nil
ಸಾಧಕರ ಬದುಕುಗಳು ನಮ್ಮ ಬದುಕನ್ನು ಎತ್ತರಿಸಿಕೊಳ್ಳುವುದಕ್ಕೆ, ಉದಾತ್ತೀಕರಿಸಿಕೊಳ್ಳುವುದಕ್ಕೆ ನಿದರ್ಶನ, ಪ್ರೇರಣೆ ಮತ್ತು ಮಾರ್ಗದರ್ಶನಗಳನ್ನು ನೀಡುತ್ತವೆ. ನಮ್ಮ ನಾಡಿನಲ್ಲಿ ಅನೇಕ ಮಂದಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರಿಗೆ ಅವರೇ ಗುರುವಾಗಿದ್ದಾರೆ. ಈ ನಿಟ್ಟಿನಲ್ಲಿ ಡಿ.ವಿ.ಜಿ.ಯವರ ಮಂಕುತಿಮ್ಮನ ಕಗ್ಗದ ಸಾಲುಗಳು ನೆನಪಾಗುತ್ತವೆ. 'ನಿನಗಾರು ಗುರುವಹರು? ನೀನೊಬ್ಬ ತಬ್ಬಲಿಗ ಉಣುತ ದಾರಿಯ ಕೆಲದಿ ಸಿಕ್ಕಿದೆಂಜಲನು ದಿನವ ಕಳೆ, ಗುರು ಶಿಷ್ಯಪಟ್ಟಗಳು ನಿನಗೇಕೆ? ನಿನಗೆ ನೀನೇ ಗುರುವೊ ಮಂಕುತಿಮ್ಮ'. ಡಿ.ವಿ.ಜಿ.ಯವರು ಹೇಳುವಂತೆ ನಾವು ಪಡೆದ ಎಂಜಲು ಅಂದರೆ ಅನ್ಯರಿಂದ ದೊರೆತ ತಿಳಿವಳಿಕೆ. ಇದು ಸಾರ್ಥಕವಾಗಬೇಕಾದರೆ ನಮ್ಮ ಪ್ರಜ್ಞೆ ಜಾಗೃತವಾಗಿರಬೇಕು. ಅದಕ್ಕೆ “ನಿನಗೆ ನೀನೇ ಗುರು" ಎಂದಿದ್ದಾರೆ. ಅರಿವಿನ ಬೆಳಕಾಗಿ ದಾರಿ ತೋರುವ ಗುರು ನಮ್ಮೊಳಗೆ ಇದ್ದಾನೆ. ಅಂತರಂಗದ ಆತ್ಮಸಾಕ್ಷಿಗಿಂತ ಮಿಗಿಲಾದ ಜ್ಞಾನ ಬೇರೊಂದಿಲ್ಲ. ನಮ್ಮೊಳಗಿನ ಪ್ರಜ್ಞೆ ಜಾಗೃತವಾಗದಿದ್ದರೆ ನಾವು ಪಡೆದ ಜ್ಞಾನವೆಲ್ಲವೂ ವ್ಯರ್ಥವಾಗುತ್ತದೆ. ಗುರುಶಿಷ್ಯ ಪಟ್ಟಗಳನ್ನು ಬಿಟ್ಟು ನಮಗೆ ನಾವೇ ಬೆಳಕಾಗಬೇಕು, ಸ್ಫೂರ್ತಿಯ ಸೆಲೆಯಾಗಬೇಕು, ಪ್ರೇರಣೆಯ ಅಲೆಯಾಗಬೇಕು. ಈ ಶಕ್ತಿಯು ಇಂತಹ ಸಕಾರಾತ್ಮಕ ದೃಷ್ಟಿಯಿಂದಲೇ ಜೀವನ ಸಾರ್ಥಕವಾಗುವುದಲ್ಲವೇ? ಕನ್ನಡ ನಾಡಿನ ವಿವಿಧ ಕ್ಷೇತ್ರಗಳ ಸಾಧಕರ ಕುತೂಹಲಕಾರಿ ವಿವರಗಳ ಹಿನ್ನೆಲೆಯೊಂದಿಗೆ ಅವರ ವೈಶಿಷ್ಟ್ಯಗಳನ್ನು ಈ ಪುಸ್ತಕದಲ್ಲಿ ಪರಿಚಯಿಸಲಾಗಿದೆ. ಇಂದು ನಮ್ಮೆದುರು ಸಾಧನೆಗೆ ಅನೇಕ ಬಾಗಿಲುಗಳು ತೆರೆದಿವೆ. ಸಾಧನೆಯ ರಂಗ ಕೈಬೀಸಿ ಕರೆದಿದೆ. ಈ ಎಲ್ಲ ಅವಕಾಶಗಳನ್ನು ನಮ್ಮ ತಾರುಣ್ಯದ ಬಿಸುಪಿನಲ್ಲಿ ಇರುವವರು ಬಳಸಿಕೊಳ್ಳಲಿ ಎಂಬುದು ನನ್ನ ಪುಟ್ಟ ಆಸೆ. ಸಾಧನೆಯ ರಂಗಕ್ಕೆ ಅವರನ್ನು ಆಹ್ವಾನಿಸುವ ಸಣ್ಣ ಪ್ರಯತ್ನ ಈ ಪುಸ್ತಕ. ಇಲ್ಲಿನ ಸಾಧಕರ ಬದುಕು ಇಂದಿನ ತಲೆಮಾರಿಗೆ ಮಾದರಿಯಾಗಲಿ ಎಂದು ಆಶಿಸುತ್ತೇನೆ.
ಸಣ್ಣ ಸಣ್ಣ ಸಂಗತಿಗಳನ್ನು ಸಾಂದ್ರವಾಗಿ ಭಾವಪೂರ್ಣವಾಗಿಸುವ ಇಲ್ಲಿನ ಕಥೆಗಳು; ಚಂದದ ಬದುಕೊಂದಕ್ಕಾಗಿ ಹಂಬಲಿಸಿದಂತಿವೆ. ಹಿನ್ನೀರದಂಡೆಯಿಂದ ಮಹಾನಗರದ ಮಧ್ಯಕ್ಕೆ ತಂದು ನಿಲ್ಲಿಸಿದ ಕಥೆಗಾರ್ತಿಯ ಜೀವನಾನುಭವಗಳೇ ಕಥೆೆಗಳ ಹೂರಣವೆನಿಸುತ್ತದೆ. ಸಮಕಾಲೀನ ಸಂದಿಗ್ಧತೆಗಳ ಸೂಕ್ಷö್ಮ ಪದರುಗಳನ್ನು ಸಾವಧಾನದಿಂದ ಕಂಡರಸುವ ಕತೆಗಳು; ವಾಸ್ತವವನ್ನು ತದೇಕಚಿತ್ತದಿಂದ ದಿಟ್ಟಿಸಿವೆ. ಹೆಣ್ಣಿನ ಒಳತೋಟಿಗಳು ಆಧುನಿಕ ಅವಸ್ಥಾಂತರದ ಗರಡಿಯಲ್ಲಿ ಪಳಗಿ ಗಟ್ಟಿಪಾತ್ರಗಳಾಗಿ ಅರಳಿ ಹೊರಳಿವೆ. ಕನ್ನಡ ಕಥಾಲೋಕಕ್ಕೆ ಸೇರ್ಪಡೆಯಾಗಲೇಬೇಕಾದ ಕಥೆಗಳಿವು ಎನಿಸುತ್ತದೆ. - ಡಾ. ರತ್ನಾಕರ ಸಿ.ಕುನುಗೋಡು ಸಹಾಯಕ ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನಪೇಟೆ
‘ಮಲೆನಾಡಿನ ಯಕ್ಷಚೇತನಗಳು’ ಕೃತಿಯು ರವಿ ಮಡೋಡಿ ಅವರ ಲೇಖನ ಸಂಕಲನವಾಗಿದೆ. ಕೃತಿಗೆ ಮುನ್ನುಡಿ ಬರೆದಿರುವ ಡಿ.ಎಸ್. ಶ್ರೀಧರ ತಾಳಿಪಾಡಿ ಅವರು ‘ಈ ಲೇಖನ ಮಾಲಿಕೆಯು ವಾಟ್ಸಾಪ್, ಫೇಸ್ಬುಕ್ ನಲ್ಲಿ ಸರಣಿಯಾಗಿ ಮೂಡಿಬಂದ ಲೇಖನ ಸಂಕಲನವಾಗಿದೆ. ರವಿ ಅವರು ಯಕ್ಷಗಾನ ನೃತ್ಯವನ್ನು ಶಾಸ್ತ್ರೀಯವಾಗಿ ಕಲಿತು, ಅದಕ್ಕೆ ಸಂಬಂಧಿಸಿದ ಸಕಲವನ್ನೂ ಅಧ್ಯಯನ ಮಾಡಿ, ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಬೆಂಗಳೂರಿನಂತಹ ಯಕ್ಷಗಾನೀಯ ನೆಲದಲ್ಲಿ ನೆಲೆಯನ್ನು ಕಲ್ಪಿಸಿದ್ದಾರೆ. ಮುನ್ನೂರಕ್ಕೂ ಹೆಚ್ಚುಪ್ರಯೋಗಗಳನ್ನು ನಾಡಿನಾದ್ಯಂತ ನಡೆಸಿ ಹವ್ಯಾಸಿಯಾದರೂ ವೃತ್ತಿನಿರತರ ಪ್ರಾವೀಣ್ಯವನ್ನು ಸಾಧಿಸಿದ್ದಾರೆ. ಯಕ್ಷವಾಹಿನಿ ಮತ್ತು ಯಕ್ಷ ಸಿಂಚನ ಎಂಬೆರಡು ಸಮರ್ಥ ಸಂಸ್ಥೆಯ ಕರ್ಣಧಾರತ್ವವಹಿಸಿ ಎರಡು ಸಂಸ್ಥೆಗಳನ್ನು ಹೊತ್ತ ಆಂಜನೇಯ ಶಕ್ತಿಯ ಅನುಭಾವಿ ರವಿ. ಜೊತೆಗೆ ಫೋಟೋಗ್ರಫಿಯಂತಹ ಪ್ರವೃತ್ತಿಯಲ್ಲೂ ಪರಿಣತಿಯನ್ನು ಸಾಧಿಸಿದವರು. ರವಿ ಅವರು ಮಾಹಿತಿಗಳಿಗಾಗಿ ಅರಿವುಳ್ಳ ಹಿರಿಯರು, ಗೆಳೆಯರು, ಕಲಾವಿದರ ಮಕ್ಕಳು, ಬಂಧುಗಳು, ಕಲಾವ್ಯವಸಾಯಿಗಳು, ಕಲಾವಿದರ ಶಿಷ್ಯರು ,ಮುಂತಾದವರ ಸಂಪರ್ಕವನ್ನು ಸಾಧಿಸಿ ಅವರೊಂದಿಗೆಲ್ಲ ಚರ್ಚಿಸಿ ಬರೆದುದನ್ನು ಪರಿಣಿತರ ಗಮನಕ್ಕೆ ತಂದು ಮತ್ತೆ ಫೇಸ್ಬುಕ್, ವಾಟ್ಸಾಪ್ ನಲ್ಲಿ ಪ್ರಕಟಿಸಿ ಆಮೇಲೆ ಪುಸ್ತಕಕ್ಕಿಳಿಸಲು ಮನಸ್ಸು ಮಾಡಿದ್ದಾರೆ. ಈ ಕೆಲಸ ಸುಲಭದ್ದಲ್ಲ. ಕೇಳಿದರೂ ತಿಳಿದವರು ಸ್ಪಂದಿಸದೆ ಇರುವುದು ಅದೆಲ್ಲ ಬರೆಯುವಷ್ಟು ದೊಡ್ಡದಲ್ಲ ಎಂಬ ದೊಡ್ಡಸ್ತಿಕೆಯ ಮಾತಾಡುವುದು , ನಾಳೆ ಹೇಳುವೆ ನಾಡಿದ್ದು ಹೇಳುವೆ ಎಂದು ಸತಾಯಿಸುವುದು, ಹೇಳಿದರೆ ನಮಗೇನು ಲಾಭ ಇವನಿಗೇನೋ ಅನುಕೂಲವಿರಬೇಕೆಂದು ಊಹಿಸುವುದು ಮುಂತಾದ ಹಲವು ಆಡಚಣೆಗಳನ್ನು ದಾಟಿ ಮುಂದುವರಿಯ ಬೇಕಾಗುತ್ತದೆ. ಕಲಾವಿದರು ಜೀವಿಸಿದ್ದ ಕಾಲ ದೂರದೂರವಾದಷ್ಟೂ ಮಾಹಿತಿಗಳೂ ದೂರದೂರವಾಗುತ್ತವೆ. ಕಲಾವಿದನ ಕೊಡುಗೆ ದೊಡ್ಡದೇ ಇದ್ದರೂ ಅವರ ಉತ್ತರಾಧಿಕಾರಿಗಳಿಗೆ ಆಸಕ್ತಿಯೇ ಇಲ್ಲದಿರುವುದು ಬಹುದೊಡ್ಡ ತೊಡಕಾಗುತ್ತದೆ. ಈ ಎಲ್ಲ ಪ್ರಯತ್ನಗಳನ್ನು ಮಾಡುತ್ತಾ ಇಷ್ಟೊಂದು ಕಲಾವಿದರನ್ನು ಕುರಿತು ಇವರು ಸಂಗ್ರಹಿಸಿದ ಮಾಹಿತಿ ಯಕ್ಷಗಾನಕ್ಕೆ ಬಹುದೊಡ್ಡ ಕೊಡುಗೆಯಾಗಿದೆ’ ಎಂದಿದ್ದಾರೆ.
ಪ್ರಸ್ತುತ ಜಮಾನದಲ್ಲಿ ನಿಸ್ವಾರ್ಥ ಮನಸ್ಸಿನ ಯುವ ಪೀಳಿಗೆ ಕಾಣಸಿಗುವುದು ಅಪರೂಪ. ಎಲ್ಲೋ ನೋಡಿದ ಕೇಳಿದ ಆದರ್ಶಗಳನ್ನು ಪಾಲಿಸಿಕೊಂಡು ಬಂದಿರುವ ವ್ಯಕ್ತಿಯ ಚಿತ್ರಣ ನನ್ನ ಮನಸ್ಸಿನಲ್ಲಿ ಮೂಡಿತ್ತು. ಅದೇ ವ್ಯಕ್ತಿತ್ವವನ್ನು ಈ ಕಾದಂಬರಿಯಲ್ಲಿ ಒಂದು ಪಾತ್ರವನ್ನಾಗಿಸಿದೆ. ಅಂತಹ ಯುವಕನ ‘ಜೊತೆಯಾಗಿ ಬೆಳೆಯೋಣ’ ಎನ್ನುವ ಧ್ಯೇಯ ನನ್ನನ್ನು ಬಹಳವಾಗಿ ಕಾಡಿತ್ತು. ಇನ್ನೂ ಅಂತಹ ಆದರ್ಶ ಧ್ಯೇಯಗಳನ್ನು ಹೊತ್ತ ಯುವಕರು ನಮ್ಮ ನಡುವೆ ಇದ್ದಾರೆ ಎನ್ನುವ ಅಚ್ಚರಿಯಿಂದ ಈ ಕಾದಂಬರಿಯನ್ನು ಬರೆದೆ. ಈ ರೀತಿಯ ಯುವ ಪೀಳಿಗೆ ಇನ್ನಷ್ಟು ಬೆಳೆದರೆ ಗಾಂಧೀಜಿ ಯವರು ಕಂಡ ರಾಮರಾಜ್ಯದ ಕನಸು ನನಸಾದೀತು. ತನ್ನ ಗುರಿ ತಲುಪಿದ ಮೇಲೆಯೇ ಬಾಕಿ ವಿಚಾರಗಳೆಂದು ಸಂಯಮದಿAದ ವರ್ತಿಸಿ ತನ್ನ ಪ್ರೀತಿಯಲ್ಲಿಯೂ ಆದರ್ಶವನ್ನು ಮೆರೆದ ಆರ್ಯನ್ನ ಪಾತ್ರ, ಎಂದೂ ಎಲ್ಲೆ ಮೀರದ ಚಿಗುರುವಿನಂತಹ ಪಾತ್ರ ಓದುಗರಿಗೆ ಮುದ ನೀಡದಿರಲಾರದು.
ಇತ್ತೀಚೆಗೆ ಬರೆಯುತ್ತಿರುವ ಕತೆಗಾರರಲ್ಲಿ ನೀವು ಹೆಚ್ಚು ಇಷ್ಟವಾಗುತ್ತೀರಿ. ಮನುಷ್ಯರ ಮನಸ್ಸಿನೊಳಗೆ ನೀವು ಪ್ರವೇಶಿಸುತ್ತಿರುವ ರೀತಿ ನನಗೆ ಆಶ್ಚರ್ಯವನ್ನು ತಂದಿದೆ... ಮನುಷ್ಯನಿಗೆ ಅಂಥಾ ಹೇಳಿಕೊಳ್ಳುವಂತಹಾ ಗುರಿ-ಉದ್ದೇಶಗಳಿರುವುದಿಲ್ಲ. ಆತ ಭಾವ ಜೀವಿಯಾಗಿರುತ್ತಾನೆ. ಭ್ರಮಾಜೀವಿಯಾಗಿರುತ್ತಾನೆ. ಮನುಷ್ಯ ಜಗತ್ತು ಇವುಗಳಿಂದಲೇ ನಿರ್ಮಾಣವಾಗಿದೆ. ಆಗುತ್ತಲೂ ಇರುತ್ತದೆ. ನಿಮ್ಮ 'ನಿರ್ಗಮನ', 'ಒಂದುಹನಿ ಪ್ರೀತಿಗಾಗಿ', 'ಆ ಇನ್ನರ್ಧ', 'ನಾನು ನಾನಲ್ಲ', 'ಕಾಲ', 'ಚಿಟ್ಟೆ' ಹೀಗೆ ಹೆಚ್ಚು ಕಡಿಮೆ ಎಲ್ಲಾ ಕತೆಗಳೂ ನನಗೆ ಬಹಳ ಇಷ್ಟವಾದವು. ಮೇಲಿನ ಕತೆಗಳನ್ನು ಎರಡೆರಡು ಬಾರಿ ಓದಿದೆ. "ಹಾರಲು ಮರೆತ ಚಿಟ್ಟೆಗಳಂತೆ ಹೂವುಗಳು ಬಿದ್ದಿದ್ದವು' ಎಂಬ ವಾಕ್ಯ ಮತ್ತೆ ಮತ್ತೆ ನೆನಪಾಗುತ್ತಿರುತ್ತದೆ.
ತನ್ನ ಕಛೇರಿಯ ಸಮಯದ ನಂತರವೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸಿದ್ಧತೆ ಮಾಡುವ ವೃತ್ತಿ ಯಾವುದಾದರೂ ಇದ್ದರೇ ಅದು ಶಿಕ್ಷಕ ವೃತ್ತಿ ಮಾತ್ರ. ಆ ಕಾರ್ಯತತ್ಪರತೆಯ ಗೌರವ ನಮಗಿರಬೇಕು. ತಮ್ಮ ಸ್ವಂತ ಮಕ್ಕಳೊಡನೆ ಸಮಯ ಕೊಡಲಾಗದಿದ್ದರೂ ವಿದ್ಯಾರ್ಥಿಗಳೆಲ್ಲರನ್ನು ಮಕ್ಕಳಂತೆ ಪ್ರೀತಿಸಿ, ಪೋಷಿಸುವ ನಿಸ್ವಾರ್ಥ ಸೇವೆಯ ಅರಿವು ನಮಗಿರಬೇಕು. ನೂರಾರು ಕಣ್ಣುಗಳ ನಡುವೆ ನೊಂದು ತೇವವಾದ, ಸೋತು ಸೊರಗಿ ಹೋದ, ಆತ್ಮ ವಿಶ್ವಾಸ ಕಳೆದುಕೊಂಡು ಕುಗ್ಗಿ ಕಮರಿದ ಮನಸ್ಸುಗಳನ್ನು ಸದಾ ಹುರಿದುಂಬಿಸಿ, ಗೆಲುವಾಗುವ ದಾರಿ ತೋರಿಸಿ, ಕೈ ಹಿಡಿದು ಮುನ್ನಡೆಸಿ, ಭವ್ಯ ಭವಿಷ್ಯದ ಕನಸನ್ನು ಕಲ್ಪಿಸಿ ಬದುಕು ಬೆಳಗಿಸುವ ದಿವ್ಯ ದೃಷ್ಟಿಯನ್ನು ಸೃಷ್ಟಿಸುವ ಶಿಕ್ಷಕರ ಪಾತ್ರದ ಮಹತ್ವ ನಮಗೆ ತಿಳಿದಿರಬೇಕು. ಒಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಇಂತಹ ನಮ್ರತೆ, ಸದ್ಗುಣಗಳ ವಿವೇಕವನ್ನು ಜ್ಞಾನದ ಜೊತೆಗೆ ಕಲಿಸುವ ಮಹಾಗುರುವನ್ನು, ಸದಾ ಪೂಜ್ಯನೀಯ ಸ್ಥಾನದಲ್ಲಿ ನೋಡುವ ಹಾಗೂ ಸದ್ವಿಚಾರವನ್ನು ಕಲಿಸುವ ಜ್ಞಾನ ದೇಗುಲವೆಂಬ ಶಾಲೆಯನ್ನು ಕೈ ಮುಗಿದು ಗೌರವಿಸುವ ಮನವೆಂದೂ ಪ್ರಶ್ನಿಸುವ, ಅಪಮಾನಿಸುವ, ಅಣಕಿಸುವ, ಅಪಹಾಸ್ಯ ಮಾಡುವ ಕುತ್ಸಿತ ಸ್ಥಿತಿಗೆ ರೂಪಾಂತರವಾಗದಿರಲಿ.
Showing 31 to 54 of 54 results