್ತೇವೆ. ಅಲ್ಲಿಗೆ ಇನ್ನೊಂದು ಹೊಸ ಬಾಂಬು ಬಂದು ಬೀಳುತ್ತದೆ. ನಮ್ಮ ಚಿತ್ತ ಅತ್ತ ಹಾಯುತ್ತದೆ. ಹೀಗೇ ನಮ್ಮನ್ನು ಈ ಬಾಂಬುಗಳು ಸದಾ ಬ್ಯುಸಿಯಾಗಿರುವಂತೆ ಮಾಡುತ್ತವೆ. ನಮ್ಮ ಸಮಯ, ಹಣ, ತಕ್ತಿ, ಸೃಜನಶೀಲತೆ ಎಲ್ಲವೂ ಹಾಳಾಗುವುದು ಹೀಗೇ.. ಹಾಗಾದರೆ ಈ ಎಲ್ಲವನ್ನು ಬಳಸಿಕೊಂಡು ರ್ಯಾಂಬೊ ಏನು ಮಾಡುತ್ತಾನೆ? ಅಕ್ರಮಣ ಮಾಡುತ್ತಾನೆ!
ಇಂದಿನ ಮಕ್ಕಳಿಗೆ ಓದಿನ ರುಚಿ ಹತ್ತಿಸಿಬಿಟ್ಟರೆ, ಮುಂದಿನ ಎರಡು ತಲೆಮಾರುಗಳಿಗೆ ಓದುಗರ ಕೊರತೆ ಇರುವುದಿಲ್ಲ. -ವೀರಕಪುತ್ರ ಶ್ರೀನಿವಾಸ
ಮಲ್ಲಿಗೆಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಕುವೆಂಪು, ಬೇಂದ್ರೆ,ಕಾರಂತಜ್ಜರ ಬಣ್ಣಬಣ್ಣದ ಚಿತ್ರಗಳಿಂದ ಕೂಡಿದ್ದ ಶಾಲೆಯ ಗೋಡೆ, ಊರಿನ ಪರಿಸರ ಇವೆಲ್ಲಾ ಪುಸ್ತಕದ ಪುಟ ತಿರುಗಿಸುತಿದ್ದಂತೆ ಎಂಥವರನ್ನು ಕೂಡ ತಮ್ಮ ಬಾಲ್ಯಕ್ಕೆ ಮರಳಿ ಕರೆದೊಯ್ಯೋದರಲ್ಲಿ ಡೌಟೇ ಇಲ್ಲ.. ಅಷ್ಟು ಚೆಂದವಾಗಿ ಕಥೆಗೆ ಪೂರಕವಾಗಿ ಆಕರ್ಷ್ ಎಂ.ಆರ್ ಅವರು ಚಿತ್ರಗಳ ಬಿಡಿಸಿದ್ದಾರೆ. ತರಲೇ ಕಿತಾಪತಿ ತುಂಟಾಟಗಳಿಗೆ ಎತ್ತಿದ ಕೈ, ಓದುವುದರಲ್ಲೂ ಕೂಡ ಅಷ್ಟೇ ಫೇಮ್ಮಸ್ಸಾದ ಆರನೇ ತರಗತಿಯ ಐವರು ಮಕ್ಕಳು ಸೇರಿ ಒಂದು ತಂಡ ಕಟ್ಟಿಕೊಂಡು ಶಾಲೆಯ ಪ್ರತಿಭಾ ಕಾರಂಜಿಯಲ್ಲಿ ಸೋಲಾರ್ ಪ್ಯಾನೆಲ್ ತಯಾರಿಸಿ, ಗೆದ್ದು ಇಡೀ ಊರಿಗೆ ಮಾದರಿಯಾದ ಮಕ್ಕಳ ಸಾಹಸಮಯ ಎಳೆ ಹೊಂದಿರುವ ಕಾದಂಬರಿ ಮೂರರಿಂದ ಹನ್ನೆರಡನೇ ವಯಸ್ಸಿನ ಮಕ್ಕಳವರೆಗೂ ಒಂದೊಳ್ಳೆ ಕಥೆಯ ಜೊತೆಗೆ ಸೋಲಾರ್ ಪ್ಯಾನಲ್ ಹೇಗೆ ತಯಾರಿಸುತ್ತಾರೆ, ಅದರ ಕಾರ್ಯವೈಖರಿ ಹೇಗೆ? ಪ್ಯಾನಲ್ನ ಮುಖ್ಯ ಕೆಲಸವೇನು? ಈರುಳ್ಳಿ ಕತ್ತರಿಸಿದಾಗ ಕಣ್ಣಲ್ಲೇಕೆ ನೀರು ಬರುತ್ತೆ ಹೀಗೆ ವಿಜ್ಞಾನದ ಪಾಠವನ್ನು ತಿಳಿಸುತ್ತದೆ.
nil
Showing 1 to 30 of 32 results